AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕರ ವಸತಿ ನಿಲಯದ ಸುತ್ತಮುತ್ತ ಬಿಯರ್ ಬಾಟಲ್​ಗಳ ರಾಶಿ; ಬೆಂಗಳೂರು ವಿಶ್ವವಿದ್ಯಾಲಯದಲ್ಲಿನ ಈ ಸ್ಥಿತಿಗೆ ಯಾರು ಹೊಣೆ?

ಅಧಿಕಾರಿಗಳು ಒಂದು ಕಡೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಇನ್ನೊಂದು ಕಡೆ ಜನ ಸಾಮಾನ್ಯರು, ಯುವಕರು ಸುತ್ತಮುತ್ತಲ್ಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳದೆ ನಿರ್ಲಕ್ಷಿಸಿದ್ದಾರೆ. ಇದಕ್ಕೆ ನಿದರ್ಶನ ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿನ ಸುತ್ತಮುತ್ತಲ ಪರಿಸರ.

ಬಾಲಕರ ವಸತಿ ನಿಲಯದ ಸುತ್ತಮುತ್ತ ಬಿಯರ್ ಬಾಟಲ್​ಗಳ ರಾಶಿ; ಬೆಂಗಳೂರು ವಿಶ್ವವಿದ್ಯಾಲಯದಲ್ಲಿನ ಈ ಸ್ಥಿತಿಗೆ ಯಾರು ಹೊಣೆ?
ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿನ ಸುತ್ತಮುತ್ತಲ ಪರಿಸರ
TV9 Web
| Edited By: |

Updated on:Jan 11, 2022 | 12:03 PM

Share

ಬೆಂಗಳೂರು: ನಮ್ಮ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ನಾವು ನಮ್ಮ ಪರಿಸರವನ್ನು ಸದಾ ಚೆಂದಗೊಳಿಸಬೇಕು ಎಂದು ಎಷ್ಟೇ ಪಾಠ, ಜಾಗೃತಿ, ಬೀದಿ ನಾಟಕಗಳನ್ನು ಮಾಡಿದರೂ ಜನರಲ್ಲಿ ಸ್ವಲ್ಪವೂ ಈ ಬಗ್ಗೆ ಕಾಳಜಿ ಇದ್ದಂತೆ ಕಾಣುತ್ತಿಲ್ಲ. ಎಲ್ಲೆಂದರಲ್ಲಿ ಕಸ (Garbage) ಹಾಕುವುದು, ತ್ಯಾಜ್ಯ ವಿಲೇವಾರಿ ಮಾಡದೆ ನಿರ್ಲಕ್ಷ್ಯವಹಿಸುವುದು ಸರ್ವೆ ಸಾಮಾನ್ಯ ಎನ್ನುವಂತಾಗಿದೆ. ಅಧಿಕಾರಿಗಳು ಒಂದು ಕಡೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಇನ್ನೊಂದು ಕಡೆ ಜನ ಸಾಮಾನ್ಯರು, ಯುವಕರು ಸುತ್ತಮುತ್ತಲ್ಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳದೆ ನಿರ್ಲಕ್ಷಿಸಿದ್ದಾರೆ. ಇದಕ್ಕೆ ನಿದರ್ಶನ ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿನ (Bengaluru University) ಸುತ್ತಮುತ್ತಲ ಪರಿಸರ.

ಪಶ್ಚಿಮ ಘಟ್ಟಗಳು ಟ್ವಿಟರ್​​ ಖಾತೆ ಈ ಕುರಿತು ಟ್ವೀಟ್​ ಮಾಡಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದ ಸ್ಥಿತಿಗತಿಯ ಬಗ್ಗೆ ಆ ಮೂಲಕ ಬೆಳಕು ಚೆಲ್ಲಿದೆ. ಟ್ವೀಟ್​ನಲ್ಲಿ ಬಾಲಕರ ವಸತಿ ನಿಲಯದ ಸುತ್ತ ಬಿಯರ್​ ಬಾಟಲ್​, ಪ್ಲಾಸ್ಟಿಕ್​ ಮತ್ತು ಇನ್ನಿತರ ತ್ಯಾಜ್ಯಗಳು ಹೇಗೆ ರಾಶಿ ಹಾಕಲಾಗಿದೆ ಎನ್ನುವುದನ್ನು ಫೋಟೋ ಸಮೇತ ಹಂಚಿಕೊಳ್ಳಲಾಗಿದೆ. ಜತೆಗೆ ಟ್ವೀಟ್​ನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ, ಸಚಿವ ಅಶ್ವತ್​ ನಾರಾಯಣ್​ ಮತ್ತು ಇನ್ನಿತರ ಮಾಧ್ಯಮವನ್ನು ಟ್ಯಾಗ್​ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪರಿಸರ ಕಾಳಜಿಯ ಕೊರತೆಯಾದರೆ ಖಂಡಿತಾ ಮುಂದಿನ ದಿನಗಳಲ್ಲಿ ಇದು ದೊಡ್ಡ ಅನಾಹುತಕ್ಕೆ ದಾರಿಯಾಗಲಿದೆ.

ಸಂಶಯಕ್ಕೆ ಕಾರಣವಾದ ನವಿಲಿನ ಗರಿಗಳು ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸತತ ಮೂರನೇ ಬಾರಿಗೆ ನವಿಲಿನ ಗರಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಆದರೆ ಈ ಬಗ್ಗೆ ನಿಖರವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ. ಸದ್ಯ ಈ ಬಗ್ಗೆ  ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿದ್ದು, ಅಧಿಕಾರಿಗಳು ಅದರಲ್ಲೂ ಮುಖ್ಯವಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪಶ್ಚಿಮ ಘಟ್ಟಗಳು ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಪಕ್ಕದಲ್ಲೇ ಕಸದ ರಾಶಿ; ಸಿಬ್ಬಂದಿಯ ನಿರ್ಲಕ್ಷದ ವಿರುದ್ಧ ಜನರ ಆಕ್ರೋಶ

ದೊಡ್ಡಬಳ್ಳಾಪುರದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ: ವಿಧಾನಸಭೆಯಲ್ಲಿ ಶಾಸಕ ವೆಂಕಟರಮಣಯ್ಯ ತೀವ್ರ ಆಕ್ಷೇಪ

Published On - 11:55 am, Tue, 11 January 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!