AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊಗಸಾಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ತಿಗಣೆ ಕಾಟ; ಪರಿಹಾರ ನೀಡುವಂತೆ ಪುಟ್ಟರಂಗಶೆಟ್ಟಿ ಮನವಿ

ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ, ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಈ ಹಿನ್ನಲೆ ರಾತ್ರಿ ವೇಳೆ ಸದನದ ಮೊಗಸಾಲೆಯಲ್ಲಿಯೇ ಮಲಗುತ್ತಿರುವ ಕಾಂಗ್ರೆಸ್‌ನ ಶಾಸಕರ ಪೈಕಿ ಪುಟ್ಟರಂಗಶೆಟ್ಟಿಗೆ ತಿಗಣೆ ಕಾಟ ಕಂಡುಬಂದಿದೆ.

ವಿಧಾನಸೌಧದ ಮೊಗಸಾಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ತಿಗಣೆ ಕಾಟ; ಪರಿಹಾರ ನೀಡುವಂತೆ ಪುಟ್ಟರಂಗಶೆಟ್ಟಿ ಮನವಿ
ಸಿ.ಪುಟ್ಟರಂಗಶೆಟ್ಟಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 21, 2022 | 10:57 PM

Share

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ (K.S.EShwarappa) ರಾಜೀನಾಮೆಗೆ ಆಗ್ರಹಿಸಿ, ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಈ ಹಿನ್ನಲೆ ರಾತ್ರಿ ವೇಳೆ ಸದನದ ಮೊಗಸಾಲೆಯಲ್ಲಿಯೇ ಮಲಗುತ್ತಿರುವ ಕಾಂಗ್ರೆಸ್‌ನ ಶಾಸಕರ ಪೈಕಿ ಪುಟ್ಟರಂಗಶೆಟ್ಟಿಗೆ (C.Puttarangashetty) ತಿಗಣೆ ಕಾಟ ಕಂಡುಬಂದಿದೆ. ಸದನದ ಮೊಗಸಾಲೆಯಲ್ಲಿ ತಿಗಣೆ ಎಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ಪುಟ್ಟರಂಗಶೆಟ್ಟಿ ದೂರು ಹೇಳಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಸಚಿವ ಕೆ‌.ಎಸ್. ಈಶ್ವರಪ್ಪರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್‌ನ ಶಾಸಕರು ವಿಧಾನಸೌಧದಲ್ಲೇ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ, ಸೋಮವಾರ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿಗೆ ತಿಗಣೆ ಕಾಟದ ಬಗ್ಗೆ ಪುಟ್ಟರಂಗಶೆಟ್ಟಿ ಮಾಹಿತಿ ಕೊಟ್ಡಿದ್ದಾರೆ.

ಮೇಡಂನವರೇ, ವಿಧಾನಸಭೆಯ ಮೊಗಸಾಲೆಯಲ್ಲಿ ತಿಗಣೆ ಕಾಟವಿದೆ ನಾವು ರಾತ್ರಿಯೆಲ್ಲಾ ಇಲ್ಲಿಯೇ ಮಲಗುತ್ತಿದ್ದೇವೆ. ನಮಗೆ ತಿಗಣೆ ಕಾಟದಿಂದ ನಿದ್ದೆಯೇ ಬರುತ್ತಿಲ್ಲ. ನೀವು ಇದರ ಬಗ್ಗೆ ಸ್ವಲ್ಪ ಎಚ್ಚರವಹಿಸಿ. ನಾವು ಅನುಭವಿಸುವ ತೊಂದರೆಗೆ ಪರಿಹಾರ ಕೊಡಿಸಿ ಎಂದು ಕೇಳಿಕೊಂಡಿದ್ದಾರೆ.

ಪುಟ್ಟರಂಗಶೆಟ್ಟಿ ಮಾತಿಗೆ, ಆಗಲೀ ಸಾರ್ ಅದಕ್ಕೆ ಪರಿಹಾರ ಕೊಡಿಸೋಣ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹೇಳಿದ್ದಾರೆ.

ಮಂಗಳವಾರದಿಂದ ಪರಿಷತ್ ಕಲಾಪದಲ್ಲಿ ಕಡ್ಡಾಯ ಭಾಗಿಯಾಗಲೇಬೇಕು: ವಿರೋಧ ಪಕ್ಷದ ಮುಖ್ಯ ಸಚೇತಕ ವಿಪ್ ಜಾರಿ 

ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ವಿಧಾನ ಸೌಧದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ನಿರಶನ ನಾಳೆ ಅಂದರೆ ಮಂಗಳವಾರ ಅಂತ್ಯ ಕಾಣುವುದು ಖಚಿತವಾಗಿದೆ. ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ  ಪ್ರಕಾಶ್ ರಾಠೋಡ್ ಅವರು ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದಾರೆ. ಮಂಗಳವಾರದಿಂದ (ಫೆಬ್ರುವರಿ 22) ಶುಕ್ರವಾರದವರೆಗೆ (ಫೆಬ್ರುವರಿ 25) ಕಡ್ಡಾಯವಾಗಿ ವಿಧಾನ ಪರಿಷತ್ ನ ಕಾರ್ಯ ಕಲಾಪದಲ್ಲಿ ಕಡ್ಡಾಯವಾಗಿ ಭಾಗಿಯಾಗಬೇಕೆಂದು ಪ್ರಕಾಶ್ ರಾಠೋಡ್ ವಿಪ್ ಜಾರಿಗೊಳಿಸಿದ್ದಾರೆ.

ಇದನ್ನೂ ಓದಿ:

ಮಂಗಳವಾರದಿಂದ ಪರಿಷತ್ ಕಲಾಪದಲ್ಲಿ ಕಡ್ಡಾಯ ಭಾಗಿಯಾಗಲೇಬೇಕು ಅಂತ ವಿರೋಧ ಪಕ್ಷದ ಮುಖ್ಯ ಸಚೇತಕ ವಿಪ್ ಜಾರಿಗೊಳಿಸಿದರು

ಬಜರಂಗದಳ ಕಾರ್ಯಕರ್ತ ಹತ್ಯೆ ಪ್ರಕರಣ: ಶಿವಮೊಗ್ಗದ ಇಬ್ಬರು ಆರೋಪಿಗಳ ಬಂಧನ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು