AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ: 6 ಜನರಿಗೆ ಮರುಜನ್ಮ

ಬೆಂಗಳೂರಿನ ರಾಜಾಜಿನಗರದ ನಿವಾಸಿ ಮತ್ತು ಸ್ಟೋರ್​ ಮ್ಯಾನೇಜರ್ ಆಗಿದ್ದ ಫರ್ದೀನ್ ಖಾನ್ ಅವರ ಮೆದುಳು ನಿಷ್ಕ್ರಯಗೊಂಡಿದ್ದು, ಅಂಗಾಂಗಳನ್ನು ದಾನ ಮಾಡುವ ಮೂಲಕ ಫರ್ದೀನ್ ಅವರ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.

Bengaluru News: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ: 6 ಜನರಿಗೆ ಮರುಜನ್ಮ
ಅಂಗಾಂಗ ದಾನ
ವಿವೇಕ ಬಿರಾದಾರ
|

Updated on: Jun 11, 2023 | 3:20 PM

Share

ಬೆಂಗಳೂರು: ನಗರದ ರಾಜಾಜಿನಗರದ (Rajajinagar) ನಿವಾಸಿ ಮತ್ತು ಸ್ಟೋರ್​ ಮ್ಯಾನೇಜರ್ ಆಗಿದ್ದ ಫರ್ದೀನ್ ಖಾನ್ (23) ಅವರ ಮೆದುಳು ನಿಷ್ಕ್ರಯಗೊಂಡಿದ್ದು, ಅಂಗಾಂಗಳನ್ನು ದಾನ ಮಾಡುವ ಮೂಲಕ ಫರ್ದೀನ್ ಅವರ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಫರ್ದೀನ್ ಖಾನ್ ಅವರು ಇತ್ತೀಚೆಗೆ ತುಮಕೂರಿನ ಸಿರಾದಿಂದ ಬೆಂಗಳೂರಿಗೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಪರಿಣಾಮ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರ ಸ್ಥಿತಿ ಚಿಂತಾಜನಕವಾಗುತ್ತಿದ್ದಂತೆ ಜೂನ್ 5 ರಂದು ಬೆಳಗಿನ ಜಾವ 1.30 ರ ಹೊತ್ತಿಗೆ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಕೆಲವು ಗಂಟೆಗಳ ನಂತರ ಅವರ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಘೋಷಿಸಿದರು.

ಇದನ್ನೂ ಓದಿ: Superstition: ಅಂಗಾಂಗ ದಾನಕ್ಕೆ ಮೂಢನಂಬಿಕೆ ಅಡ್ಡಿ; ಬೆಂಗಳೂರಿನ ಜನ ಹೆದರುವುದು ಇದಕ್ಕೆ ನೋಡಿ

ವಿಷಯ ತಿಳಿದು ದುಃಖದಲ್ಲಿದ್ದ ಕುಟುಂಬ ಏಕೈಕ ಪುತ್ರ ಫರ್ದೀನ್ ಅವರ ಅಂಗಾಂಗಳನ್ನು ದಾನ ಮಾಡಿದೆ. ಈ ಮೂಲಕ ಆರು ಜನರಿಗೆ ಮರು ಜನ್ಮ ನೀಡಿತು. ಯಶವಂತಪುರದ ಸ್ಪರ್ಶ ಆಸ್ಪತ್ರೆಯಲ್ಲಿ ಫರ್ದೀನ್ ಅವರ ಬಲ ಮೂತ್ರಪಿಂಡ ಮತ್ತು ಯಕೃತ್ತನ್ನು ಯಶಸ್ವಿಯಾಗಿ ರೋಗಿಗಳಿಗೆ ಕಸಿ ಮಾಡಲಾಗಿದ್ದು, ಅವರ ಹೃದಯವನ್ನು ನಾರಾಯಣ ಹೃದಯಾಲಯಕ್ಕೆ ಕಳುಹಿಸಲಾಗಿದೆ. ಅವರ ಎಡ ಮೂತ್ರಪಿಂಡ ಮತ್ತು ಮೇದೋಜ್ಜೀರಕ ಗ್ರಂಥಿಯನ್ನು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಮತ್ತು ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ಕಳುಹಿಸಲಾಗಿದೆ.

ಈ ನಿರ್ಧಾರ ಶ್ಲಾಘನೀಯ. ಅಂಗಾಂಗ ದಾನದಿಂದ ಮತ್ತೊಬ್ಬರಿಗೆ ಮರು ಜನ್ಮ ನೀಡಿದಂತಾಗುತ್ತದೆ ಎಂದು ಸ್ಪರ್ಶ ಆಸ್ಪತ್ರೆಯ ಗ್ರೂಪ್ ಸಿಒಒ ಜೋಸೆಫ್ ಪಸಂಗ ಹೇಳಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?