AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ

ಬೆಂಗಳೂರಿನಲ್ಲಿ ಒಂದು ವಾರ ಮಳೆ ಮತ್ತೊಂದು ವಾರ ಬಿಸಿಲು ಹಾಗೂ ಸೆಖೆಯ ವಾತವರಣ ಜನರನ್ನು ಹೈರಾಣು ಮಾಡುತ್ತಿದೆ. ಬದಲಾಗುತ್ತಿರುವ ಬೆಂಗಳೂರಿನ ಹವಾಮಾನ ಸಿಲಿಕಾನ್ ಸಿಟಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಜೊತೆ ವೈರಾಣು ಜ್ವರ ಪ್ರಕರಣ ಹೆಚ್ಚಾಗಿದ್ದು, ಅದರಲ್ಲೂ ಪುಟಾಣಿ ಮಕ್ಕಳು ಪರದಾಡುವಂತಾಗಿದೆ.

ಬೆಂಗಳೂರು: ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 - 30 ರಷ್ಟು ಏರಿಕೆ
ಸಾಂದರ್ಭಿಕ ಚಿತ್ರImage Credit source: Getty Images
Vinay Kashappanavar
| Edited By: |

Updated on: Sep 14, 2024 | 11:17 AM

Share

ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ. ವೈರಾಣು ಜ್ವರದ ಜೊತೆ ILI ಪ್ರಕರಣಗಳ ಏರಿಕೆಯೂ ಕಂಡು ಬರುತ್ತಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಪ್ರತಿನಿತ್ಯ 550 ರಿಂದ 600 ಹೊರ ರೋಗಿಗಳು ಚಿಕಿತ್ಸಗೆ ಬರುತ್ತಿದ್ದಾರೆ. ಈ ಪೈಕಿ ಶೇ 50 ರಷ್ಟು ಮಕ್ಕಳಲ್ಲಿ ವೈರಾಣು ಜ್ವರ ಕಂಡು ಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳ ವಿಭಾಗದಲ್ಲಿಯೂ ವೈರಾಣು ಜ್ವರ ಕಂಡು ಬರುತ್ತಿದೆ.

ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ ಹೆಚ್ಚಾಗಿ ಈ ಜ್ವರ ಕಂಡು ಬರುತ್ತಿದೆ. ಮನೆಯಲ್ಲಿ ಮಕ್ಕಳಿಂದ ಮನೆ ಮಂದಿಗೆಲ್ಲ ಈ ವೈರಾಣು ಸೋಂಕು ಹರಡುತ್ತಿದ್ದು ಎಚ್ಚರಿಕೆ ವಹಿಸುವಂತೆ ವೈದ್ಯರು ಸೂಚಸಿದ್ದಾರೆ. ಅದರಲ್ಲೂ ಚಿಣ್ಣರಲ್ಲಿ ಕಂಡು ಬರುತ್ತಿರುವ ಈ ಸೋಂಕಿನ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಪೋಷಕರಿಗೆ ತಿಳಸಿದ್ದಾರೆ. ಇದರ ಜೊತೆಗೆ ILI ಕೇಸ್ ಏರಿಕೆ ಕೂಡಾ ರಾಜಧಾನಿಯಲ್ಲಿ ಕಂಡು ಬರ್ತಿದೆ ಜುಲೈನಲ್ಲಿ 72 ಇದ್ದ ಪ್ರಕರಣಗಳ ಸಂಖ್ಯೆ ಸೆಪ್ಟಂಬರ್ ವೇಳೆಗೆ 261 ಕ್ಕೆ ಏರಿಕೆ ಕಂಡಿದೆ ಹೀಗಾಗಿ ಪೋಷಕರು ನಿಗಾವಹಿಸಬೇಕಿದೆ. ಮಕ್ಕಳ ಆರೋಗ್ಯದಲ್ಲಿ ಬದಲಾಣವೆಯಾದರೂ ನಿರ್ಲಕ್ಷ್ಯವಹಿದಂತೆ ಸೂಚಿಸಿದ್ದಾರೆ.

ವೈರಾಣು ಜ್ವರದ ಲಕ್ಷಣಗಳೇನು?

  • ತೀವ್ರ ಜ್ವರ
  • ಉಸಿರಾಟದ ಸಮಸ್ಯೆ
  • ನೆಗಡಿ ಕೆಮ್ಮು
  • ತೀವ್ರವಾದ ಸುಸ್ತು
  • ಮೈಕೈ ನೋವು
  • ತಲೆ ಸಿಡಿತ, ಚಳಿ ಜ್ವರ
  • ಕೆಲವು ಮಕ್ಕಳಲ್ಲಿ ಶೀತ ಜ್ವರ ಕಂಡು ಬರುತ್ತದೆ

ಇದನ್ನೂ ಓದಿ: ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಒಟ್ಟಿನಲ್ಲಿ ಡೆಂಘಿ ಜ್ವರದ ಹಾವಳಿ ಜೊತೆಗೆ ಈಗ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಾಣು ಜ್ವರ ಪೋಷಕರಲ್ಲಿ ಆತಂಕಕ್ಕೆ ಕಾರವಾಗಿದೆ. ಹೀಗಾಗಿ ಜನರು ಸ್ವಚ್ಛತೆ, ಆರೋಗ್ಯಕರ ಆಹಾರ ಸೇವನೆ ಮಾಡುವುದು ಅತೀ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ