AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ. ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ […]

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!
ಸಾಧು ಶ್ರೀನಾಥ್​
|

Updated on:Jan 27, 2020 | 7:02 PM

Share

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ.

ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ ತಪಾಸಣೆ: ಕಳೆದ 14 ದಿನಗಳಿಂದ ಈಚೆಗೆ ಚೀನಾದಿಂದ ಬೆಂಗಳೂರಿನ ಏರ್​ಪೋರ್ಟ್​​ಗೆ ಬಂದಿಳಿದ 392 ಪ್ರಯಾಣಿಕರನ್ನ ಥರ್ಮಲ್ ಸ್ಕ್ಯಾನರ್ ತಪಾಸಣೆಗೆ ಒಳಪಡಿಸಲಾಗಿತ್ತು. ಸದ್ಯ ಯಾವ ಪ್ರಯಾಣಿಕರಲ್ಲೂ ಮಹಾಮಾರಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಏರ್​ಪೋರ್ಟ್ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಲ್ಲ ಕೊರೊನಾ ಭೀತಿ: ಕೊರೊನಾ ಸೋಂಕು ಶಂಕೆ ಹಿನ್ನೆಲೆ ಚೀನಾದಿಂದ ಭಾರತಕ್ಕೆ ಬರುವ ಪ್ರತೀ ಪ್ರಯಾಣಿಕರನ್ನು ತಪಾಸಣೆಗೆ ಬಳಪಡಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ರಾಷ್ಟ್ರೀಯ ತಜ್ಞರ ತಂಡ ಭೇಟಿ ನೀಡಿದೆ. ಯಾವ ರೀತಿ ಚಿಕಿತ್ಸೆ ನೀಡಬೇಕು, ಹೇಗೆ ತಯಾರಿರಬೇಕು. ಯಾವ ಔಷಧ ನೀಡಬೇಕು, ಚಿಕಿತ್ಸೆ ಬಗ್ಗೆ ವೈದ್ಯರಿಗೆ ಸಲಹೆ ನೀಡುತ್ತಿದ್ದಾರೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ಮೂವರ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು, ಓರ್ವನಿಗೆ ಸೋಂಕು ಇಲ್ಲ ಎಂಬುವುದು ದೃಡಪಟ್ಟಿದೆ. ಮತ್ತಿಬ್ಬರು ರೋಗಿಗಳ ರಕ್ತ ಮಾದರಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ರಾಜೀವ್‌ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ನಾಗರಾಜ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಂಬಂಧ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಕೊರೊನಾ ವೈರಸ್ ಬಗ್ಗೆ ಆತಂಕಪಡಬೇಕಾಗಿಲ್ಲ. ಏರ್‌ಪೋರ್ಟ್‌ನಲ್ಲೂ ಪ್ರಯಾಣಿಕರ ತಪಾಸಣೆ ಮಾಡಲಾಗ್ತಿದೆ. ಇದುವರೆಗೆ 2,672 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಯಾರಲ್ಲಿಯೂ ‘ಕೊರೊನಾ’ ಸೋಂಕು ಪತ್ತೆಯಾಗಿಲ್ಲ ಎಂದು ಡಾ.ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ಚೀನಾದಲ್ಲಿ ಈ ಭಯಾನಕ ವೈರೆಸ್​ಗೆ 85 ಮಂದಿ ಮೃತಪಟ್ಟಿದ್ದಾರೆ.

Published On - 12:14 pm, Mon, 27 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ