ಬೆಂಗಳೂರು ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನ NIAಗೆ ವರ್ಗಾಯಿಸಿದ ಸಿಸಿಬಿ

ರಾಜಧಾನಿ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಐವರು ಶಂಕಿತ ಉಗ್ರರು ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಶಂಕಿತ ಉಗ್ರ ನಾಸೀರ್​ ಜೈಲಿನಲ್ಲಿದ್ದುಕೊಂಡೆ ಈ ಐವರು ಶಂಕಿತ ಉಗ್ರರ ಬ್ರೈನ್ ವಾಶ್ ಮಾಡಿದ್ದನು.

ಬೆಂಗಳೂರು ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನ NIAಗೆ ವರ್ಗಾಯಿಸಿದ ಸಿಸಿಬಿ
ಎನ್​ಐಎ
Follow us
| Updated By: ವಿವೇಕ ಬಿರಾದಾರ

Updated on:Nov 02, 2023 | 8:01 AM

ಬೆಂಗಳೂರು ನ.02: ನಗರದಲ್ಲಿ ಐವರು ಶಂಕಿತ ಉಗ್ರರ (Suspected Terrorists) ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ (CCB) ರಾಷ್ಟ್ರೀಯ ತನಿಖಾ ದಳ (NIA)ಗೆ ವರ್ಗಾವಣೆ ಮಾಡಿದೆ. ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು. ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಐವರು ಶಂಕಿತ ಉಗ್ರರು ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಶಂಕಿತ ಉಗ್ರ ನಾಸೀರ್​ ಜೈಲಿನಲ್ಲಿದ್ದುಕೊಂಡೆ ಈ ಐವರು ಶಂಕಿತ ಉಗ್ರರ ಬ್ರೈನ್ ವಾಶ್ ಮಾಡಿದ್ದನು.

ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ

ಆರೋಪಿಗಳು ಸುಲ್ತಾನ್​ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್​.ಟಿ ನಗರದ ಕನಕ ಬಡಾವಣೆಯ ಸೈಯದ್​ ಸುಹೇಲ್​ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

ಆರ್​ಟಿ ನಗರ, ಸುಲ್ತಾನ್​ಪಾಳ್ಯ, ಡಿಜೆ ಹಳ್ಳಿ, ಕೋಡಿಗೆಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಶಂಕಿತರನ್ನು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳ ನಾಶ

7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿಗಳು, 12 ಮೊಬೈಲ್​, ಡ್ರಾಗರ್​ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿ, ಅಪರಾಧದ ಒಳಸಂಚು, ಶಸ್ತ್ರಾಸ್ರ ಕಾಯ್ದೆ ಅಡಿ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೈಲು ಕಸ್ಟಡಿಯಿಂದ ಸಿಸಿಬಿ ಶಂಕಿತರನ್ನು ತನ್ನ ವಶಕ್ಕೆ ಪೆಡೆದು ವಿಚಾರಣೆ ನಡೆಸಿತ್ತು. ಇದೇ ವೇಳೆ ಜೈಲಿನಲ್ಲಿ ನಾಸೀರ್ ಪೋನ್ ಬಳಸ್ತಿದ್ದದ್ದು ಪತ್ತೆಯಾಗಿತ್ತು. ಇನ್ನು ಐವರು ಶಂಕಿತರನ್ನು ಮಾನಿಟರ್​ ಮಾಡುತ್ತಿದ್ದ ಶಂಕಿತ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಶೋಧ ನಡೆಯುತ್ತಿದೆ. ಜೈಲಿನಲ್ಲಿರುವ ನಾಸೀರ್ ಸೇರಿ ಐವರನ್ನು ಕಸ್ಟಡಿಗೆ ಪಡೆಯಲು ಎನ್​ಐಎ ಸಿದ್ದತೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 am, Thu, 2 November 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ