Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನ 5 ಮೆಮು ರೈಲುಗಳು ಅಕ್ಟೋಬರ್ 26 ರಿಂದ ನವೆಂಬರ್ 20ರವರೆಗೆ ರದ್ದು

ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 20, 2022ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನ 5 ಮೆಮು ರೈಲುಗಳು ಅಕ್ಟೋಬರ್ 26 ರಿಂದ ನವೆಂಬರ್ 20ರವರೆಗೆ ರದ್ದು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Oct 23, 2023 | 12:15 PM

ಬೆಂಗಳೂರು ಅ.23: ನೈಋತ್ಯ ರೈಲ್ವೆ (South Western Railway) ವಲಯದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ಪುರಾತನ ರೈಲು ನಿಲ್ದಾಣ ಕಂಟೋನ್ಮೆಂಟ್ ರೈಲು (Cantonment railway) ನಿಲ್ದಾಣವಾಗಿದೆ. ಈ ಕಂಟೋನ್ಮೆಂಟ್ ರೈಲು (Train) ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಹೀಗಾಗಿ ಅಕ್ಟೋಬರ್ 26 ರಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗಿದೆ.

ರದ್ದಾದ ರೈಲುಗಳು

  1. ರೈಲು ಸಂಖ್ಯೆ 06531/32 ಕೆಎಸ್​ಆರ್​ ಬೆಂಗಳೂರು-ದೇವನಹಳ್ಳಿ-ಕೆಎಸ್​ಆರ್​ ಬೆಂಗಳೂರು ಮೆಮು ವಿಶೇಷ ರೈಲು ರದ್ದಾಗಿದೆ.
  2. ರೈಲು ಸಂಖ್ಯೆ 06533/34 ದೇವನಹಳ್ಳಿ-ಯಲಹಂಕ-ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರೈಲು ರದ್ದಾಗಿದೆ.
  3. ರೈಲು ಸಂಖ್ಯೆ 06535/36 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.
  4. ರೈಲು ಸಂಖ್ಯೆ 06537/38 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದು ಮಾಡಲಾಗಿದೆ.
  5. ರೈಲು ಸಂಖ್ಯೆ 06539/40 ದೇವನಹಳ್ಳಿ-ಯಲಹಂಕ-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.

ಇದನ್ನೂ ಓದಿ: ದಸರಾ ಸಂಭ್ರಮ: ಪ್ರಯಾಣಿಕರ ಅನುಕೂಲಕ್ಕಾಗಿ ಈ 2 ದಿನ ಬೆಂಗಳೂರು-ಬೆಳಗಾವಿಗೆ ವಿಶೇಷ ರೈಲು ಸಂಚಾರ

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ

ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 20, 2022ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ. ನೈಋತ್ಯ ರೈಲ್ವೆ (SWR) ನೆಟ್‌ವರ್ಕ್‌ನಲ್ಲಿರುವ ಅತ್ಯಂತ ಹಳೆಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವನ್ನು ಎರಡು ಹಂತದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೆಚ್ಚಿದ ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಗಣನೀಯ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ