AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ

ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

BDA: ಬೆಂಗಳೂರು ಅಭಿವೃದ್ಧಿಗೆ ಸ್ಥಾಪನೆಯಾದ ಸಂಸ್ಥೆಯಿಂದಲೇ ಕೆರೆಗಳ ಒತ್ತುವರಿ; ನಗರದ ಪ್ರವಾಹ ಅನಾಹುತಕ್ಕೆ ಬಿಡಿಎ ಸಹ ಕಾರಣ
ಬಿಡಿಎ ಅಭಿವೃದ್ಧಿಪಡಿಸಿರುವ ಲೇಔಟ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Sep 16, 2022 | 11:05 AM

Share

ಬೆಂಗಳೂರು: ನಗರದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bengaluru Development Authority – BDA) ನಗರದ ಹಲವು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದೆ. ಕೆರೆಗಳ ಅಂಗಳದಲ್ಲಿಯೇ ಬಡಾವಣೆಗಳನ್ನು ನಿರ್ಮಿಸುವ ಮೂಲಕ ಒತ್ತುವರಿಗೆ ಮುನ್ನುಡಿ ಬರೆದಿರುವುದೂ ಅಲ್ಲದೆ, ನೀರು ಹರಿವಿನ ನೈಸರ್ಗಿಕ ಕಾಲುವೆಗಳನ್ನು ಮುಚ್ಚಿಹಾಕಿ ರಸ್ತೆಗಳ ಮೇಲೆ ನೀರು ಹರಿಯಲು ಕಾರಣವಾಗಿದೆ ಎಂದು ಗಂಭೀರ ಅರೋಪ ಕೇಳಿಬಂದಿದೆ.

2013-14ರ ಅವಧಿಯಲ್ಲಿ 23 ಕೆರೆಗಳನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿರುವ ಬಿಡಿಎ ಲೇಔಟ್ ನಿರ್ಮಿಸಿತ್ತು. ಒತ್ತುವರಿಯನ್ನು ಕಾನೂನು ಬದ್ಧಗೊಳಿಸುವಂತೆ ಕೋರಿ 2015ರಲ್ಲಿ ಬಿಡಿಎ ಸರ್ಕಾರಕ್ಕೆ ಪತ್ರ ಬರೆದಿತ್ತು. ನಗರದಲ್ಲಿ ಜೀವಂತವಾಗಿದ್ದ 23 ಕೆರೆಗಳಿಗೆ ಮಣ್ಣು ತುಂಬಿದ್ದ ಬಿಡಿಎ ಅದರ ಮೇಲೆ ಬಡಾವಣೆ ನಿರ್ಮಿಸಿ, 3,530 ನಿವೇಶನಗಳನ್ನು ನಿರ್ಮಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಬಿಡಿಎ ಬರೆದಿರುವ ಪತ್ರವು ಇದೀಗ ಬಹಿರಂಗವಾಗಿದೆ.

23 ಕೆರೆಗಳು ತಮ್ಮ ಮೂಲ ಸ್ವರೂಪ ಕಳೆದುಕೊಂಡಿದೆ ಎಂಬ ನೆಪ ಹೇಳಿದ್ದ ಬಿಡಿಎ ಕೆರೆಯನ್ನು ಸಂಪೂರ್ಣ ಮುಚ್ಚಿಹಾಕಿತ್ತು. 1985ರಲ್ಲಿ ನಡೆದ ಲಕ್ಷ್ಮಣ ರಾವ್ ಸಮಿತಿ ನಡೆಸಿದ ಕೆರೆಗಳ ಸರ್ವೇ ವರದಿ ಆಧಾರದ ಮೇರೆಗೆ ಬಡಾವಣೆ ನಿರ್ಮಿಸಲಾಗಿತ್ತು. ಇದೀಗ ಈ ಕೆರೆಗಳಿದ್ದ ಭಾಗದಲ್ಲಿ ಸಣ್ಣ ಮಳೆಗೂ ಜನರು ಪ್ರವಾಹದ ಭೀತಿ ಎದುರಿಸುವಂತಾಗಿದೆ.

ಒತ್ತುವರಿಯಾಗಿರುವ ಕೆರೆಗಳ ವಿವರ

ಗೆದ್ದಲಹಳ್ಳಿ ಕೆರೆ (126 ನಿವೇಶನ), ಚಿಕ್ಕಮಾರನಹಳ್ಳಿ ಕೆರೆ (115 ನಿವೇಶನ), ಬಾಣಸವಾಡಿ ಕೆರೆ (67 ನಿವೇಶನ), ಚನ್ನಸಂದ್ರ ಕೆರೆ (222 ನಿವೇಶನ), ಶಿನಿವಾಗಿಲು ಅಮಾನಿಕೆರೆ (486 ನಿವೇಶನ), ಬಿಳೇಕಹಳ್ಳಿ ಕೆರೆ (312 ನಿವೇಶನ), ನಾಗಸಂದ್ರ ಚೆನ್ನಮ್ಮಕರೆ (328 ನಿವೇಶನ), ತಿಪ್ಪಸಂದ್ರ ಕೆರೆ 3ನೇ ಹಂತ (234 ನಿವೇಶನ), ತಿಪ್ಪಸಂದ್ರ ಕೆರೆ 2ನೇ ಹಂತ (13 ನಿವೇಶನ), ಅಗರ ಕೆರೆ (113 ನಿವೇಶನ), ಎಳ್ಳುಕುಂಟೆ ಕೆರೆ (161 ನಿವೇಶನ), ಕಾಚರಕನಹಳ್ಳಿ ಕೆರೆ (126 ನಿವೇಶನ), ಹುಳಿಮಾವುಕೆರೆ (153 ನಿವೇಶನ), ವೆಂಕಟರಾಯನಕೆರೆ (130 ನಿವೇಶನ), ನಾಗರಬಾವಿ ಕೆರೆ (37 ನಿವೇಶನ), ಚಳ್ಳಕೆರೆ (71 ನಿವೇಶನ), ದೊಮ್ಮಲೂರು ಕೆರೆ (10 ನಿವೇಶನ), ಮೇಸ್ತ್ರಿ ಪಾಳ್ಯ ಕೆರೆ (23 ನಿವೇಶನ), ಬೆನ್ನಿಗಾನಹಳ್ಳಿ ಕೆರೆ (18 ನಿವೇಶನ), ಹೆಣ್ಣೂರು ಕೆರೆ (434 ನಿವೇಶನ) ತಲಘಟ್ಟಪುರ ಕೆರೆ (94 ನಿವೇಶನ), ಕೇತಮಾರನಹಳ್ಳಿ ಕೆರೆ (230 ನಿವೇಶನ), ಮಂಗನಹಳ್ಳಿ ಕೆರೆ (27 ನಿವೇಶನ).

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು