AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಹಂತದ ಪೆರಿಫೆರಲ್ ರಿಂಗ್ ರೋಡ್​​ಗಾಗಿ 1,427 ಎಕರೆ ಭೂಸ್ವಾಧೀನ: 1,126 ಭೂಮಾಲೀಕರಿಗೆ ಜಮೀನು ಕಳೆದುಕೊಳ್ಳುವ ಆತಂಕ

ಎರಡನೇ ಹಂತದ ಪೆರಿಫೆರಲ್ ರಿಂಗ್ ರೋಡ್ (PRR-2) ನಿರ್ಮಾಣಕ್ಕಾಗಿ ಬಿಡಿಎ 1,427 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಮಾರುಕಟ್ಟೆ ದರದ ಪರಿಹಾರಕ್ಕಾಗಿ 1,126 ಭೂಮಾಲೀಕರು ಪಟ್ಟು ಹಿಡಿಯುವ ಸಾಧ್ಯತೆಯಿದೆ. 52 ಕಿ.ಮೀ ಉದ್ದದ PRR ಪೈಕಿ ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುಮಾರು 10 ಕಿ.ಮೀ ಉದ್ದದ 10 ಪಥಗಳ ರಸ್ತೆಯನ್ನು BDA ಈಗಾಗಲೇ ನಿರ್ಮಿಸಿದೆ. ಉಳಿದ ಸುಮಾರು 42 ಕಿ.ಮೀ ವ್ಯಾಪ್ತಿಗೆ ಇತ್ತೀಚಿನ ಅಂತಿಮ ಅಧಿಸೂಚನೆ ಅನ್ವಯಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದ ಪೆರಿಫೆರಲ್ ರಿಂಗ್ ರೋಡ್​​ಗಾಗಿ 1,427 ಎಕರೆ ಭೂಸ್ವಾಧೀನ: 1,126 ಭೂಮಾಲೀಕರಿಗೆ ಜಮೀನು ಕಳೆದುಕೊಳ್ಳುವ ಆತಂಕ
1,126 ಭೂಮಾಲೀಕರಿಗೆ ಜಮೀನು ಕಳೆದುಕೊಳ್ಳುವ ಆತಂಕ Image Credit source: Deccan Herald
ಪ್ರಸನ್ನ ಹೆಗಡೆ
|

Updated on:Sep 09, 2026 | 2:10 PM

Share

ಬೆಂಗಳೂರು, ಸೆಪ್ಟೆಂಬರ್​​ 09: ಎರಡನೇ ಹಂತದ ಪೆರಿಫೆರಲ್ ರಿಂಗ್ ರೋಡ್ (PRR-2) ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 1,427 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧತೆ ನಡೆಸಿದ್ದು, ಇದರಿಂದ ಸುಮಾರು 1,126 ಭೂಮಾಲೀಕರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಹೊಸ PRR-2 ರಸ್ತೆಯು NICE ರಸ್ತೆಗೆ ಸಮಾನಾಂತರವಾಗಿ ಸಾಗಲಿದ್ದು, ಹೊಸೂರು, ಮೈಸೂರು ಹಾಗೂ ತುಮಕೂರು ರಸ್ತೆಗಳನ್ನು ಸಂಪರ್ಕಿಸಲಿದೆ. ಇದಲ್ಲದೆ, 52 ಕಿ.ಮೀ ಉದ್ದದ, 10 ಪಥಗಳ PRR-2 ಪ್ರಸ್ತಾವಿತ ಬಿಡದಿ ಟೌನ್‌ಶಿಪ್‌ಗೂ ಸಂಪರ್ಕ ಕಲ್ಪಿಸಲಿದೆ.

ಭೂಮಾಲೀಕರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆ

ಕಳೆದ ವಾರ ರಾಜ್ಯ ಸರ್ಕಾರವು PRR-2ಗಾಗಿ ಅತ್ತಿಬೆಲೆ, ಜಿಗಣಿ, ಬೇಗೂರು, ಉತ್ತರಹಳ್ಳಿ, ಕೆಂಗೇರಿ ಹಾಗೂ ದಾಸನಪುರ ಸೇರಿದಂತೆ 30 ಗ್ರಾಮಗಳ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. NICE ರಸ್ತೆಗೆ ಸಮಾನಾಂತರವಾಗಿ ಸಾಗುವ PRR ಯೋಜನೆಗೆ 2004ರಲ್ಲಿ ಅನುಮೋದನೆ ನೀಡಲಾಗಿತ್ತು. ಭೂಸ್ವಾಧೀನಕ್ಕಾಗಿ ಪ್ರಾಥಮಿಕ ಅಧಿಸೂಚನೆಯನ್ನು 2005ರ ಡಿಸೆಂಬರ್‌ನಲ್ಲಿ ಹೊರಡಿಸಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ, ಸುಮಾರು ಎರಡು ದಶಕಗಳ ಹಿಂದೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದರಿಂದ ಭೂಮಾಲೀಕರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ. ಭೂಮಿಗೆ ಪ್ರಸ್ತುತ ಮಾರುಕಟ್ಟೆ ಮೌಲ್ಯವನ್ನು ನೀಡದಿದ್ದರೆ ವಿರೋಧ ವ್ಯಕ್ತವಾಗುವುದು ಖಚಿತ. ಪರಿಹಾರದ ಮೊತ್ತದ ಬಗ್ಗೆ ಈವರೆಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

LIVE TV

ಇದನ್ನೂ ಓದಿ: ಬೆಂಗಳೂರು ರಸ್ತೆ ಸ್ವಚ್ಛತೆಗೆ ಟೆಕ್ನಾಲಜಿ ಟಚ್ಗೆ ಪ್ಲಾನ್, ಟ್ರಯಲ್ ಮಾಡಿರೋ ಜಿಬಿಎ!

52 ಕಿ.ಮೀ ಉದ್ದದ PRR ಪೈಕಿ ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುಮಾರು 10 ಕಿ.ಮೀ ಉದ್ದದ 10 ಪಥಗಳ ರಸ್ತೆಯನ್ನು BDA ಈಗಾಗಲೇ ನಿರ್ಮಿಸಿದೆ. ಉಳಿದ ಸುಮಾರು 42 ಕಿ.ಮೀ ವ್ಯಾಪ್ತಿಗೆ ಇತ್ತೀಚಿನ ಅಂತಿಮ ಅಧಿಸೂಚನೆ ಅನ್ವಯಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೋಜನೆಯ ಅಂದಾಜು ವೆಚ್ಚ 3,500 ಕೋಟಿ ರೂಪಾಯಿಗಳಾಗಿವೆ. ರಸ್ತೆಯ ಜೊತೆಗೆ, ಮೈಸೂರು ರಸ್ತೆ, ತುಮಕೂರು ರಸ್ತೆ, ಕನಕಪುರ ರಸ್ತೆ ಹಾಗೂ ಹೊಸೂರು ರಸ್ತೆಗಳು ಪ್ರಸ್ತಾವಿತ PRR ಅನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಕ್ಲೋವರ್‌ಲೀಫ್ ಜಂಕ್ಷನ್‌ಗಳನ್ನು ನಿರ್ಮಿಸಲು BDA ಪ್ರಸ್ತಾಪಿಸಿದೆ. ಈ ಜಂಕ್ಷನ್‌ಗಳಿಗೆ ಹೆಚ್ಚುವರಿ ಭೂಮಿ ಅಗತ್ಯವಾಗಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:07 pm, Wed, 9 September 26

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ