AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
TV9 Web
| Edited By: |

Updated on: May 25, 2022 | 10:09 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ಗೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ(BS Yediyurappa) ಸಮನ್ಸ್ ಹಿನ್ನೆಲೆ ಅನಾರೋಗ್ಯ ಕಾರಣಕ್ಕೆ ಹಾಜರಾತಿಯಿಂದ‌ ವಿನಾಯಿತಿ ನೀಡುವಂತೆ ಬಿಎಸ್ವೈ ಮನವಿ ಸಲ್ಲಿಸಿದ್ದಾರೆ.

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇಂದು ವಿನಾಯಿತಿ ನೀಡಿ ಜೂ.17ಕ್ಕೆ ಹಾಜರಾಗಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ವಾಸುದೇವರೆಡ್ಡಿ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. 2000-01 ರಲ್ಲಿ ಐಟಿ ಪಾರ್ಕ್‌ಗೆಂದು ಕೆಐಎಡಿಬಿ ಭೂಸ್ವಾಧೀನ ಪ್ರಕರಣದಲ್ಲಿ, ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಕೇಸ್ ಬಗ್ಗೆ ದೂರು ಸಲ್ಲಿಸಲಾಗಿತ್ತು. ಇದನ್ನೂ ಓದಿ: ತಾಂಬೂಲ ಪ್ರಶ್ನೆಗೆ ಮೊದಲು ಮಳಲಿ ದರ್ಗಾ ಮತ್ತು ರಾಮಾಂಜನೇಯ ಭಜನಾ ದೇವಸ್ಥಾನಕ್ಕೆ ಪೊಲೀಸ್ ಸರ್ಪಗಾವಲು

ಬಿ.ಎಸ್‌ ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಿಸಲಾಗಿದೆ ಎಂದು 2013 ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆರೋಪದಲ್ಲಿ ಹುರುಳಿಲ್ಲವೆಂದು ಜನವರಿ 2021 ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ನಡೆಸಲು ಆದೇಶಿಸಿತ್ತು. ಮತ್ತೆ ಲೋಕಾಯುಕ್ತ ಡಿವೈಎಸ್‌ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿತ್ತು.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್