AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ: 6 ಜನರಿಗೆ ಮರುಜನ್ಮ

ಬೆಂಗಳೂರಿನ ರಾಜಾಜಿನಗರದ ನಿವಾಸಿ ಮತ್ತು ಸ್ಟೋರ್​ ಮ್ಯಾನೇಜರ್ ಆಗಿದ್ದ ಫರ್ದೀನ್ ಖಾನ್ ಅವರ ಮೆದುಳು ನಿಷ್ಕ್ರಯಗೊಂಡಿದ್ದು, ಅಂಗಾಂಗಳನ್ನು ದಾನ ಮಾಡುವ ಮೂಲಕ ಫರ್ದೀನ್ ಅವರ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.

Bengaluru News: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ: 6 ಜನರಿಗೆ ಮರುಜನ್ಮ
ಅಂಗಾಂಗ ದಾನ
ವಿವೇಕ ಬಿರಾದಾರ
|

Updated on: Jun 11, 2023 | 3:20 PM

Share

ಬೆಂಗಳೂರು: ನಗರದ ರಾಜಾಜಿನಗರದ (Rajajinagar) ನಿವಾಸಿ ಮತ್ತು ಸ್ಟೋರ್​ ಮ್ಯಾನೇಜರ್ ಆಗಿದ್ದ ಫರ್ದೀನ್ ಖಾನ್ (23) ಅವರ ಮೆದುಳು ನಿಷ್ಕ್ರಯಗೊಂಡಿದ್ದು, ಅಂಗಾಂಗಳನ್ನು ದಾನ ಮಾಡುವ ಮೂಲಕ ಫರ್ದೀನ್ ಅವರ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಫರ್ದೀನ್ ಖಾನ್ ಅವರು ಇತ್ತೀಚೆಗೆ ತುಮಕೂರಿನ ಸಿರಾದಿಂದ ಬೆಂಗಳೂರಿಗೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಪರಿಣಾಮ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರ ಸ್ಥಿತಿ ಚಿಂತಾಜನಕವಾಗುತ್ತಿದ್ದಂತೆ ಜೂನ್ 5 ರಂದು ಬೆಳಗಿನ ಜಾವ 1.30 ರ ಹೊತ್ತಿಗೆ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಕೆಲವು ಗಂಟೆಗಳ ನಂತರ ಅವರ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಘೋಷಿಸಿದರು.

ಇದನ್ನೂ ಓದಿ: Superstition: ಅಂಗಾಂಗ ದಾನಕ್ಕೆ ಮೂಢನಂಬಿಕೆ ಅಡ್ಡಿ; ಬೆಂಗಳೂರಿನ ಜನ ಹೆದರುವುದು ಇದಕ್ಕೆ ನೋಡಿ

ವಿಷಯ ತಿಳಿದು ದುಃಖದಲ್ಲಿದ್ದ ಕುಟುಂಬ ಏಕೈಕ ಪುತ್ರ ಫರ್ದೀನ್ ಅವರ ಅಂಗಾಂಗಳನ್ನು ದಾನ ಮಾಡಿದೆ. ಈ ಮೂಲಕ ಆರು ಜನರಿಗೆ ಮರು ಜನ್ಮ ನೀಡಿತು. ಯಶವಂತಪುರದ ಸ್ಪರ್ಶ ಆಸ್ಪತ್ರೆಯಲ್ಲಿ ಫರ್ದೀನ್ ಅವರ ಬಲ ಮೂತ್ರಪಿಂಡ ಮತ್ತು ಯಕೃತ್ತನ್ನು ಯಶಸ್ವಿಯಾಗಿ ರೋಗಿಗಳಿಗೆ ಕಸಿ ಮಾಡಲಾಗಿದ್ದು, ಅವರ ಹೃದಯವನ್ನು ನಾರಾಯಣ ಹೃದಯಾಲಯಕ್ಕೆ ಕಳುಹಿಸಲಾಗಿದೆ. ಅವರ ಎಡ ಮೂತ್ರಪಿಂಡ ಮತ್ತು ಮೇದೋಜ್ಜೀರಕ ಗ್ರಂಥಿಯನ್ನು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಮತ್ತು ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ಕಳುಹಿಸಲಾಗಿದೆ.

ಈ ನಿರ್ಧಾರ ಶ್ಲಾಘನೀಯ. ಅಂಗಾಂಗ ದಾನದಿಂದ ಮತ್ತೊಬ್ಬರಿಗೆ ಮರು ಜನ್ಮ ನೀಡಿದಂತಾಗುತ್ತದೆ ಎಂದು ಸ್ಪರ್ಶ ಆಸ್ಪತ್ರೆಯ ಗ್ರೂಪ್ ಸಿಒಒ ಜೋಸೆಫ್ ಪಸಂಗ ಹೇಳಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್