AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಮಕಾರಂತ ಬಡಾವಣೆ ಸೈಟ್ ಹಂಚಿಕೆ ವಿವಾದ; ಫಲಾನುಭವಿಗಳಿಗೆ ಬಿಡಿಎಯಿಂದ ಗುಡ್​ ನ್ಯೂಸ್

ಶಿವರಾಮಕಾರಂತ ಬಡಾವಣೆ ಸೈಟ್ ಹಂಚಿಕೆ ವಿವಾದ ಪಡೆದುಕೊಂಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸದ್ಯ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಅದರಂತೆ ಸಿದ್ಧತೆ ನಡೆಸುತ್ತಿರುವ ಬಿಡಿಎ, ಗಣೇಶ ಹಬ್ಬದ ನಂತರ ಶಿವರಾಮಕಾರಂತ ಬಡಾವಣೆ ಸೈಟ್​ಗಳನ್ನು ಫಲಾನುಭವಿಗಳಿಗೆ ಹಂಚಲು ತೀರ್ಮಾನಿಸಿದೆ.

ಶಿವರಾಮಕಾರಂತ ಬಡಾವಣೆ ಸೈಟ್ ಹಂಚಿಕೆ ವಿವಾದ; ಫಲಾನುಭವಿಗಳಿಗೆ ಬಿಡಿಎಯಿಂದ ಗುಡ್​ ನ್ಯೂಸ್
ಶಿವರಾಮಕಾರಂತ ಬಡಾವಣೆ ಸೈಟ್ ಹಂಚಿಕೆ ಬಗ್ಗೆ ಮಾಹಿತಿ ನೀಡಿದ ಬಿಡಿಎ
Vinayak Hanamant Gurav
| Edited By: |

Updated on: Sep 15, 2023 | 2:27 PM

Share

ಬೆಂಗಳೂರು, ಸೆ.15: ಶಿವರಾಮಕಾರಂತ ಬಡಾವಣೆ ಸೈಟ್ (Shivaram karanth Layout sites) ಹಂಚಿಕೆ ವಿವಾದ ಪಡೆದುಕೊಂಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸದ್ಯ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಅದರಂತೆ ಸಿದ್ಧತೆ ನಡೆಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority), ಗಣೇಶ ಹಬ್ಬದ ನಂತರ ಶಿವರಾಮಕಾರಂತ ಬಡಾವಣೆ ಸೈಟ್​ಗಳನ್ನು ಫಲಾನುಭವಿಗಳಿಗೆ ಹಂಚಲು ತೀರ್ಮಾನಿಸಿದೆ.

ಬಡಾವಣೆಯ ವಾಸ್ತವ ಸ್ಥಿತಿ ತಿಳಿಸುವ ನಿಟ್ಟಿನಲ್ಲಿ ಬಿಡಿಎ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನ್ಯಾ. ಚಂದ್ರಶೇಖರ್ ಸಮಿತಿ ಮಾಹಿತಿ ನೀಡಿದೆ. ಶಿವರಾಮಕಾರಂತ ಬಡಾವಣೆಯನ್ನು ಒಟ್ಟು 3456 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗುತ್ತಿದೆ. 2008ರಲ್ಲಿ ಬಡಾವಣೆ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು.

ಬಡಾವಣೆಯ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ನ್ಯಾ. ಚಂದ್ರಶೇಖರ್ ಸಮಿತಿಯನ್ನು 2020 ರಲ್ಲಿ ರಚಿಸಲಾಗಿತ್ತು. 2018 ಆಗಸ್ಟ್ 3ರ ಒಳಗೆ ನಿರ್ಮಾಣ ಮಾಡಿದ ಕಟ್ಟಡಗಳನ್ನ ಸಕ್ರಮಗೊಳಿಸುವಂತೆ ಕೋರ್ಟ್ ಆದೇಶಿಸಿತ್ತು. ಅದರಂತೆ 7724 ಅರ್ಜಿಗಳು ಸಮಿತಿಗೆ ಸಲ್ಲಿಕೆಯಾಗಿದ್ದವು.

ಇದನ್ನೂ ಓದಿ: DK Shivakumar Speech: ಟ್ರಾಫಿಕ್, ಕಸ ಸಮಸ್ಯೆ ಸೇರಿದಂತೆ ಬ್ರ್ಯಾಂಡ್​ ಬೆಂಗಳೂರು ಕಟ್ಟುವ ಬಗ್ಗೆ​ ಡಿಕೆ ಶಿವಕುಮಾರ್ ಮನದಾಳದ ಮಾತು​

ಸಲ್ಲಿಕೆಯಾದ 7724 ಅರ್ಜಿಗಳ ಪೈಕಿ 5171 ಕಟ್ಟಡಗಳನ್ನ ಸಕ್ರಮಗೊಳಿಸಲಾಗಿತ್ತು. ಬಿಡಿಎ ಅನುಮೋದನೆಗೊಳಿಸಿದ 13 ಖಾಸಗಿ ಬಡಾವಣೆಗಳನ್ನ ಸಕ್ರಮಗೊಳಿಸಲಾಗಿದೆ. ಸಕ್ರಮಗೊಳಿಸಿದ ಕಟ್ಟಡಗಳ ಮಾಲೀಕರು ಬಿಡಿಎ ಸೂಚಿಸಿದ ಅಭಿವೃದ್ಧಿ ಶುಲ್ಕ ಪಾವತಿಸಿ ಸಕ್ರಮಗೊಳಿಸಬಹುದು.

ಬಡಾವಣೆಗೆ ಜಮೀನು ನೀಡಿದ ಭೂ ಮಾಲೀಕರಿಗೂ ಅಭಿವೃದ್ಧಿ ಪಡಿಸಿದ ಜಮೀನು ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅಗತ್ಯ ದಾಖಲೆ ನೀಡಿ ಭೂ ಮಾಲಿಕರು ಡೆವಲಪ್ ಲ್ಯಾಂಡ್ ಪಡೆಯೋಲು ಸೂಚನೆ ನೀಡಿದೆ.

ಸದ್ಯ, ಶಿವರಾಮಕಾರಂತ ಬಡಾವಣೆಯಲ್ಲಿ 34000 ನಿವೇಶನ ನಿರ್ಮಾಣ ಪ್ರಗತಿಯಲ್ಲಿದೆ. 4500 ಮೂಲೆ ನಿವೇಶನಗಳು ಹರಾಜು ಪ್ರಕ್ರಿಯೆ ಜಾರಿಯಲ್ಲಿದೆ. 34000 ನಿವೇಶನಗಳ ಪೈಕಿ 29000 ನಿವೇಶನ ಸಂಖ್ಯೆ ನೀಡುವ ಕಾರ್ಯ ಪ್ರಗತಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ