AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ರಿಟ್​ ವಜಾ: ಹೈಕೋರ್ಟ್​

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್​ ಅರ್ಜಿಗಳನ್ನು  ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿದೆ.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ರಿಟ್​ ವಜಾ: ಹೈಕೋರ್ಟ್​
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Updated By: ವಿವೇಕ ಬಿರಾದಾರ|

Updated on:Sep 16, 2022 | 5:34 PM

Share

ಬೆಂಗಳೂರು: ಬಿಬಿಎಂಪಿ (BBMP) ವಾರ್ಡ್ ಪುನರ್​ ವಿಂಗಡಣೆಯಲ್ಲಿ (BBMP ward restructuring) ಲೋಪದೋಷ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್​ ಅರ್ಜಿಗಳನ್ನು  ಹೈಕೋರ್ಟ್ (High court) ಏಕಸದಸ್ಯ ಪೀಠ ವಜಾ ಮಾಡಿದೆ. ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್, ಸತೀಶ್ ರೆಡ್ಡಿ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಗಳನ್ನು ವಜಾ ಮಾಡಿದೆ.

ಪ್ರತಿಪಕ್ಷಗಳ ಶಾಸಕರಿರುವ ಕ್ಷೇತ್ರಗಳ ವಾರ್ಡ್ ಸಂಖ್ಯೆ ಕಡಿತಗೊಳಿಸಲಾಗಿದೆ. ಆಡಳಿತ ಪಕ್ಷದ ಶಾಸಕರಿರುವ ವಾರ್ಡ್ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ವಾರ್ಡ್ ಪುನರ್ವಿಂಗಡಣೆಯನ್ನು ಪ್ರಶ್ನಿಸಿ ಅರ್ಜಿಸಲ್ಲಿಸಲಾಗಿತ್ತು. ಆದರೆ ಹೈರ್ಕೋರ್ಟ, ಎಲ್ಲಾ ಪಕ್ಷಗಳ ಸರ್ಕಾರಗಳೂ ತಮ್ಮ ಅನುಕೂಲದಂತೆ ಪುನರ್ವಿಂಗಡಣೆ ಮಾಡುತ್ತವೆ. ಬಿಬಿಎಂಪಿ ಚುನಾವಣೆ ಶೀಘ್ರ ನಡೆಯುವ ಅಗತ್ಯವನ್ನೂ ಗಮನಿಸಬೇಕು ಎಂದು ಹೈಕೋರ್ಟ್ ನ್ಯಾ.ಹೇಮಂತ್ ಚಂದನ್ ಗೌಡರ್ ಹೇಳಿ ಅರ್ಜಿಗಳನ್ನು ವಜಾ ಮಾಡಿದ್ದಾರೆ.

ಇನ್ನೂ ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್‌ 21ಕ್ಕೆ ಮುಂದೂಡಿದೆ. ಕೆಲ ಕ್ಷೇತ್ರಗಳಲ್ಲಿ ಎಲ್ಲಾ ವಾರ್ಡ್‌ಗಳು ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಹೀಗೆ ಮೀಸಲಾತಿ ನೀಡಲು ಸರ್ಕಾರದ ಮಾನದಂಡವೇನು? ಮೀಸಲಾತಿ ಪ್ರಶ್ನಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್​ಗಳ ಪುನರ್​ ವಿಂಗಡಣೆ ಕರಡು ಪ್ರಕಟವಾಗಿದೆ. 2011ರ ಜನಸಂಖ್ಯೆ ಆಧಾರದ ಮೇಲೆ ಎಲ್ಲ 243 ವಾರ್ಡ್​ಗಳಿಗೂ ಮತದಾರರನ್ನು ವಿಂಗಡನೆ ಮಾಡಲಾಗಿದೆ. ಕೆಲ ವಾರ್ಡ್​ಗಳ ಮತದಾರರ ಸಂಖ್ಯೆಯಲ್ಲಿ ಹೆಚ್ಚು ಕಡಿಮೆ ಆಗಿರಬಹುದು. ಕೆಲ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚಾಗಿದ್ದರೆ, ಹಲವೆಡೆ ಕಡಿಮೆಯಾಗಿದೆ.

ನಗರದ ಹೊರವಲಯದ ಕ್ಷೇತ್ರಗಳಲ್ಲಿ ಹೆಚ್ಚು ವಾರ್ಡ್​ಗಳು ಸೇರ್ಪಡೆಯಾಗಿವೆ. ಎಲ್ಲ ವಾರ್ಡ್​ಗಳ ನಕಾಶೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ. ಎಲ್ಲ ವಾರ್ಡ್​ಗಳಿಗೂ ಸಾರ್ವಜನಿಕರ ಭಾವನೆ ಆಧರಿಸಿ ನಾಮಕರಣ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ರಸ್ತೆಗಳಿಗೆ ಗುಂಡಿ ಬಿದ್ದಿರುವ ಕುರಿತು ಕೆಲವರು ಟ್ವೀಟ್ ಮಾಡಿದ್ದಾರೆ. ಈಗ ಗುಂಡಿಗಳು ಬಿದ್ದಿರುವ ಜಾಗದಲ್ಲಿ ಮೊದಲಿನಿಂದಲೂ ಗುಂಡಿಗಳಿದ್ದವು. ಮೋದಿ ಬರುತ್ತಿರುವ ಕಾರಣ ಅವನ್ನು ರಿಪೇರಿ ಮಾಡಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ತನಿಖೆಯ ವರದಿಯನ್ನು ಮುಖ್ಯ ಕಾರ್ಯದರ್ಶಿಗೆ, ಪ್ರಧಾನಿ ಕಾರ್ಯಾಲಯಕ್ಕೆ ಕಳಿಸಲಾಗುವುದು. ಅಧಿಕಾರಿಗಳು ನಿನ್ನೆ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದರು. ಡಾಂಬರು ಕಿತ್ತು ಬರುತ್ತಿರುವುದನ್ನು ಗಮನಿಸಿದ್ದಾರೆ. ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದರು.

ಬೆಂಗಳೂರು ನಗರವು ಅತೀ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು 2001-2011ರ ಅವಧಿಯಲ್ಲಿ ಜನಸಂಖ್ಯೆಯ ಹೆಚ್ಚಳವು ಶೇ. 44ಕ್ಕಿಂತಲೂ ಮೀರಿ ದಾಖಲೆಯಾಗಿದೆ. 2011ರ ಜನಗಣತಿಯ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರದೇಶದಲ್ಲಿನ ಜನಸಂಖ್ಯೆ 84,43,675 ಇತ್ತೆಂದು ನಿಗದಿತವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 198 ವಾರ್ಡುಗಳ ಜನಸಂಖ್ಯೆಯಲ್ಲಿ ಅಸಮಾನತೆ ಸೃಷ್ಟಿಯಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು ಬಿಬಿಎಂಪಿಯ ವಾರ್ಡುಗಳನ್ನು 198 ರಿಂದ 243ಕ್ಕೆ ಹೆಚ್ಚಿಸಲಾಗಿದೆ.

ಜನಸಂಖ್ಯೆಯ ಏಕರೂಪತೆಯನ್ನು ಸಾಧಿಸುವ ಸಲುವಾಗಿ 243 ವಾರ್ಡುಗಳ ಸೀಮಾರೇಖೆಯನ್ನು ಗುರುತಿಸುವ ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರವು ಪುನರ್ವಿಂಗಡಣಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು BBMP Act 2020 (KARNATAKA ACT NO. 53 OF 2020 THE BRUHAT BENGALURU MAHANAGARA PALIKE ACT, 2020 FT PAR: G.O. No UDD 4 MLR 2014 dt.215.02.2014) ರಲ್ಲಿನ ಮಾನದಂಡಗಳನ್ನು ಅನುಸರಿಸಿ, 2011ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡುಗಳ ವಿಂಗಡಣೆ ಮಾಡಿ ಪ್ರತೀ ವಾರ್ಡಿನ ಗಡಿಗಳನ್ನು ಗುರುತಿಸಿದೆ.

ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಕೆ

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಹಲವು ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ. ಕಾನೂನು ಬಾಹಿರವಾಗಿ ವಾರ್ಡ್​ಗಳನ್ನು ಪುನರ್ವಿಂಗಡಿಸಲಾಗಿದೆ. ಆಡಳಿತ ಪಕ್ಷದವರಿಗೆ ಅನುಕೂಲವಾಗುವಂತೆ ವಾರ್ಡ್ ರೂಪಿಸಲಾಗಿದೆ. ಅವೈಜ್ಞಾನಿಕವಾಗಿ ವಾರ್ಡ್​ಗಳ ಗಡಿ ಬದಲಿಸಲಾಗಿದೆ ಎಂದು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದರು.

ವಿರೋಧ ಪಕ್ಷದ ಶಾಸಕರಿರುವ ವಾರ್ಡ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಆಡಳಿತ ಪಕ್ಷದ ಶಾಸಕರಿರುವ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಮಾಜಿ ಮೇಯರ್ ಮಂಜುನಾಥ ರೆಡ್ಡಿ ಪರ ವಕೀಲ ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Fri, 16 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?