AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
TV9 Web
| Edited By: ಆಯೇಷಾ ಬಾನು|

Updated on: May 25, 2022 | 10:09 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ಗೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ(BS Yediyurappa) ಸಮನ್ಸ್ ಹಿನ್ನೆಲೆ ಅನಾರೋಗ್ಯ ಕಾರಣಕ್ಕೆ ಹಾಜರಾತಿಯಿಂದ‌ ವಿನಾಯಿತಿ ನೀಡುವಂತೆ ಬಿಎಸ್ವೈ ಮನವಿ ಸಲ್ಲಿಸಿದ್ದಾರೆ.

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇಂದು ವಿನಾಯಿತಿ ನೀಡಿ ಜೂ.17ಕ್ಕೆ ಹಾಜರಾಗಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ವಾಸುದೇವರೆಡ್ಡಿ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. 2000-01 ರಲ್ಲಿ ಐಟಿ ಪಾರ್ಕ್‌ಗೆಂದು ಕೆಐಎಡಿಬಿ ಭೂಸ್ವಾಧೀನ ಪ್ರಕರಣದಲ್ಲಿ, ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಕೇಸ್ ಬಗ್ಗೆ ದೂರು ಸಲ್ಲಿಸಲಾಗಿತ್ತು. ಇದನ್ನೂ ಓದಿ: ತಾಂಬೂಲ ಪ್ರಶ್ನೆಗೆ ಮೊದಲು ಮಳಲಿ ದರ್ಗಾ ಮತ್ತು ರಾಮಾಂಜನೇಯ ಭಜನಾ ದೇವಸ್ಥಾನಕ್ಕೆ ಪೊಲೀಸ್ ಸರ್ಪಗಾವಲು

ಬಿ.ಎಸ್‌ ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಿಸಲಾಗಿದೆ ಎಂದು 2013 ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆರೋಪದಲ್ಲಿ ಹುರುಳಿಲ್ಲವೆಂದು ಜನವರಿ 2021 ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ನಡೆಸಲು ಆದೇಶಿಸಿತ್ತು. ಮತ್ತೆ ಲೋಕಾಯುಕ್ತ ಡಿವೈಎಸ್‌ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿತ್ತು.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ