AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ ಆರ್‌ಆರ್‌ಆರ್ ಡ್ರೈವ್: ನಗರದಲ್ಲಿ 533 ಕೆಜಿ ಪ್ಲಾಸ್ಟಿಕ್ ಸಂಗ್ರಹ

ಪ್ಲಾಸ್ಟಿಕ್​​ ಕಡಿಮೆ ಬಳಕೆ ಮಾಡುವಂತೆ ಉತ್ತೇಜಿಸುವ ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮೇ 20 ರಿಂದ ಜೂನ್ 5 ರವರೆಗೆ ಆರ್​.ಆರ್​.ಆರ್​ ಡ್ರೈವ್ ಅನ್ನು ನಡೆಸಿತು.

ಬಿಬಿಎಂಪಿಯ ಆರ್‌ಆರ್‌ಆರ್ ಡ್ರೈವ್: ನಗರದಲ್ಲಿ 533 ಕೆಜಿ ಪ್ಲಾಸ್ಟಿಕ್ ಸಂಗ್ರಹ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 11, 2023 | 10:09 AM

Share

ಬೆಂಗಳೂರು: ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು (World Environment Day) ಆಚರಿಸಲಾಗುತ್ತದೆ. ಈ ವರ್ಷದ ಪರಿಸರ ದಿನದ ಥೀಮ್‌ “ಪ್ಲಾಸ್ಟಿಕ್‌ ಮಾಲಿನ್ಯಕ್ಕೆ ಪರಿಹಾರಗಳು”. ಪ್ಲಾಸ್ಟಿಕ್​​ ಕಡಿಮೆ ಬಳಕೆ ಮಾಡುವಂತೆ ಉತ್ತೇಜಿಸುವ ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೇ 20 ರಿಂದ ಜೂನ್ 5 ರವರೆಗೆ ಆರ್​.ಆರ್​.ಆರ್​ (Reduce, Reuse, Recycle) ಡ್ರೈವ್ ಅನ್ನು ನಡೆಸಿತು. ಈ ವೇಳೆ ಒಟ್ಟು 533 ಕೆಜಿ ಪ್ಲಾಸ್ಟಿಕ್, 3,273 ಪುಸ್ತಕಗಳು, 1,910 ಕೆಜಿ ಬಟ್ಟೆ, ಮತ್ತು ನಗರದ 49 ಕೇಂದ್ರಗಳಿಂದ 468 ಜೋಡಿ ಪಾದರಕ್ಷೆಗಳನ್ನು ಸಂಗ್ರಹಿಸಲಾಗಿದೆ.

ಹಸಿರು ದಳ, ಅನುಭೂತಿ ವೆಲ್ಫೇರ್ ಫೌಂಡೇಶನ್, ಸಮರ್ಥನಂ ಸೇರಿದಂತೆ ಏಳು ಸಂಪನ್ಮೂಲ ಸಂಸ್ಥೆಗಳ ಸಹಯೋಗದಲ್ಲಿ ಚಾಲನೆ ನೀಡಲಾಯಿತು. ಉತ್ತಮ ಸ್ಥಿತಿಯಲ್ಲಿರುವ ವಸ್ತುಗಳನ್ನು ಮರುಬಳಕೆ ಅಥವಾ ಮಾರಾಟ ಮಾಡಿದರೆ, ಇತರವುಗಳನ್ನು ಮರುಬಳಕೆಗಾಗಿ ಕಳುಹಿಸಲಾಗಿದೆ ಎಂದು ಹಸಿರು ದಳದ ಡಿಡಬ್ಲ್ಯೂಸಿಸಿ ವ್ಯವಸ್ಥಾಪಕ ಮತ್ತು ಸಂಯೋಜಕ ಚಿನ್ನಯ್ಯ ತಿಳಿಸಿದರು.

ಇದನ್ನೂ ಓದಿ: Bangalore Tirupati Helicopter: ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು-ತಿರುಪತಿ ಹೆಲಿಕಾಪ್ಟರ್​ ಸೇವೆ ಆರಂಭ, ಇಲ್ಲಿದೆ ದರ, ಸಮಯ

ಚೆನ್ನಾಗಿರುವ ಪುಸ್ತಕಗಳನ್ನು ಬನಶಂಕರಿಯಲ್ಲಿರುವ ಹಸಿರು ದಳದ ಸಂಸ್ಥೆ ನಿರ್ವಹಿಸುವ ಗ್ರಂಥಾಲಯಕ್ಕೆ ತೆಗೆದುಕೊಂಡು ಹೋಗಲಾಗಿದೆ. ಹರಿದ ಪುಸ್ತಕಗಳನ್ನು ಮರುಬಳಕೆಗೆ ಕಳುಹಿಸಲಾಗಿದೆ. ಉಪಯೋಗಿಸಬಹುದಾದ ಬಟ್ಟೆಗಳನ್ನು ಸೆಕೆಂಡ್ ಹ್ಯಾಂಡ್ ಸ್ಟೋರ್‌ಗಳಿಗೆ ನೀಡಲಾಯಿತು. ಅದೇ ರೀತಿ ಸಂಗ್ರಹಿಸಿದ ಎಲೆಕ್ಟ್ರಾನಿಕ್ ತ್ಯಾಜ್ಯವನ್ನು ಇ-ತ್ಯಾಜ್ಯ ಮಾರಾಟಗಾರರಿಗೆ ನೀಡಲಾಯಿತು ಎಂದು ಹೇಳಿದರು.

ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ರಾಷ್ಟ್ರವ್ಯಾಪಿ ಸ್ವಚ್ಛತಾ ಕಾರ್ಯಕ್ರಮವನ್ನು ಜಾರಿಗೆ ತರಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ನಿರ್ದೇಶನದೊಂದಿಗೆ “ಮೈ ಲೈಫ್, ಮೈ ಕ್ಲೀನ್ ಸಿಟಿ” ಅಭಿಯಾನದ ಭಾಗವಾಗಿ ಬಿಬಿಎಂಪಿ ಈ ಕಾರ್ಯಕ್ರಮವನ್ನು ಪರಿಚಯಿಸಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ಮತ್ತು ಸುಸ್ಥಿರ, ತ್ಯಾಜ್ಯ-ಮುಕ್ತ ಜೀವನಶೈಲಿಯನ್ನು ಉತ್ತೇಜಿಸಲು ಈ ಉಪಕ್ರಮವು ಗುರಿಯನ್ನು ಹೊಂದಿದೆ.

ನಾಗರಿಕರು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ವೃತ್ತಿಪರರನ್ನು ಆರು ವರ್ಗಗಳಾಗಿ ವಿಂಗಡಿಸಲಾಗಿದೆ. ಇವರು ಈ ಅಭಿಯಾನದಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು