AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ

ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ
ಬಿಡಿಎ ಅಭಿವೃದ್ಧಿಪಡಿಸಿರುವ ಲೇಔಟ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Sep 16, 2022 | 11:05 AM

Share

ಬೆಂಗಳೂರು: ನಗರದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bengaluru Development Authority – BDA) ನಗರದ ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದೆ. ಕೆರೆಗಳ ಅಂಗಳದಲ್ಲಿಯೇ ಬಡಾವಣೆಗಳನ್ನು ನಿರ್ಮಿಸುವ ಮೂಲಕ ಒತ್ತುವರಿಗೆ ಮುನ್ನುಡಿ ಬರೆದಿರುವುದೂ ಅಲ್ಲದೆ, ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

2013-14ರ ಅವಧಿಯಲ್ಲಿ 23 ಕೆರೆಗಳನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿರುವ ಬಿಡಿಎ ಲೇಔಟ್ ನಿರ್ಮಿಸಿತ್ತು. ಒತ್ತುವರಿಯನ್ನು ಕಾನೂನು ಬದ್ಧಗೊಳಿಸುವಂತೆ ಕೋರಿ 2015ರಲ್ಲಿ ಬಿಡಿಎ ಸರ್ಕಾರಕ್ಕೆ ಪತ್ರ ಬರೆದಿತ್ತು. ನಗರದಲ್ಲಿ ಜೀವಂತವಾಗಿದ್ದ 23 ಕೆರೆಗಳಿಗೆ ಮಣ್ಣು ತುಂಬಿದ್ದ ಬಿಡಿಎ ಅದರ ಮೇಲೆ ಬಡಾವಣೆ ನಿರ್ಮಿಸಿ, 3,530 ನಿವೇಶನಗಳನ್ನು ನಿರ್ಮಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಬಿಡಿಎ ಬರೆದಿರುವ ಪತ್ರವು ಇದೀಗ ಬಹಿರಂಗವಾಗಿದೆ.

23 ಕೆರೆಗಳು ತಮ್ಮ ಮೂಲ ಸ್ವರೂಪ ಕಳೆದುಕೊಂಡಿದೆ ಎಂಬ ನೆಪ ಹೇಳಿದ್ದ ಬಿಡಿಎ ಕೆರೆಯನ್ನು ಸಂಪೂರ್ಣ ಮುಚ್ಚಿಹಾಕಿತ್ತು. 1985ರಲ್ಲಿ ನಡೆದ ಲಕ್ಷ್ಮಣ ರಾವ್ ಸಮಿತಿ ನಡೆಸಿದ ಕೆರೆಗಳ ಸರ್ವೇ ವರದಿ ಆಧಾರದ ಮೇರೆಗೆ ಬಡಾವಣೆ ನಿರ್ಮಿಸಲಾಗಿತ್ತು. ಇದೀಗ ಈ ಕೆರೆಗಳಿದ್ದ ಭಾಗದಲ್ಲಿ ಸಣ್ಣ ಮಳೆಗೂ ಜನರು ಪ್ರವಾಹದ ಭೀತಿ ಎದುರಿಸುವಂತಾಗಿದೆ.

ಒತ್ತುವರಿಯಾಗಿರುವ ಕೆರೆಗಳ ವಿವರ

ಗೆದ್ದಲಹಳ್ಳಿ ಕೆರೆ (126 ನಿವೇಶನ), ಚಿಕ್ಕಮಾರನಹಳ್ಳಿ ಕೆರೆ (115 ನಿವೇಶನ), ಬಾಣಸವಾಡಿ ಕೆರೆ (67 ನಿವೇಶನ), ಚನ್ನಸಂದ್ರ ಕೆರೆ (222 ನಿವೇಶನ), ಶಿನಿವಾಗಿಲು ಅಮಾನಿಕೆರೆ (486 ನಿವೇಶನ), ಬಿಳೇಕಹಳ್ಳಿ ಕೆರೆ (312 ನಿವೇಶನ), ನಾಗಸಂದ್ರ ಚೆನ್ನಮ್ಮಕರೆ (328 ನಿವೇಶನ), ತಿಪ್ಪಸಂದ್ರ ಕೆರೆ 3ನೇ ಹಂತ (234 ನಿವೇಶನ), ತಿಪ್ಪಸಂದ್ರ ಕೆರೆ 2ನೇ ಹಂತ (13 ನಿವೇಶನ), ಅಗರ ಕೆರೆ (113 ನಿವೇಶನ), ಎಳ್ಳುಕುಂಟೆ ಕೆರೆ (161 ನಿವೇಶನ), ಕಾಚರಕನಹಳ್ಳಿ ಕೆರೆ (126 ನಿವೇಶನ), ಹುಳಿಮಾವುಕೆರೆ (153 ನಿವೇಶನ), ವೆಂಕಟರಾಯನಕೆರೆ (130 ನಿವೇಶನ), ನಾಗರಬಾವಿ ಕೆರೆ (37 ನಿವೇಶನ), ಚಳ್ಳಕೆರೆ (71 ನಿವೇಶನ), ದೊಮ್ಮಲೂರು ಕೆರೆ (10 ನಿವೇಶನ), ಮೇಸ್ತ್ರಿ ಪಾಳ್ಯ ಕೆರೆ (23 ನಿವೇಶನ), ಬೆನ್ನಿಗಾನಹಳ್ಳಿ ಕೆರೆ (18 ನಿವೇಶನ), ಹೆಣ್ಣೂರು ಕೆರೆ (434 ನಿವೇಶನ) ತಲಘಟ್ಟಪುರ ಕೆರೆ (94 ನಿವೇಶನ), ಕೇತಮಾರನಹಳ್ಳಿ ಕೆರೆ (230 ನಿವೇಶನ), ಮಂಗನಹಳ್ಳಿ ಕೆರೆ (27 ನಿವೇಶನ).

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ