AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ. ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ […]

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 27, 2020 | 7:02 PM

Share

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ.

ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ ತಪಾಸಣೆ: ಕಳೆದ 14 ದಿನಗಳಿಂದ ಈಚೆಗೆ ಚೀನಾದಿಂದ ಬೆಂಗಳೂರಿನ ಏರ್​ಪೋರ್ಟ್​​ಗೆ ಬಂದಿಳಿದ 392 ಪ್ರಯಾಣಿಕರನ್ನ ಥರ್ಮಲ್ ಸ್ಕ್ಯಾನರ್ ತಪಾಸಣೆಗೆ ಒಳಪಡಿಸಲಾಗಿತ್ತು. ಸದ್ಯ ಯಾವ ಪ್ರಯಾಣಿಕರಲ್ಲೂ ಮಹಾಮಾರಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಏರ್​ಪೋರ್ಟ್ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಲ್ಲ ಕೊರೊನಾ ಭೀತಿ: ಕೊರೊನಾ ಸೋಂಕು ಶಂಕೆ ಹಿನ್ನೆಲೆ ಚೀನಾದಿಂದ ಭಾರತಕ್ಕೆ ಬರುವ ಪ್ರತೀ ಪ್ರಯಾಣಿಕರನ್ನು ತಪಾಸಣೆಗೆ ಬಳಪಡಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ರಾಷ್ಟ್ರೀಯ ತಜ್ಞರ ತಂಡ ಭೇಟಿ ನೀಡಿದೆ. ಯಾವ ರೀತಿ ಚಿಕಿತ್ಸೆ ನೀಡಬೇಕು, ಹೇಗೆ ತಯಾರಿರಬೇಕು. ಯಾವ ಔಷಧ ನೀಡಬೇಕು, ಚಿಕಿತ್ಸೆ ಬಗ್ಗೆ ವೈದ್ಯರಿಗೆ ಸಲಹೆ ನೀಡುತ್ತಿದ್ದಾರೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ಮೂವರ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು, ಓರ್ವನಿಗೆ ಸೋಂಕು ಇಲ್ಲ ಎಂಬುವುದು ದೃಡಪಟ್ಟಿದೆ. ಮತ್ತಿಬ್ಬರು ರೋಗಿಗಳ ರಕ್ತ ಮಾದರಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ರಾಜೀವ್‌ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ನಾಗರಾಜ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಂಬಂಧ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಕೊರೊನಾ ವೈರಸ್ ಬಗ್ಗೆ ಆತಂಕಪಡಬೇಕಾಗಿಲ್ಲ. ಏರ್‌ಪೋರ್ಟ್‌ನಲ್ಲೂ ಪ್ರಯಾಣಿಕರ ತಪಾಸಣೆ ಮಾಡಲಾಗ್ತಿದೆ. ಇದುವರೆಗೆ 2,672 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಯಾರಲ್ಲಿಯೂ ‘ಕೊರೊನಾ’ ಸೋಂಕು ಪತ್ತೆಯಾಗಿಲ್ಲ ಎಂದು ಡಾ.ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ಚೀನಾದಲ್ಲಿ ಈ ಭಯಾನಕ ವೈರೆಸ್​ಗೆ 85 ಮಂದಿ ಮೃತಪಟ್ಟಿದ್ದಾರೆ.

Published On - 12:14 pm, Mon, 27 January 20

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು