AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು-ಕರ್ಮೇಲರಂ ನಡುವಿನ ರೈಲು ಹಳಿ ಡಬ್ಲಿಂಗ್ ಕಾಮಗಾರಿ 2024ರ ಮಾರ್ಚ್​​ನಲ್ಲಿ ಪೂರ್ಣ

498.73 ಕೋಟಿ ರೂ. ವೆಚ್ಚದ ಬೈಯಪ್ಪನಹಳ್ಳಿ-ಹೊಸೂರು ಡಬ್ಲಿಂಗ್ ಯೋಜನೆಯನ್ನು ಪೂರ್ಣಗೊಳಿಸಲು 2024 ಡಿಸೆಂಬರ್ ಗಡುವು ನೀಡಲಾಗಿದೆ. ಈ ಮಾರ್ಗ ಬೆಳ್ಳಂದೂರು ರೋಡ್​​, ಕರ್ಮೇಲರಂ, ಹುಸ್ಕೂರು, ಹೀಲಲಿಗೆ, ಆನೇಕಲ್ ಮತ್ತು ಮಾರಾಯನಾಯಕನಹಳ್ಳಿ ಕೊನೆಗೆ ಹೊಸೂರಿಗೆ ಸಂಪರ್ಕ ಕಲ್ಪಿಸುತ್ತದೆ.

ಬೆಳ್ಳಂದೂರು-ಕರ್ಮೇಲರಂ ನಡುವಿನ ರೈಲು ಹಳಿ ಡಬ್ಲಿಂಗ್ ಕಾಮಗಾರಿ 2024ರ ಮಾರ್ಚ್​​ನಲ್ಲಿ ಪೂರ್ಣ
ಡಬಲಿಂಗ್​ ಕಾಮಗಾರಿImage Credit source: The Indian Express
ವಿವೇಕ ಬಿರಾದಾರ
|

Updated on:Nov 03, 2023 | 8:03 AM

Share

ಬೆಂಗಳೂರು ನ.03: ಆರ್​​.ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ನಮ್ಮ ಮೆಟ್ರೋ (Metro) ಹಳದಿ ಮಾರ್ಗ ಯಾವಾಗ ಆರಂಭವಾಗುತ್ತದೆ ಎಂದು ಎಲೆಕ್ಟ್ರಾನಿಕ್​ ಸಿಟಿ ನೌಕರರು ಕುತೂಹಲದಿಂದ ಎದರು ನೋಡುತ್ತಿದ್ದಾರೆ. ಈ ನಡುವೆ ಬೈಯಪ್ಪನಹಳ್ಳಿಯಿಂದ ಹೊಸೂರಿಗೆ (Baiyappanahalli-Hosur) ಸಂಪರ್ಕ ಕಲ್ಪಿಸುವ 48 ಕಿಮೀ ರೈಲು ಹಳಿ ಡಬ್ಲಿಂಗ್​ ಕಾಮಗಾರಿ ನಡೆಯುತ್ತಿದೆ. ಬೆಳ್ಳಂದೂರು ರೋಡ್​​-ಕರ್ಮೇಲರಂ ನಡುವಿನ ಕಾಮಗಾರಿ 2024ರ ಮಾರ್ಚ್​​ನಲ್ಲಿ ಪೂರ್ಣಗೊಳ್ಳಲಿದೆ. ಚಂದಾಪುರ ಸಮೀಪದಲ್ಲಿರುವ ಹೀಲಲಿಗೆ ರೈಲು ನಿಲ್ದಾಣವು ಎಲೆಕ್ಟ್ರಾನಿಕ್ಸ್ ಸಿಟಿ-2 ಮತ್ತು ಎಲೆಕ್ಟ್ರಾನಿಕ್ ಸಿಟಿ-1 ರಿಂದ ಕ್ರಮವಾಗಿ 3 ಕಿಮೀ ಮತ್ತು 5 ಕಿಮೀ ದೂರದಲ್ಲಿದೆ.

498.73 ಕೋಟಿ ರೂ. ವೆಚ್ಚದ ಬೈಯಪ್ಪನಹಳ್ಳಿ-ಹೊಸೂರು ಡಬ್ಲಿಂಗ್ ಯೋಜನೆಯನ್ನು ಪೂರ್ಣಗೊಳಿಸಲು 2024 ಡಿಸೆಂಬರ್ ಗಡುವು ನೀಡಲಾಗಿದೆ. ಈ ಮಾರ್ಗ ಬೆಳ್ಳಂದೂರು ರೋಡ್​​, ಕರ್ಮೇಲರಂ, ಹುಸ್ಕೂರು, ಹೀಲಲಿಗೆ, ಆನೇಕಲ್ ಮತ್ತು ಮಾರಾಯನಾಯಕನಹಳ್ಳಿ ಕೊನೆಗೆ ಹೊಸೂರಿಗೆ ಸಂಪರ್ಕ ಕಲ್ಪಿಸುತ್ತದೆ.

ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ (ಕೆ-ರೈಡ್) ಪ್ರಾಜೆಕ್ಟ್‌ಗಳ ನಿರ್ದೇಶಕ ಆರ್‌ಕೆ ಸಿಂಗ್ ಮಾತನಾಡಿ, ಕರ್ಮೇಲರಂನಿಂದ ಹೀಲಲಿಗೆ ನಿಲ್ದಾಣದವರೆಗಿನ 10.5 ಕಿ.ಮೀ. ಉದ್ದ ಮಾರ್ಗ ಈ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತದೆ. ಹಾಗೆ ಬಹಳ ಮುಖ್ಯವಾದ ಬೆಳ್ಳಂದೂರು ರೋಡ್​​ನಿಂದ ಕಾರ್ಮೆಲಾರಂಗೆ ಸಂಪರ್ಕಿಸುವ 3.5 ಕಿಮೀ ಕಾಮಗಾರಿ ಮತ್ತು ಆನೇಕಲ್ ಮತ್ತು ಮಾರನಾಯಕನಹಳ್ಳಿ ನಡುವಿನ 7 ಕಿ.ಮೀ ಉದ್ದ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರು ಸಬ್​ ಅರ್ಬನ್ ರೈಲು ಯೋಜನೆ: ನಾಚಿಕೆಯಿಲ್ಲದೆ ಸುಳ್ಳು ಹೇಳುವ ಸಿದ್ದರಾಮಯ್ಯ, ದಾಖಲೆ ಸಹಿತ ತೇಜಸ್ವಿ ಸೂರ್ಯ ತಿರುಗೇಟು

ಪ್ರಸ್ತುತ ಬೆಳ್ಳಂದೂರು ರೋಡ್ ರೈಲು ನಿಲ್ದಾಣದಲ್ಲಿ​​​ ಒಂದು ರೈಲು ಹಳಿ ಮಾರ್ಗವಿದ್ದು, ಇದನ್ನು ನಾಲ್ಕಕ್ಕೆ ಏರಿಸಲಾಗುವುದು. ಈ ಮೂಲಕ ಒಟ್ಟು ಐದು ಹಳಿಗಳು ಕಾರ್ಯನಿರ್ವಹಿಸುತ್ತದೆ. ಕರ್ಮೇಲರಂ ಮತ್ತು ಹೀಲಲಿಗೆ ನಡುವೆ ಹುಸ್ಕೂರಿನಲ್ಲಿ ಹೊಸ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ. ಇವೆಲ್ಲವೂ ಹೆಚ್ಚಿನ ರೈಲುಗಳನ್ನು ಓಡಿಸಲು ಮೂಲಸೌಕರ್ಯಗಳನ್ನು ನವೀಕರಿಸುವ ಕ್ರಮಗಳಾಗಿವೆ ಎಂದು ತಿಳಿಸಿದರು.

ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಾಲ್ಕು ಹೊಸ ಫ್ಲಾಟ್​ಫಾರ್ಮ್​​ಗಳನ್ನು ನಿರ್ಮಿಸಲಾಗಿದೆ. ಈ ಮೂಲಕ 2024ರ ಮಾರ್ಚ್​​​ನಿಂದ ಕಂಟೋನ್ಮೆಂಟ್‌ನಿಂದ ಹೀಲಲಿಗೆ ಕಡೆಗೆ ಪ್ರತಿ 30 ನಿಮಿಷಗಳಿಗೊಮ್ಮೆ ರೈಲನ್ನು ಓಡಿಸಬಹುದು. ಈ ಹೆಚ್ಚಿನ ರೈಲು ಓಡಿಸಲು ಎರಡು ಹೊಸ ಮೆಮು 8 ಕೋಚ್ ರೈಲುಗಳನ್ನು ಸಿದ್ಧಪಡಿಸಬೇಕಾಗಿದೆ. ಡಬ್ಲಿಂಗ್ ಯೋಜನೆಗೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ ನಡುವಿನ ರಸ್ತೆ ಕೆಳ ಸೇತುವೆಯನ್ನು ಸಹ ವಿಸ್ತರಿಸಲಾಗುತ್ತಿದೆ.

ನಗರ ಸಾರಿಗೆ ತಜ್ಞ ಸಂಜೀವ್ ದ್ಯಾಮ್ಮನವರ್ ಮಾತನಾಡಿ, ಬೆಂಗಳೂರು ಕಂಟೋನ್ಮೆಂಟ್ ಮತ್ತು ವೈಟ್‌ಫೀಲ್ಡ್ ನಡುವಿನ ಚತುಷ್ಪಥ ಯೋಜನೆ ಮತ್ತು ಈ ಡಬಲಿಂಗ್​​ ಯೋಜನೆಯು ಜನರ ಪ್ರಯಾಣದ ಮಾರ್ಗದಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದು. ಚಂದಾಪುರ ಜಂಕ್ಷನ್ ಹೇಲಲಿಗೆ ನಿಲ್ದಾಣದ ಆಸುಪಾಸಿನಲ್ಲಿದೆ. ಇದು ಎಲೆಕ್ಟ್ರಾನಿಕ್ಸ್ ಸಿಟಿ-2 ಗೆ ಸಮೀಪದಲ್ಲಿದೆ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ-1 ರಿಂದ 5 ಕಿ.ಮೀ ದೂರದಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:56 am, Fri, 3 November 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ