AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ, ನಾಲ್ಕು ದಿನದಲ್ಲಿ 25 ಕೋಟಿ ದಂಡ ಪಾವತಿ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ.

ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ, ನಾಲ್ಕು ದಿನದಲ್ಲಿ 25 ಕೋಟಿ ದಂಡ ಪಾವತಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Feb 06, 2023 | 3:42 PM

Share

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಅದರಂತೆ ರಿಯಾಯಿತಿ ಘೋಷಣೆಯಾದ ನಾಲ್ಕು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದು, 25.42 ಕೋಟಿಗೂ ಅಧಿಕ ಮೊತ್ತದ ದಂಡ ಸಂಗ್ರಹ ಆಗಿದೆ. ಮಾತ್ರವಲ್ಲದೆ ಇನ್ನೂ ಎರಡು ದಿನದಲ್ಲಿ ಪ್ರತಿಕ್ರಿಯೆ ಹಾಗೂ ಪ್ರಕರಣಗಳನ್ನು ನೋಡಿಕೊಂಡು ಕಾಲಾವಧಿ ವಿಸ್ತರಿಸುವ ಬಗ್ಗೆ ಚಿಂತನೆ ಇದೆ.

ದಂಡ ಪಾವತಿ ಬಗ್ಗೆ ಮಾಹಿತಿ ನೀಡಿದ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಎಂ.ಎ. ಸಲೀಂ, ಶೇ.50 ರಿಯಾಯಿತಿ ಘೋಷಣೆ ನಂತರ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ವಾಹನ ಸವಾರರು ನಾಲ್ಕನೇ ದಿನವೂ ಸ್ವಯಂಪ್ರೇರಿತರಾಗಿ ದಂಡ ಪಾವತಿಸುತ್ತಿದ್ದಾರೆ. 8 ಲಕ್ಷ 68 ಸಾವಿರ 405 ಪ್ರಕರಣಗಳ ವಿಲೇವಾರಿ ಆಗಿದೆ. 25 ಕೋಟಿ 42 ಲಕ್ಷ 52 ಸಾವಿರಕ್ಕೂ ಅಧಿಕ ಮೊತ್ತದ ದಂಡ ಸಂಗ್ರಹ ಆಗಿದೆ ಎಂದರು.

ವಿಲೇವಾರಿಗೆ ಇನ್ನೂ 1 ಕೋಟಿ 80 ಲಕ್ಷ ಪ್ರಕರಣಗಳು ಬಾಕಿ

ದಂಡ ಪಾವತಿಗೆ ಏನಾದರು ಸಮಸ್ಯೆಗಳಿದ್ದರೆ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್​ನಲ್ಲಿ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ ಸಲೀಂ, ಎರಡು ದಿನ ನೋಡಿಕೊಂಡು ಕಾಲಾವಧಿಯನ್ನ ವಿಸ್ತರಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಚರ್ಚಿಸಲಾಗುವುದು. ಇನ್ನು 1.80 ಕೋಟಿ ಪ್ರಕರಣಗಳು ಬಾಕಿ ಇವೆ. ಸದ್ಯ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ಮಾಡುವ ವೇಳೆ ನಕಲಿ ನಂಬರ್ ಪ್ಲೇಟ್​ಗಳ ಬಗ್ಗೆಯೂ ದೂರು ಬರುತ್ತಿವೆ. ಅಂತಹ ಪ್ರಕರಣಗಳನ್ನ ಪತ್ತೆ ಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

ಜನವರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ರಾಜ್ಯ ಸಾರಿಗೆ ಇಲಾಖೆ ನಿಯಮ ಉಲ್ಲಂಘಿಸುವವರಿಗೆ 50% ರಿಯಾಯಿತಿಯನ್ನು ನೀಡಿತು. ಬೆಂಗಳೂರು ಸಂಚಾರ ಆಯುಕ್ತ ಸಲೀಂ ಮಾತನಾಡಿ, ನಗರದಲ್ಲಿ ಎರಡು ಕೋಟಿಗೂ ಹೆಚ್ಚು ಇ-ಚಲನ್ ಪ್ರಕರಣಗಳಿದ್ದು, ಒಟ್ಟು 500 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು ಎಂದಿದ್ದರು.

2022 ರಲ್ಲಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಇದೇ ರೀತಿಯ ರಿಯಾಯಿತಿ ಕೊಡುಗೆಯನ್ನು ನೀಡಿದ್ದರು ಮತ್ತು ಇದು ಸಂಚಾರ ನಿಯಮ ಉಲ್ಲಂಘಿಸುವವರಿಂದ ಬಾಕಿ ಉಳಿದಿರುವ ದಂಡವನ್ನು ಸಂಗ್ರಹಿಸುವಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ಇದೀಗ ಬೆಂಗಳೂರಿನಲ್ಲೂ ಈ ಅಸ್ತ್ರವನ್ನು ಪ್ರಯೋಗಿಸಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ರಿಯಾಯಿತಿ ಮೇಲೆ ದಂಡ ಪಾವತಿಸಲು ಫೆ.11ರವರೆಗೆ ಕಾಲವಕಾಶ ಇದ್ದು, ಒಟ್ಟು ಎಷ್ಟು ಸಂಗ್ರಹವಾಗಲಿದೆ ಎಂಬುದನ್ನು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Mon, 6 February 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!