Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಆರೋಪ: ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಕೆ

ಬಿಬಿಎಂಪಿ ವಾರ್ಡ್ ಪುನರ್ ​ವಿಂಗಡಣೆಯಲ್ಲಿ ಲೋಪದೋಷವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಹಲವು ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಆರೋಪ: ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 16, 2022 | 2:12 PM

ಬೆಂಗಳೂರು: ಬಿಬಿಎಂಪಿ ವಾರ್ಡ್ (BBMP Ward) ಪುನರ್​ ವಿಂಗಡಣೆಯಲ್ಲಿ ಲೋಪದೋಷವಾಗಿದೆ ಎಂದು ಆರೋಪಿಸಿ ಹೈಕೋರ್ಟ್ (High Court) ಏಕಸದಸ್ಯ ಪೀಠಕ್ಕೆ ಹಲವು ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ. ಕಾನೂನು ಬಾಹಿರವಾಗಿ ವಾರ್ಡ್​ಗಳನ್ನು ಪುನರ್ವಿಂಗಡಿಸಲಾಗಿದೆ. ಆಡಳಿತ ಪಕ್ಷದವರಿಗೆ ಅನುಕೂಲವಾಗುವಂತೆ ವಾರ್ಡ್ ರೂಪಿಸಲಾಗಿದೆ. ಅವೈಜ್ಞಾನಿಕವಾಗಿ ವಾರ್ಡ್​ಗಳ ಗಡಿ ಬದಲಿಸಲಾಗಿದೆ ಎಂದು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ.

ವಿರೋಧ ಪಕ್ಷದ ಶಾಸಕರಿರುವ ವಾರ್ಡ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಆಡಳಿತ ಪಕ್ಷದ ಶಾಸಕರಿರುವ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಮಾಜಿ ಮೇಯರ್ ಮಂಜುನಾಥ ರೆಡ್ಡಿ ಪರ ವಕೀಲ ಎಸ್.ಪೊನ್ನಣ್ಣ ವಾದ ಮಂಡಿಸುತ್ತಿದ್ದಾರೆ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್​ಗಳ ಪುನರ್​ ವಿಂಗಡಣೆ ಕರಡು ಪ್ರಕಟವಾಗಿದೆ. 2011ರ ಜನಸಂಖ್ಯೆ ಆಧಾರದ ಮೇಲೆ ಎಲ್ಲ 243 ವಾರ್ಡ್​ಗಳಿಗೂ ಮತದಾರರನ್ನು ವಿಂಗಡನೆ ಮಾಡಲಾಗಿದೆ. ಕೆಲ ವಾರ್ಡ್​ಗಳ ಮತದಾರರ ಸಂಖ್ಯೆಯಲ್ಲಿ ಹೆಚ್ಚು ಕಡಿಮೆ ಆಗಿರಬಹುದು. ಕೆಲ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚಾಗಿದ್ದರೆ, ಹಲವೆಡೆ ಕಡಿಮೆಯಾಗಿದೆ.

ನಗರದ ಹೊರವಲಯದ ಕ್ಷೇತ್ರಗಳಲ್ಲಿ ಹೆಚ್ಚು ವಾರ್ಡ್​ಗಳು ಸೇರ್ಪಡೆಯಾಗಿವೆ. ಎಲ್ಲ ವಾರ್ಡ್​ಗಳ ನಕಾಶೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ. ಎಲ್ಲ ವಾರ್ಡ್​ಗಳಿಗೂ ಸಾರ್ವಜನಿಕರ ಭಾವನೆ ಆಧರಿಸಿ ನಾಮಕರಣ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ರಸ್ತೆಗಳಿಗೆ ಗುಂಡಿ ಬಿದ್ದಿರುವ ಕುರಿತು ಕೆಲವರು ಟ್ವೀಟ್ ಮಾಡಿದ್ದಾರೆ. ಈಗ ಗುಂಡಿಗಳು ಬಿದ್ದಿರುವ ಜಾಗದಲ್ಲಿ ಮೊದಲಿನಿಂದಲೂ ಗುಂಡಿಗಳಿದ್ದವು. ಮೋದಿ ಬರುತ್ತಿರುವ ಕಾರಣ ಅವನ್ನು ರಿಪೇರಿ ಮಾಡಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ತನಿಖೆಯ ವರದಿಯನ್ನು ಮುಖ್ಯ ಕಾರ್ಯದರ್ಶಿಗೆ, ಪ್ರಧಾನಿ ಕಾರ್ಯಾಲಯಕ್ಕೆ ಕಳಿಸಲಾಗುವುದು. ಅಧಿಕಾರಿಗಳು ನಿನ್ನೆ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದರು. ಡಾಂಬರು ಕಿತ್ತು ಬರುತ್ತಿರುವುದನ್ನು ಗಮನಿಸಿದ್ದಾರೆ. ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದರು.

ಬೆಂಗಳೂರು ನಗರವು ಅತೀ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು 2001-2011ರ ಅವಧಿಯಲ್ಲಿ ಜನಸಂಖ್ಯೆಯ ಹೆಚ್ಚಳವು ಶೇ. 44ಕ್ಕಿಂತಲೂ ಮೀರಿ ದಾಖಲೆಯಾಗಿದೆ. 2011ರ ಜನಗಣತಿಯ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರದೇಶದಲ್ಲಿನ ಜನಸಂಖ್ಯೆ 84,43,675 ಇತ್ತೆಂದು ನಿಗದಿತವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 198 ವಾರ್ಡುಗಳ ಜನಸಂಖ್ಯೆಯಲ್ಲಿ ಅಸಮಾನತೆ ಸೃಷ್ಟಿಯಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು ಬಿಬಿಎಂಪಿಯ ವಾರ್ಡುಗಳನ್ನು 198 ರಿಂದ 243ಕ್ಕೆ ಹೆಚ್ಚಿಸಲಾಗಿದೆ.

ಜನಸಂಖ್ಯೆಯ ಏಕರೂಪತೆಯನ್ನು ಸಾಧಿಸುವ ಸಲುವಾಗಿ 243 ವಾರ್ಡುಗಳ ಸೀಮಾರೇಖೆಯನ್ನು ಗುರುತಿಸುವ ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರವು ಪುನರ್ವಿಂಗಡಣಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು BBMP Act 2020 (KARNATAKA ACT NO. 53 OF 2020 THE BRUHAT BENGALURU MAHANAGARA PALIKE ACT, 2020 FT PAR: G.O. No UDD 4 MLR 2014 dt.215.02.2014) ರಲ್ಲಿನ ಮಾನದಂಡಗಳನ್ನು ಅನುಸರಿಸಿ, 2011ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡುಗಳ ವಿಂಗಡಣೆ ಮಾಡಿ ಪ್ರತೀ ವಾರ್ಡಿನ ಗಡಿಗಳನ್ನು ಗುರುತಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್​ ಮಡಿ 

Published On - 2:02 pm, Tue, 16 August 22

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ