AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ

ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ
ಬಿಡಿಎ ಅಭಿವೃದ್ಧಿಪಡಿಸಿರುವ ಲೇಔಟ್ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 16, 2022 | 11:05 AM

Share

ಬೆಂಗಳೂರು: ನಗರದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bengaluru Development Authority – BDA) ನಗರದ ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದೆ. ಕೆರೆಗಳ ಅಂಗಳದಲ್ಲಿಯೇ ಬಡಾವಣೆಗಳನ್ನು ನಿರ್ಮಿಸುವ ಮೂಲಕ ಒತ್ತುವರಿಗೆ ಮುನ್ನುಡಿ ಬರೆದಿರುವುದೂ ಅಲ್ಲದೆ, ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

2013-14ರ ಅವಧಿಯಲ್ಲಿ 23 ಕೆರೆಗಳನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿರುವ ಬಿಡಿಎ ಲೇಔಟ್ ನಿರ್ಮಿಸಿತ್ತು. ಒತ್ತುವರಿಯನ್ನು ಕಾನೂನು ಬದ್ಧಗೊಳಿಸುವಂತೆ ಕೋರಿ 2015ರಲ್ಲಿ ಬಿಡಿಎ ಸರ್ಕಾರಕ್ಕೆ ಪತ್ರ ಬರೆದಿತ್ತು. ನಗರದಲ್ಲಿ ಜೀವಂತವಾಗಿದ್ದ 23 ಕೆರೆಗಳಿಗೆ ಮಣ್ಣು ತುಂಬಿದ್ದ ಬಿಡಿಎ ಅದರ ಮೇಲೆ ಬಡಾವಣೆ ನಿರ್ಮಿಸಿ, 3,530 ನಿವೇಶನಗಳನ್ನು ನಿರ್ಮಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಬಿಡಿಎ ಬರೆದಿರುವ ಪತ್ರವು ಇದೀಗ ಬಹಿರಂಗವಾಗಿದೆ.

23 ಕೆರೆಗಳು ತಮ್ಮ ಮೂಲ ಸ್ವರೂಪ ಕಳೆದುಕೊಂಡಿದೆ ಎಂಬ ನೆಪ ಹೇಳಿದ್ದ ಬಿಡಿಎ ಕೆರೆಯನ್ನು ಸಂಪೂರ್ಣ ಮುಚ್ಚಿಹಾಕಿತ್ತು. 1985ರಲ್ಲಿ ನಡೆದ ಲಕ್ಷ್ಮಣ ರಾವ್ ಸಮಿತಿ ನಡೆಸಿದ ಕೆರೆಗಳ ಸರ್ವೇ ವರದಿ ಆಧಾರದ ಮೇರೆಗೆ ಬಡಾವಣೆ ನಿರ್ಮಿಸಲಾಗಿತ್ತು. ಇದೀಗ ಈ ಕೆರೆಗಳಿದ್ದ ಭಾಗದಲ್ಲಿ ಸಣ್ಣ ಮಳೆಗೂ ಜನರು ಪ್ರವಾಹದ ಭೀತಿ ಎದುರಿಸುವಂತಾಗಿದೆ.

ಒತ್ತುವರಿಯಾಗಿರುವ ಕೆರೆಗಳ ವಿವರ

ಗೆದ್ದಲಹಳ್ಳಿ ಕೆರೆ (126 ನಿವೇಶನ), ಚಿಕ್ಕಮಾರನಹಳ್ಳಿ ಕೆರೆ (115 ನಿವೇಶನ), ಬಾಣಸವಾಡಿ ಕೆರೆ (67 ನಿವೇಶನ), ಚನ್ನಸಂದ್ರ ಕೆರೆ (222 ನಿವೇಶನ), ಶಿನಿವಾಗಿಲು ಅಮಾನಿಕೆರೆ (486 ನಿವೇಶನ), ಬಿಳೇಕಹಳ್ಳಿ ಕೆರೆ (312 ನಿವೇಶನ), ನಾಗಸಂದ್ರ ಚೆನ್ನಮ್ಮಕರೆ (328 ನಿವೇಶನ), ತಿಪ್ಪಸಂದ್ರ ಕೆರೆ 3ನೇ ಹಂತ (234 ನಿವೇಶನ), ತಿಪ್ಪಸಂದ್ರ ಕೆರೆ 2ನೇ ಹಂತ (13 ನಿವೇಶನ), ಅಗರ ಕೆರೆ (113 ನಿವೇಶನ), ಎಳ್ಳುಕುಂಟೆ ಕೆರೆ (161 ನಿವೇಶನ), ಕಾಚರಕನಹಳ್ಳಿ ಕೆರೆ (126 ನಿವೇಶನ), ಹುಳಿಮಾವುಕೆರೆ (153 ನಿವೇಶನ), ವೆಂಕಟರಾಯನಕೆರೆ (130 ನಿವೇಶನ), ನಾಗರಬಾವಿ ಕೆರೆ (37 ನಿವೇಶನ), ಚಳ್ಳಕೆರೆ (71 ನಿವೇಶನ), ದೊಮ್ಮಲೂರು ಕೆರೆ (10 ನಿವೇಶನ), ಮೇಸ್ತ್ರಿ ಪಾಳ್ಯ ಕೆರೆ (23 ನಿವೇಶನ), ಬೆನ್ನಿಗಾನಹಳ್ಳಿ ಕೆರೆ (18 ನಿವೇಶನ), ಹೆಣ್ಣೂರು ಕೆರೆ (434 ನಿವೇಶನ) ತಲಘಟ್ಟಪುರ ಕೆರೆ (94 ನಿವೇಶನ), ಕೇತಮಾರನಹಳ್ಳಿ ಕೆರೆ (230 ನಿವೇಶನ), ಮಂಗನಹಳ್ಳಿ ಕೆರೆ (27 ನಿವೇಶನ).

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ