AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು 7 ಕೋಟಿ ದಂಡದ ಮೊತ್ತ ಪಾವತಿಯಾಗಿದೆ.

ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ
ಪ್ರಾತಿನಿಧಿಕ ಚಿತ್ರImage Credit source: thehindu.com
TV9 Web
| Updated By: Rakesh Nayak Manchi|

Updated on:Feb 06, 2023 | 10:43 PM

Share

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು (ಫೆವ್ರವರಿ 06) 2.59 ಲಕ್ಷ ಪ್ರಕರಣಗಳಿಗೆ ಸಂಬಂಧಿಸಿದ ವಾಹನ ಸವಾರರು ದಂಡ ಕಟ್ಟಿದ್ದು, ಒಂದೇ ದಿನ 7.45 ಕೋಟಿ ದಂಡದ ಹಣ ಸಂಗ್ರಹವಾಗಿದೆ. ಇಂದು ಬೆಳಗ್ಗೆ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದವು. ಇದೀಗ ಆ ಸಂಖ್ಯೆ 10.62 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ ರಿಯಾಯಿತಿ ಘೋಷಣೆ ಮಾಡಿ ಇಂದಿಗೆ ನಾಲ್ಕು ದಿನಗಳು ಆಗಿದ್ದು, ಈವರೆಗೆ ಒಟ್ಟು 30.96 ಕೋಟಿ ರೂಪಾಯಿ ದಂಡದ ಹಣ ಸಂಗ್ರಹ ಮಾಡಲಾಗಿದೆ.

ಜನವರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ರಾಜ್ಯ ಸಾರಿಗೆ ಇಲಾಖೆ ನಿಯಮ ಉಲ್ಲಂಘಿಸುವವರಿಗೆ 50% ರಿಯಾಯಿತಿಯನ್ನು ನೀಡಿತು. ಬೆಂಗಳೂರು ಸಂಚಾರ ಆಯುಕ್ತ ಸಲೀಂ ಮಾತನಾಡಿ, ನಗರದಲ್ಲಿ ಎರಡು ಕೋಟಿಗೂ ಹೆಚ್ಚು ಇ-ಚಲನ್ ಪ್ರಕರಣಗಳಿದ್ದು, ಒಟ್ಟು 500 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು ಎಂದಿದ್ದರು.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

2022 ರಲ್ಲಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಇದೇ ರೀತಿಯ ರಿಯಾಯಿತಿ ಕೊಡುಗೆಯನ್ನು ನೀಡಿದ್ದರು ಮತ್ತು ಇದು ಸಂಚಾರ ನಿಯಮ ಉಲ್ಲಂಘಿಸುವವರಿಂದ ಬಾಕಿ ಉಳಿದಿರುವ ದಂಡವನ್ನು ಸಂಗ್ರಹಿಸುವಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ಇದೀಗ ಬೆಂಗಳೂರಿನಲ್ಲೂ ಈ ಅಸ್ತ್ರವನ್ನು ಪ್ರಯೋಗಿಸಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ರಿಯಾಯಿತಿ ಮೇಲೆ ದಂಡ ಪಾವತಿಸಲು ಫೆ.11ರವರೆಗೆ ಕಾಲವಕಾಶ ಇದ್ದು, ಒಟ್ಟು ಎಷ್ಟು ಸಂಗ್ರಹವಾಗಲಿದೆ ಎಂಬುದನ್ನು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Mon, 6 February 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!