AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರಿ ಇಳಿಕೆಯಾಗಿದೆ. ಇಲ್ಲಿದೆ ವಿವರ

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!
ಬಿಬಿಎಂಪಿ ಶಾಲೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 15, 2024 | 10:10 AM

Share

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ.

ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ40 ರಷ್ಟು ಕುಸಿತ ಕಂಡಿದೆ. ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರಿ ಇಳಿಕೆಯಾಗಿದೆ.

ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ 2023-24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.

ಈ ಬಾರಿಯ ದಾಖಲಾತಿ

ನರ್ಸರಿ ಶಾಲೆ: 311

ಪ್ರಾಥಮಿಕ ಶಾಲೆ: 3674

ಪ್ರೌಢ ಶಾಲೆ: 6691

ಪಿಯು ಕಾಲೇಜು: 4711

ಡಿಗ್ರಿ ಕಾಲೇಜು: 1689

ಪಿಜಿ ಕಾಲೇಜು: 98

ಒಟ್ಟು ದಾಖಲಾತಿ: 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಬಿಬಿಎಂಪಿ ತನ್ನ ವ್ಯಾಪ್ತಿಯ ಶಾಲೆಗಳನ್ನು ನಿರ್ವಹಣೆ ಮಾಡುವುದರಲ್ಲಿ ಎಡವಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಹಲವು ಭ್ರಷ್ಟಾಚಾರಗಳು ಹಾಗೂ ಮಕ್ಕಳಿಗೆ ಸಮಪರ್ಕವಾಗಿ ಮೂಲಭೂತ ಸೌಕರ್ಯ ಕೊಡುವುದರಲ್ಲಿ ಪಾಲಿಕೆ ಎಡವಿದೆ ಎನ್ನುವ ಆರೋಪವಿದೆ. ಹೀಗಿರುವಾಗ ದಾಖಲಾತಿ ಪ್ರಮಾಣ ಹೆಚ್ಚುವುದಾದರು ಹೇಗೆ ಎಂದು ಪ್ರಶ್ನೆ ಉದ್ಭವಿಸಿದೆ.

ಬಿಬಿಎಂಪಿ ಶಾಲೆ

ಕೆಲವು ಕಡೆಗಳಲ್ಲಿ ಪಾಲಿಕೆ ವ್ಯಾಪ್ತಿಯ ಶಾಲಾ ಕಟ್ಟಡಗಳು ಬಿರುಕು ಬಿದ್ದಿವೆ. ಕೆಲವು ಕಡೆ ಮೂಲಭೂತ ಸೌಕರ್ಯವೇ ಇಲ್ಲ. ಇದರ ಜೊತೆಗೆ ಪ್ರತಿ ವರ್ಷ ಮಕ್ಕಳಿಗೆ ಸೇರಬೇಕಾದ ಸಮವಸ್ತ್ರಗಳು ಮಕ್ಕಳ ಕೈಗೆ ಸರಿಯಾದ ಸಮಯಕ್ಕೆ ಸೇರುತ್ತಿಲ್ಲ. ಹೀಗೆ ಹಲವು ಕೊರೆತಗಳು ಬಿಬಿಎಂಪಿ ಶಾಲೆಗಳು ಎದುರಿಸುತ್ತಿವೆ. ಈ ಎಲ್ಲ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Sat, 15 June 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!