AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation: ತಪ್ಪು ಕಲ್ಪನೆಗಳಿಂದ ಬೆಂಗಳೂರಿನಲ್ಲಿ ಅಂಗಾಂಗ ದಾನಕ್ಕೆ ಜನರ ಹಿಂದೇಟು, ಪ್ರಮಾಣ 50% ಕುಸಿತ

ಅಂಗಾಂಗ ದಾನದ ಬಗ್ಗೆ ವೈದ್ಯರು ಸಾಕಷ್ಟು ಅರಿವು ಮೂಡಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಅವರು ಅಗಲಿದ ವೇಳೆ ಅಭಿಮಾನಿಗಳು ಪುನೀತ್ ಅವರ ಹಾದಿಯಲ್ಲಿ ನಡೆದು ಕಣ್ಣುದಾನ ಮಾಡಿದ್ದರು. ಆದರೆ ಅಂಗಾಂಗ ದಾನಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಇಷ್ಟಾದರೂ ವೈದ್ಯರ ಪ್ರಯತ್ನಕ್ಕೆ ಮೂಢನಂಬಿಕೆಗಳು ಅಡ್ಡಿ ಉಂಟು ಮಾಡುತ್ತಿದೆ. ಈ ಜನ್ಮದಲ್ಲಿ ಕಣ್ಣು, ಕಿಡ್ನಿ, ಚರ್ಮ, ಲಿವರ್, ಹೃದಯ, ಕರುಳು ಹೀಗೆ ಅಂಗಾಂಗಳನ್ನು ನೀಡಿದರೆ ಮುಂಬರುವ ಜನ್ಮದಲ್ಲಿ ಅಂಗವೈಕಲ್ಯತೆ ಕಾಡಬಹುದು ಎಂದು ಸಿಟಿ ಜನ ಭಯ ಪಡುತ್ತಿದ್ದಾರೆ.

Organ Donation: ತಪ್ಪು ಕಲ್ಪನೆಗಳಿಂದ ಬೆಂಗಳೂರಿನಲ್ಲಿ ಅಂಗಾಂಗ ದಾನಕ್ಕೆ ಜನರ ಹಿಂದೇಟು, ಪ್ರಮಾಣ 50% ಕುಸಿತ
ಡಾ.ಅರವಿಂದ್, ಕಿಡ್ನಿ ಕಸಿ ತಜ್ಞ
ವಿನಯ್​ ಕಾಶಪ್ಪನವರ್​
| Edited By: ಆಯೇಷಾ ಬಾನು|

Updated on: Oct 04, 2023 | 7:31 AM

Share

ಬೆಂಗಳೂರು, ಅ.04: ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ಅವಿಷ್ಕಾರಗಳಿಗೆ ಕೊರತೆ ಇಲ್ಲ. ಅದ್ರಲ್ಲೂ ಅಡ್ವಾನ್ಸ್ ಟೆಕ್ನಾಲಜಿಯಿಂದ ಬೆಂಗಳೂರು ಹೆಲ್ತ್ ಹಬ್ ಅಂತಾನೇ ಪ್ರಸಿದ್ಧಿ ಪಡೆದಿದೆ (Health Hub). ಬೆಂಗಳೂರಿನ ಕ್ವಾಲಿಟಿ ಹೆಲ್ತ್ಕೇರ್ ಸರ್ವಿಸ್ ಪಡೆಯಲು ದೇಶ, ವಿದೇಶಗಳಿಂದ ರೋಗಿಗಳು ಬರ್ತಿದ್ದಾರೆ. ಇಷ್ಟೆಲ್ಲಾ ಮುಂದುವರೆದಿರುವ ಉದ್ಯಾನ ನಗರಿಯಲ್ಲಿ ಜನ ಮಾತ್ರ ಇನ್ನೂ ಮೂಢನಂಬಿಕೆಯಲ್ಲಿ ಮುಳುಗಿದ್ದಾರೆ. ಮಾರ್ಡನ್ ಮೈಂಡ್ ಸೆಟ್ ಇದ್ರೂ, ಅಂಗಾಂಗ ದಾನ (Organ Donation) ಮಾಡಿದ್ರೆ ಮುಂಬರುವ ಜನ್ಮದಲ್ಲಿ ಅಂಗವೈಕಲ್ಯತೆ ಕಾಡಬಹುದು ಎಂಬ ಮೂಢನಂಬಿಕೆಯಲ್ಲಿ ಸಿಟಿ ಜನ ಮುಳುಗಿದ್ದಾರೆ. ತಪ್ಪು ಕಲ್ಪನೆಗಳಿಂದ ಅಂಗಾಂಗ ದಾನಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ.

ಬೆಂಗಳೂರು ಐಟಿ ಸಿಟಿ ಅನ್ನೊ ಖ್ಯಾತಿ ಪಡೆದಿದೆ. ಸಿಟಿ ಜನ ಸಖತ್ ಫಾಸ್ಟ್ ಅಂಡ್ ಮಾರ್ಡನ್ ಎಂಬ ಪಟ್ಟಿ ಪಡೆದಿದ್ದಾರೆ. ಇಷ್ಟಿದ್ದರೂ ಆರ್ಗನ್ ಡೊನೇಷನ್ ವಿಚಾರದಲ್ಲಿ ಸಿಟಿ ಜನ ಸಖತ್ ವೀಕ್ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಕೋವಿಡ್ ನಂತರದಲ್ಲಿ ಅಂಗಾಂಗ ದಾನದ ಬಗ್ಗೆ ಸಿಟಿ ಜನ ಹಿಂದೇಟು ಹಾಕ್ತಿದ್ದು, ಇದಕ್ಕೆಲ್ಲ ಮೂಢನಂಬಿಕೆ ಕಾರಣ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: ಅಂಗಾಂಗ ದಾನದ ಮಹತ್ವ ಸಾರಿದ ಕಾರುಣ್ಯ ರಾಮ್​, ಅಶ್ವಿನಿ ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ

ಅಂಗಾಂಗ ದಾನದ ಬಗ್ಗೆ ವೈದ್ಯರು ಸಾಕಷ್ಟು ಅರಿವು ಮೂಡಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಅವರು ಅಗಲಿದ ವೇಳೆ ಅಭಿಮಾನಿಗಳು ಪುನೀತ್ ಅವರ ಹಾದಿಯಲ್ಲಿ ನಡೆದು ಕಣ್ಣುದಾನ ಮಾಡಿದ್ದರು. ಆದರೆ ಅಂಗಾಂಗ ದಾನಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಇಷ್ಟಾದರೂ ವೈದ್ಯರ ಪ್ರಯತ್ನಕ್ಕೆ ಮೂಢನಂಬಿಕೆಗಳು ಅಡ್ಡಿ ಉಂಟು ಮಾಡುತ್ತಿದೆ. ಈ ಜನ್ಮದಲ್ಲಿ ಕಣ್ಣು, ಕಿಡ್ನಿ, ಚರ್ಮ, ಲಿವರ್, ಹೃದಯ, ಕರುಳು ಹೀಗೆ ಅಂಗಾಂಗಳನ್ನು ನೀಡಿದರೆ ಮುಂಬರುವ ಜನ್ಮದಲ್ಲಿ ಅಂಗವೈಕಲ್ಯತೆ ಕಾಡಬಹುದು ಎಂದು ಸಿಟಿ ಜನ ಭಯ ಪಡುತ್ತಿದ್ದಾರೆ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಆರ್ಗನ್ ಡೊನೇಷನ್ ಶೇಕಾಡ 50 ರಷ್ಟು ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಜಾಗೃತಿ ಬಳಿಕ ಕೊಂಚ ಸುಧಾರಣೆಯಾಗಿದೆ ಆದ್ರೂ ಜನರ ಮೂಢನಂಬಿಕೆ ಅಂಗಾಂಗ ಕುಸಿತಕ್ಕೆ ಕಾರಣವಾಗಿದ್ದು ಜನರು ಇದರಿಂದ ಹೊರ ಬರಬೇಕಿದೆ.

ಅಂಗಾಂಗ ದಾನಗಳ ಪೈಕಿ ಕಿಡ್ನಿ ದಾನದ ಸಂಖ್ಯೆ ತೀರಾ ಇಳಮುಖ ಕಂಡಿದೆ. ಆಗರ್ನ್ ಡೊನೇಷನ್ ಸಿಗದ ಕಾರಣ ಸರಿಸುಮಾರು 5 ವರ್ಷ ಕಿಡ್ನಿಗಾಗಿ ರೋಗಿಗಳು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಯಕೃತ್ತು ಪಡೆಯಲು ನಾಲ್ಕುವರೆ ವರ್ಷ ವೈಟಿಂಗ್ ಪಿರಿಯಡ್ ಇದ್ದು, ಸರ್ಕಾರದ ಮಹತ್ವಾಕಾಂಕ್ಷೆ ಜೀವನ ಸಾರ್ಥಕತೆ ಯೋಜನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು