AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಸೈಟ್ ಖರೀದಿಸುವ ಮುನ್ನ ಎಚ್ಚರ; ನವಯುಗ ಪ್ರಾಪರ್ಟಿಸ್ ವಿರುದ್ಧ ವಂಚನೆ ಆರೋಪ, ಮೋಸ ಹೋದ ಜನರಿಂದ ಪ್ರತಿಭಟನೆ

ಸದ್ಯ ಹಣ ಕೊಟ್ಟು ಮೋಸ ಹೋದವರು ನವಯುಗ ಪ್ರಾಪರ್ಟಿಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಪನಿಗೆ ಹಣ ಕಟ್ಟಿರುವ ದಾಖಲೆ ಪತ್ರ ಹಿಡಿದು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕಡಿಮೆ ಬೆಲೆಗೆ ಸೈಟ್ ಖರೀದಿಸುವ ಮುನ್ನ ಎಚ್ಚರ; ನವಯುಗ ಪ್ರಾಪರ್ಟಿಸ್ ವಿರುದ್ಧ ವಂಚನೆ ಆರೋಪ, ಮೋಸ ಹೋದ ಜನರಿಂದ ಪ್ರತಿಭಟನೆ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:May 22, 2022 | 4:56 PM

Share

ಬೆಂಗಳೂರು: ನವಯುಗ ಪ್ರಾಪರ್ಟಿಸ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಸುಮಾರು 250 ಜನರಿಗೆ ಮೋಸ ಆಗಿದೆ ಎನ್ನಲಾಗುತ್ತಿದೆ. ಕಡಿಮೆ ದರದಲ್ಲಿ ಸೈಟ್ ನೀಡುವುದಾಗಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ ಎಂದು ಹೆಚ್ಎಸ್ಆರ್ ಲೇಔಟ್ ಠಾಣೆಗೆ ಸಂತ್ರಸ್ತರು ದೂರು ನೀಡಿದ್ದಾರೆ. 20•30 ಸೈಟ್ ಆರು ಲಕ್ಷ, 30•40 ಸೈಟ್ ಹದಿನೈದು ಲಕ್ಷಕ್ಕೆ ಕೊಡ್ತಿವಿ ಎಂದು ಫೋನ್ಗೆ ಮೇಸೆಜ್, ಸೋಶಿಯಲ್ ಮೀಡಿಯಾ ಮೂಲಕ ನವಯುಗ ಪ್ರಾಪರ್ಟಿಸ್ ಗ್ರಾಹಕರಿಗೆ ಗಾಳ ಹಾಕಿದೆ. ಹೊಸೂರು, ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಚಂದಾಪುರ, ಆನೇಕಲ್ ಭಾಗದಲ್ಲಿ ಸೈಟ್ ನೀಡುವುದಾಗಿ ಹಣ ಪೀಕಿದ್ರು.

‘ಇಂದೇ ಸೈಟ್ ಬುಕ್ ಮಾಡಿದ್ರೆ ಗೋಲ್ಡ್ ಕಾಯಿನ್ ಫ್ರೀ’ ಎಂದು ಹೇಳಿ ವಂಚನೆ ಮಾಡಿದ್ದಾರೆ. ಸದ್ಯ ಹಣ ಕೊಟ್ಟು ಮೋಸ ಹೋದವರು ನವಯುಗ ಪ್ರಾಪರ್ಟಿಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಪನಿಗೆ ಹಣ ಕಟ್ಟಿರುವ ದಾಖಲೆ ಪತ್ರ ಹಿಡಿದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಕಂಪನಿ ಮಾಲೀಕ ನವೀನ್ ಸೇರಿ 10 ಜನರ ವಿರುದ್ಧ ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಕಚೇರಿ ಮುಚ್ಚಿಕೊಂಡು ಮಾಲೀಕರು ಪರಾರಿಯಾಗಿದ್ದಾರೆ. ಸಿಬ್ಬಂದಿ, ಮಾಲೀಕರ ಫೋನ್ಗಳು ಸ್ವೀಚ್ ಆಫ್ ಆಗಿದೆ. ಘಟನೆ ಸಂಬಂಧ ಮಾಹಿತಿ ಹಾಗೂ ಆರೋಪಿಗಳನ್ನು ಹುಡುಕಲು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಇಂಧನ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಮೋದಿ ಸರ್ಕಾರದ ನಿರ್ಧಾರ ಶ್ಲಾಘಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಮೂವರು ಖದೀಮರನ್ನು ಬೆಂಗಳೂರಿನ ನಂದಿನಿ ಲೇಔಟ್‌ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂದನ್, ಜಿಯಾವುಲ್ಲಾ ಖಾನ್, ಶರತ್ ಬಂಧಿತ ಆರೋಪಿಗಳು. ಬಾಡಿಗೆ ಮನೆ ನೋಡುವ ನೆಪದಲ್ಲಿ ಬಂದಿದ್ದ ದರೋಡೆಕೋರರು ಬಾಡಿಗೆ ಮನೆ ಗಲೀಜಾಗಿದೆ ನೋಡಿ ಎಂದಿದ್ದಾರೆ. ಈ ವೇಳೆ ಮನೆಯೊಳಗೆ ಮಾಲಕಿ ಹೋದಾಗ ಕೈಕಾಲು ಕಟ್ಟಿ 48 ಗ್ರಾಂ ಮಾಂಗಲ್ಯ ಸರ, ಓಲೆ ಕಿತ್ತು ಪರಾರಿಯಾಗಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದು $1.5 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್, ಮಾರಕಾಸ್ತ್ರ ಜಪ್ತಿ ಮಾಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:48 pm, Sun, 22 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ