AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೂವರು ಮಕ್ಕಳನ್ನು ಕಲಾಸಿಪಾಳ್ಯ ಪೊಲೀಸರು ಪತ್ತೆಹಚ್ಚಿದ್ದಾರೆ.

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ
ಕಲಾಸಿಪಾಳ್ಯ ಪೊಲೀಸ್​ ಠಾಣೆ
TV9 Web
| Edited By: |

Updated on:Oct 10, 2022 | 10:41 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೂವರು ಮಕ್ಕಳನ್ನು (Children) ಕಲಾಸಿಪಾಳ್ಯ ಪೊಲೀಸರು ಪತ್ತೆಹಚ್ಚಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ಬಳಿ ಇಬ್ಬರು ಮತ್ತು ಕೋಲಾರ ಜಿಲ್ಲೆ ಮಾಲೂರು ಬಳಿ ಮತ್ತೊಂದು ಮಗು ಪತ್ತೆಯಾಗಿದೆ. ನಗೀನಾ, (೧೫) ರುಕ್ಸಾನ,(೫) ಹಸನ್ (೧) ಎಂಬ ಮೂವರು ಮಕ್ಕಳು ಆಟವಾಡುತ್ತಾ ನಾಪತ್ತೆಯಾಗಿದ್ದರು. ಈ ಬಗ್ಗೆ ಟಿವಿ9 ನಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೆ ಪೊಲೀಸರು ಮೂರು ಮಕ್ಕಳನ್ನು ಪತ್ತೆ ಹಚ್ಚಿದ್ದಾರೆ.

ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ಯುವಕ

ಮಧ್ಯಪ್ರದೇಶ: ಇಂದೋರ್‌ನಲ್ಲಿ ಶುಕ್ರವಾರ ರಾತ್ರಿ 19 ವರ್ಷದ ಯುವಕ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಸೈಟ್‌ನಿಂದ ಸಾಕ್ಷ್ಯದ ತುಣುಕುಗಳನ್ನು ಅಳಿಸಿಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸಂಬಂಧಿಕರು ಮೃತರ ರಕ್ತದ ಕಲೆಗಳನ್ನು ತೊಳೆದಿದ್ದರೆ ಎಂದು ಎಸಿಪಿ ವಿಪಿ ಶರ್ಮಾ ಎಎನ್‌ಐಗೆ ತಿಳಿಸಿದ್ದಾರೆ, ಮೃತ ಅಬ್ದುರ್ ರಾಫೆ (19), ಬಿಎ ಎಲ್‌ಎಲ್‌ಬಿ ವಿದ್ಯಾರ್ಥಿ, ನಯಾಪುರ ನಿವಾಸಿ ಎಂದು ಹೇಳಲಾಗಿದೆ.

ಮೇಲ್ನೋಟಕ್ಕೆ, ಮೃತರು ತಮ್ಮ ತಂದೆ ಅತೀಫ್ ಅವರ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಎಂ.ಜಿ.ರಸ್ತೆ ಠಾಣೆ ಪೊಲೀಸರು ಸಂಬಂಧಿಕರ ಹೇಳಿಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹೊಳೆಗೆ ಬಿದ್ದ ತಂಗಿಯನ್ನು ರಕ್ಷಿಸಲು ತನ್ನ ಪ್ರಾಣ ಕಳೆದುಕೊಂಡ ಅಕ್ಕ

ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿರಾಜು ಕಾಸಿಪುರಂನಲ್ಲಿ ಹೊಳೆಗೆ ಬಿದ್ದ ತನ್ನ ತಂಗಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಸಾವರ ಹರಿಕಾ ಎಂದು ಗುರುತಿಸಲಾದ ಮಗು, ತನ್ನ ಸಹೋದರಿ ಹೊಳೆಗೆ ಜಾರಿಬಿದ್ದು ಹೊರಬರಲು ಹೆಣಗಾಡುತ್ತಿರುವುದನ್ನು ಕಂಡು. ಕೂಡಲೇ ನೀರಿಗೆ ಹಾರಿ ತಂಗಿ ಜಾಹ್ನವಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ದುರದೃಷ್ಟವಶಾತ್, ಹೊಳೆಯ ಒಳಹರಿವಿನ ನೀರು ಹೆಚ್ಚಾದ ಕಾರಣ 12 ವರ್ಷದ ಅಕ್ಕ ಸಾವರ ಹರಿಕಾ ತನ್ನ ತಂಗಿಯನ್ನು ರಕ್ಷಿಸಿದ ನಂತರ ಕೊಚ್ಚಿಕೊಂಡು ಹೋಗಿದ್ದಾಳೆ ಎಂದು ಹೇಳಲಾಗಿದೆ.

ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಅಜ್ಮೀರ್‌ನಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಪಾದ್ರಿ ಸೇರಿದಂತೆ ಕೆಲವೊಂದು ಗುಂಪು ಅತ್ಯಾಚಾರವೆಸಗಿದೆ ಎಂದು ಆರೋಪಿಸಲಾಗಿದೆ. ಸಂಜಯ್ ಶರ್ಮಾ ಎಂದು ಗುರುತಿಸಲಾದ ಆರೋಪಿಯು ಮಹಿಳೆಯನ್ನು ಆಕೆಯ ಕುಟುಂಬದ ಅರ್ಚಕನಾಗಿದ್ದರಿಂದ ತಿಳಿದಿದ್ದನು ಮತ್ತು ಆಕೆಯ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಿದ್ದನು.

ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಹಣ ವಸೂಲಿ ಮಾಡಿ ಮತ್ತೆ ಕೆಲವರ ಜೊತೆ ಸೇರಿ ಆಕೆಯನ್ನು ದಿನಗಟ್ಟಲೆ ಸೆರೆಯಲ್ಲಿಟ್ಟು ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ಮಹಿಳೆಯನ್ನು ತನ್ನ ಸುಖಕ್ಕಾಗಿ ಬಳಸುತ್ತಿದ್ದರು ಮತ್ತು ಎಷ್ಟು ಜನರು ಈ ಅಪರಾಧದಲ್ಲಿವಿದ್ದರೆ ಎಂದು ಹೇಳಲು ಆಕೆಗೆ ಆಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಆಕೆ ಹಾಗೂ ಆಕೆಯ ಪತಿ ಹಾಗೂ ಮಕ್ಕಳನ್ನು ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Mon, 10 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ