AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuva Nidhi Scheme: ಯುವನಿಧಿ ಯೋಜನೆಗೆ ಈವರೆಗೆ 6062 ಅಭ್ಯರ್ಥಿಗಳು ನೋಂದಣಿ

ಯುವನಿಧಿ ಯೋಜನೆ (Yuva Nidhi Scheme)ಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ.

Yuva Nidhi Scheme: ಯುವನಿಧಿ ಯೋಜನೆಗೆ ಈವರೆಗೆ 6062 ಅಭ್ಯರ್ಥಿಗಳು ನೋಂದಣಿ
ಯುವನಿಧಿ ಯೋಜನೆ
TV9 Web
| Edited By: |

Updated on:Dec 28, 2023 | 10:39 PM

Share

ಬೆಂಗಳೂರು, ಡಿ.28: ವಿಧಾನಸೌಧದ ಬ್ಯಾಂಕ್ವೆಟ್​​ಹಾಲ್​​ನಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಡಿ.26 ರಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದ್ದರು. ಇಂದಿನವರೆಗೆ ಯುವನಿಧಿ ಯೋಜನೆ (Yuva Nidhi Scheme)ಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಅದೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸೇರಿದವರು ಕೂಡ ಅರ್ಜಿ ಸಲ್ಲಿಸಬಹುದು. ಯಾವುದೇ ಉದ್ಯೋಗಕ್ಕೆ ಸೇರದೆ ಇರುವವರು ಅರ್ಹರಾಗುತ್ತಾರೆ. ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಮಾತ್ರ ಇಲ್ಲಿ ಅವಕಾಶವಿದೆ.

ಇದನ್ನೂ ಓದಿ:Yuvanidhi Application: ಯುವನಿಧಿ ಸ್ಕೀಂಗೆ ಅರ್ಜಿ ಹಾಕುವುದು ಎಲ್ಲಿ, ಹೇಗೆ?

ಇನ್ನು ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಆರ್ಥಿಕ ನೆರವು. ಹಾಗೂ ಡಿಪ್ಲೋಮಾ ಪೂರೈಸಿದವರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ಸಿಗಲಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ರೂ. ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟ್​ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Thu, 28 December 23

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ