AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವದ ಒಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ

ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಆದೇಶದ ನಂತರ, ವಾರ್ಡ್ ಪುನರ್ವಿಂಗಡಣೆ ಮತ್ತು ಮತದಾರರ ಪಟ್ಟಿ ತಯಾರಿಕೆ ನಡೆಯಲಿದೆ, ಹಾಗೂ ಜನವರಿ ಅಥವಾ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜ್ಯೋತ್ಸವದ ಒಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ
ಬಿಬಿಎಂಪಿ, ಸುಪ್ರೀಂ ಕೋರ್ಟ್​
Ramesha M
| Updated By: ವಿವೇಕ ಬಿರಾದಾರ|

Updated on:Aug 04, 2025 | 2:18 PM

Share

ಬೆಂಗಳೂರು, ಆಗಸ್ಟ್​ 04: ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ (BBMP ward redistribution) ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ (Karnataka Government) ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಸೂರ್ಯಕಾಂತ್ ಅವರ ನೇತೃತ್ವದ ದ್ವಿಸದಸ್ಯ ಪೀಠ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಪೂರ್ಣಗೊಳಿಸಿ. ಬಳಿಕ, ವಾರ್ಡ್​ ಮತದಾರರ ಪಟ್ಟಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿದೆ.

ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ನವೆಂಬರ್​ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್​ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಅಫಿಡೆವಿಟ್ ಕೂಡಾ ಸಲ್ಲಿಕೆ ಮಾಡಿತ್ತು. ಚುನಾವಣಾ ಆಯೋಗ ನವೆಂಬರ್ ಬಳಿಕ ಚುನಾವಣೆ ನಡೆಸಲು ಎರಡು ತಿಂಗಳ ಸಮಯ ಕೇಳಿತ್ತು. ಈ ಹಿನ್ನೆಲೆಯಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಬೆಂಗಳೂರಿನ ಐದೂ ಪಾಲಿಕೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ನೋಡಿ: ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್

ವಾದ-ಪ್ರತಿವಾದ

ನವೆಂಬರ್ 1ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಲಾಗುವುದು. ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಬಿಬಿಎಂಪಿ ವಾರ್ಡ್​ ಪುನರ್ ವಿಂಗಡಣೆ ಬಳಿಕ ಚುನಾವಣೆ ನಡೆಸಲು 60ರಿಂದ 90 ದಿನ ಬೇಕೆಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಪ್ರತಿವಾದಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Mon, 4 August 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್