AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನ 5 ಮೆಮು ರೈಲುಗಳು ಅಕ್ಟೋಬರ್ 26 ರಿಂದ ನವೆಂಬರ್ 20ರವರೆಗೆ ರದ್ದು

ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 20, 2022ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನ 5 ಮೆಮು ರೈಲುಗಳು ಅಕ್ಟೋಬರ್ 26 ರಿಂದ ನವೆಂಬರ್ 20ರವರೆಗೆ ರದ್ದು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Oct 23, 2023 | 12:15 PM

Share

ಬೆಂಗಳೂರು ಅ.23: ನೈಋತ್ಯ ರೈಲ್ವೆ (South Western Railway) ವಲಯದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ಪುರಾತನ ರೈಲು ನಿಲ್ದಾಣ ಕಂಟೋನ್ಮೆಂಟ್ ರೈಲು (Cantonment railway) ನಿಲ್ದಾಣವಾಗಿದೆ. ಈ ಕಂಟೋನ್ಮೆಂಟ್ ರೈಲು (Train) ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಹೀಗಾಗಿ ಅಕ್ಟೋಬರ್ 26 ರಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗಿದೆ.

ರದ್ದಾದ ರೈಲುಗಳು

  1. ರೈಲು ಸಂಖ್ಯೆ 06531/32 ಕೆಎಸ್​ಆರ್​ ಬೆಂಗಳೂರು-ದೇವನಹಳ್ಳಿ-ಕೆಎಸ್​ಆರ್​ ಬೆಂಗಳೂರು ಮೆಮು ವಿಶೇಷ ರೈಲು ರದ್ದಾಗಿದೆ.
  2. ರೈಲು ಸಂಖ್ಯೆ 06533/34 ದೇವನಹಳ್ಳಿ-ಯಲಹಂಕ-ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರೈಲು ರದ್ದಾಗಿದೆ.
  3. ರೈಲು ಸಂಖ್ಯೆ 06535/36 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.
  4. ರೈಲು ಸಂಖ್ಯೆ 06537/38 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದು ಮಾಡಲಾಗಿದೆ.
  5. ರೈಲು ಸಂಖ್ಯೆ 06539/40 ದೇವನಹಳ್ಳಿ-ಯಲಹಂಕ-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.

ಇದನ್ನೂ ಓದಿ: ದಸರಾ ಸಂಭ್ರಮ: ಪ್ರಯಾಣಿಕರ ಅನುಕೂಲಕ್ಕಾಗಿ ಈ 2 ದಿನ ಬೆಂಗಳೂರು-ಬೆಳಗಾವಿಗೆ ವಿಶೇಷ ರೈಲು ಸಂಚಾರ

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ

ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 20, 2022ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ. ನೈಋತ್ಯ ರೈಲ್ವೆ (SWR) ನೆಟ್‌ವರ್ಕ್‌ನಲ್ಲಿರುವ ಅತ್ಯಂತ ಹಳೆಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವನ್ನು ಎರಡು ಹಂತದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೆಚ್ಚಿದ ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಗಣನೀಯ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!