AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Variant: ಬೆಂಗಳೂರಲ್ಲಿ 268 ಜನರಿಗೆ ಡೆಲ್ಟಾ ವೈರಸ್​; ಇಬ್ಬರಿಗೆ ಕಪ್ಪಾ, 38 ಮಂದಿಗೆ ಡೆಲ್ಟಾ ರೂಪಾಂತರಿ ಸೋಂಕು ದೃಢ

ಬೆಂಗಳೂರಿನಲ್ಲಿ ಈವರೆಗೆ 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, 268 ಜನರ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್ ಕಂಡುಬಂದಿದೆ. ಅಲ್ಲದೇ, 38 ಜನರಲ್ಲಿ ಡೆಲ್ಟಾ ವೈರಾಣುವಿನ ಮತ್ತೊಂದು ಪ್ರಭೇದ ಇರುವುದು ದೃಢಪಟ್ಟಿದೆ.

Delta Variant: ಬೆಂಗಳೂರಲ್ಲಿ 268 ಜನರಿಗೆ ಡೆಲ್ಟಾ ವೈರಸ್​; ಇಬ್ಬರಿಗೆ ಕಪ್ಪಾ, 38 ಮಂದಿಗೆ ಡೆಲ್ಟಾ ರೂಪಾಂತರಿ  ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 08, 2021 | 11:04 AM

Share

ಬೆಂಗಳೂರು: ಕರ್ನಾಟಕದಲ್ಲಿ ಪರಿಸ್ಥಿತಿಯನ್ನು ಅಲ್ಲೋಲಕಲ್ಲೋಲಗೊಳಿಸಿದ್ದ ಕೊರೊನಾ ಸೋಂಕು ಸದ್ಯ ನಿಯಂತ್ರಣದಲ್ಲಿದ್ದಂತೆ ಮೇಲ್ನೋಟಕ್ಕೆ ಕಾಣುತ್ತಿದೆಯಾದರೂ ಮನೆ ಮನೆ ಸರ್ವೇ ಸೇರಿದಂತೆ ಬೆಂಗಳೂರಿನಲ್ಲಿ ಲಭ್ಯವಾಗುತ್ತಿರುವ ಇತರೆ ಅಂಕಿ ಅಂಶಗಳು ಆತಂಕವನ್ನು ಜೀವಂತವಾಗಿಡುತ್ತಿವೆ. ಬೆಂಗಳೂರಿನಲ್ಲಿ ಈವರೆಗೆ 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, 268 ಜನರ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್ ಕಂಡುಬಂದಿದೆ. ಅಲ್ಲದೇ, 38 ಜನರಲ್ಲಿ ಡೆಲ್ಟಾ ವೈರಾಣುವಿನ ಮತ್ತೊಂದು ಪ್ರಭೇದ ಇರುವುದು ದೃಢಪಟ್ಟಿದೆ.

ಇನ್ನೊಂದೆಡೆ, ಕೇರಳದಲ್ಲಿ ಉಲ್ಬಣಗೊಂಡಿರುವ ನಿಫಾ ವೈರಸ್​ ಕೂಡಾ ಭೀತಿ ಹೆಚ್ಚಲು ಕಾರಣವಾಗಿದ್ದು, ನಿಫಾ ವೈರಸ್ ಜತೆಗೆ ಇದೀಗ ಡೆಲ್ಟಾ ಪ್ರಭೇದ ಕಂಡಿರುವುದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬಂದವರಲ್ಲಿ ಕೊರೊನಾ ಸೋಂಕು ಧೃಡವಾಗಿರುವುದರಿಂದ ಸೋಂಕಿತರಿಂದ ಸಂಗ್ರಹಿಸಿದ ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸ್‌ಗೆ ಕಳುಹಿಸಲಾಗಿದೆ.

22,362 ಜನರಿಗೆ ಕೊರೊನಾ ಸೋಂಕು ಪತ್ತೆ ಬಿಬಿಎಂಪಿಯಿಂದ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯಲ್ಲಿ 22,362 ಜನರಿಗೆ ಕೊರೊನಾ ಸೋಂಕು ಸಕ್ರಿಯವಾಗಿರುವುದು ಪತ್ತೆಯಾಗಿದೆ. 21 ದಿನಗಳಲ್ಲಿ 7,11,648 ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 22,362 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಆತಂಕಕಾರಿ ವಿಚಾರವೆಂದರೆ ಸದರಿ ಪರೀಕ್ಷೆಗೆ ಒಳಪಟ್ಟವರೆಲ್ಲರೂ ತಮಗೆ ಸೋಂಕಿಲ್ಲವೆಂದು ಭಾವಿಸಿ ಮನೆಯಲ್ಲೇ ಇದ್ದರು. ಇವರ್ಯಾರಿಗೂ ಸೋಂಕಿನ ಲಕ್ಷಣಗಳಾಗಲೀ, ತೀವ್ರ ತೊಂದರೆಯಾಗಲೀ ಬಾಧಿಸದ ಕಾರಣ ಕೊರೊನಾಕ್ಕೆ ತುತ್ತಾಗಿರುವ ಅಂದಾಜೇ ಇರಲಿಲ್ಲ. ಆದರೆ, ಬಿಬಿಎಂಪಿ ವೈದ್ಯರು ಮನೆಗೆ ಬಂದು ತಪಾಸಣೆ ಮಾಡಿದಾಗಲೇ ಸೋಂಕು ಇರುವುದು ಧೃಡವಾಗಿದೆ.

ಬಿಬಿಎಂಪಿ ಮನೆ ಮನೆ ಆರೋಗ್ಯ ಸಮೀಕ್ಷೆಯಲ್ಲಿ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ಯೋಜನೆಯಡಿ ಸಮೀಕ್ಷೆ ಮಾಡಲಾಗಿತ್ತು. ಇದರಲ್ಲಿ 21 ದಿನಗಳ ಅವಧಿಯಲ್ಲಿ 7,11,648 ಜನರ ಆರೋಗ್ಯ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ವೇಳೆ 22,362 ಜನರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ 22 ಸಾವಿರ ಜನರಿಗೆ ತಮ್ಮಲ್ಲಿ‌ ಕೊರೊನಾ‌ ಸೋಂಕು ಇದೆ ಎಂಬ ವಿಚಾರವೇ ಗೊತ್ತಿರಲಿಲ್ಲವಾದ್ದರಿಂದ ಅವರು ಎಂದಿನಂತೆ ಇದ್ದರು. ಬಿಬಿಎಂಪಿ ವೈದ್ಯರು ಮನೆ ಮನೆಗೂ ಹೋಗಿ ತಪಾಸಣೆ ಮಾಡಿದ್ದರಿಂದಷ್ಟೇ ಸೋಂಕು ಇರುವ ವಿಚಾರ ಬೆಳಕಿಗೆ ಬಂದಿದೆ.  ಇದು ಆಘಾತಕಾರಿ ಬೆಳವಣಿಗೆಯ ಮುನ್ಸೂಚನೆಯಾಗಿದ್ದು ಒಂದು ವೇಳೆ ಹೀಗೆ ಲಕ್ಷಣಗಳಿಲ್ಲದೇ ಸೋಂಕು ಹಬ್ಬುತ್ತಾ ಹೋಗಿ ಏಕಾಏಕಿ ಹೆಚ್ಚಳವಾದಲ್ಲಿ ಮೂರನೇ ಅಲೆ ಗಂಭೀರವಾಗಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಇದೇ ಹೊತ್ತಿನಲ್ಲಿ ಬಿಬಿಎಂಪಿ ಡೆತ್ ಆಡಿಟ್ ವರದಿಯನ್ನು (BBMP Death Audit Report) ತಯಾರಿಸಿದ್ದು ಅದರಲ್ಲಿ ಸಾವಿಗೆ ಕಾರಣವಾದ ಸಂಗತಿಯ ಅಸಲಿಯತ್ತು ಬಯಲಾಗಿದೆ. ಕೊರೊನಾ 2 ನೇ ಅಲೆಯಲ್ಲಿ ಡಯಾಬಿಟಿಸ್ ಹಾಗೂ ಹೈಪರ್ ಟೆನ್ಷನ್ ಇದ್ದವರೇ ಅತೀ ಹೆಚ್ಚು ಸಂಖ್ಯೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ ಡೆತ್ ಆಡಿಟ್ ವರದಿಯಲ್ಲಿ ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಿಸಿದ 30-40 ಗಂಟೆಗಳಲ್ಲೇ ಡಯಾಬಿಟಿಸ್ ಹಾಗೂ ಹೈಪರ್ ಟೆನ್ಷನ್ ಇದ್ದವರು ಕೊನೆಯುಸಿರೆಳೆದಿದ್ದಾರೆ. ಸೋಂಕು ಕಾಣಿಸಿಕೊಂಡ ಡಯಾಬಿಟಿಸ್ ಹಾಗೂ ಹೈಪರ್ ಟೆನ್ಷನ್ ಇದ್ದ ರೋಗಿಗಳಲ್ಲೇ ಮರಣ ಪ್ರಮಾಣ ಹೆಚ್ಚಿತ್ತು ಎನ್ನುವ ಅಂಶ ಇದೀಗ ಹೊರಬಿದ್ದಿದೆ.

ಇದನ್ನೂ ಓದಿ: ಡಯಾಬಿಟಿಸ್​, ಹೈಪರ್​ ಟೆನ್ಷನ್​ ಇದ್ದ ಕೊರೊನಾ ಸೋಂಕಿತರು ಬೇಗ ಸಾವಿಗೀಡಾಗಿದ್ದಾರೆ: ಬಿಬಿಎಂಪಿ ಡೆತ್​ ಆಡಿಟ್​ ವರದಿ ಹೇಳಿದ ಸತ್ಯ 

Nipah Virus: ಕೊವಿಡ್​ಗಿಂತಲೂ ಅಪಾಯಕಾರಿಯಾಗಿರುವ ನಿಫಾ ವೈರಸ್ ಬಗ್ಗೆ ನಿಮಗೆಷ್ಟು ಗೊತ್ತು?

(Bengaluru 268 people infected for Delta variant 2 of them have Kappa infection says report)

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ