AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ. ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ […]

ಕೊರೊನಾ ಮಹಾಮಾರಿ: ಭಾರತಕ್ಕೂ ಕಾಡಲಾರಂಭಿಸಿತಾ ಆತಂಕ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 27, 2020 | 7:02 PM

Share

ಬೆಂಗಳೂರು: ಕೊರೊನಾ.. ಈ ಹೆಸರು ಕೇಳಿದ್ರೆ ಸಾಕು ಇಡೀ ವಿಶ್ವವೇ ಬೆಚ್ಚಿ ಬೀಳುತ್ತಿದೆ. ಚೀನಾವನ್ನ ಪತರುಗಟ್ಟುವಂತೆ ಮಾಡಿದ ಕೊರೊನಾ ಈಗ ಪ್ರಪಂಚದ ವಿವಿಧ ದೇಶಗಳನ್ನು ಗಢಗಢ ನಡುಗಿಸಿದೆ. ತಾನು ಯಾರಿಗೂ ಕಮ್ಮಿ ಇಲ್ಲ, ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆ ಎಂದು ಬೀಗುವ ಚೀನಾ ಕೊರೊನಾ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಭಯಾನಕ ವೈರೆಸ್​ನಿಂದ ತಪ್ಪಿಸಿಕೊಳ್ಳೋಕೆ ಹರಸಾಹಸ ಪಡುತ್ತಿದೆ. ಇದೇ ಬೆನ್ನಲ್ಲೇ ಈಗ ಈ ವೈರೆಸ್ ಭಾರತಕ್ಕೂ ಬಂದಿದಿಯ ಎಂಬ ಭೀತಿ ವ್ಯಕ್ತವಾಗಿದೆ.

ಚೀನಾದಿಂದ ಬೆಂಗಳೂರಿಗೆ ಬಂದ ಪ್ರವಾಸಿಗರ ತಪಾಸಣೆ: ಕಳೆದ 14 ದಿನಗಳಿಂದ ಈಚೆಗೆ ಚೀನಾದಿಂದ ಬೆಂಗಳೂರಿನ ಏರ್​ಪೋರ್ಟ್​​ಗೆ ಬಂದಿಳಿದ 392 ಪ್ರಯಾಣಿಕರನ್ನ ಥರ್ಮಲ್ ಸ್ಕ್ಯಾನರ್ ತಪಾಸಣೆಗೆ ಒಳಪಡಿಸಲಾಗಿತ್ತು. ಸದ್ಯ ಯಾವ ಪ್ರಯಾಣಿಕರಲ್ಲೂ ಮಹಾಮಾರಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಏರ್​ಪೋರ್ಟ್ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಲ್ಲ ಕೊರೊನಾ ಭೀತಿ: ಕೊರೊನಾ ಸೋಂಕು ಶಂಕೆ ಹಿನ್ನೆಲೆ ಚೀನಾದಿಂದ ಭಾರತಕ್ಕೆ ಬರುವ ಪ್ರತೀ ಪ್ರಯಾಣಿಕರನ್ನು ತಪಾಸಣೆಗೆ ಬಳಪಡಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ರಾಷ್ಟ್ರೀಯ ತಜ್ಞರ ತಂಡ ಭೇಟಿ ನೀಡಿದೆ. ಯಾವ ರೀತಿ ಚಿಕಿತ್ಸೆ ನೀಡಬೇಕು, ಹೇಗೆ ತಯಾರಿರಬೇಕು. ಯಾವ ಔಷಧ ನೀಡಬೇಕು, ಚಿಕಿತ್ಸೆ ಬಗ್ಗೆ ವೈದ್ಯರಿಗೆ ಸಲಹೆ ನೀಡುತ್ತಿದ್ದಾರೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ಮೂವರ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು, ಓರ್ವನಿಗೆ ಸೋಂಕು ಇಲ್ಲ ಎಂಬುವುದು ದೃಡಪಟ್ಟಿದೆ. ಮತ್ತಿಬ್ಬರು ರೋಗಿಗಳ ರಕ್ತ ಮಾದರಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ರಾಜೀವ್‌ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ನಾಗರಾಜ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಂಬಂಧ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಕೊರೊನಾ ವೈರಸ್ ಬಗ್ಗೆ ಆತಂಕಪಡಬೇಕಾಗಿಲ್ಲ. ಏರ್‌ಪೋರ್ಟ್‌ನಲ್ಲೂ ಪ್ರಯಾಣಿಕರ ತಪಾಸಣೆ ಮಾಡಲಾಗ್ತಿದೆ. ಇದುವರೆಗೆ 2,672 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಯಾರಲ್ಲಿಯೂ ‘ಕೊರೊನಾ’ ಸೋಂಕು ಪತ್ತೆಯಾಗಿಲ್ಲ ಎಂದು ಡಾ.ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ಚೀನಾದಲ್ಲಿ ಈ ಭಯಾನಕ ವೈರೆಸ್​ಗೆ 85 ಮಂದಿ ಮೃತಪಟ್ಟಿದ್ದಾರೆ.

Published On - 12:14 pm, Mon, 27 January 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?