AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು 7 ಕೋಟಿ ದಂಡದ ಮೊತ್ತ ಪಾವತಿಯಾಗಿದೆ.

ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ
ಪ್ರಾತಿನಿಧಿಕ ಚಿತ್ರImage Credit source: thehindu.com
TV9 Web
| Edited By: Rakesh Nayak Manchi|

Updated on:Feb 06, 2023 | 10:43 PM

Share

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು (ಫೆವ್ರವರಿ 06) 2.59 ಲಕ್ಷ ಪ್ರಕರಣಗಳಿಗೆ ಸಂಬಂಧಿಸಿದ ವಾಹನ ಸವಾರರು ದಂಡ ಕಟ್ಟಿದ್ದು, ಒಂದೇ ದಿನ 7.45 ಕೋಟಿ ದಂಡದ ಹಣ ಸಂಗ್ರಹವಾಗಿದೆ. ಇಂದು ಬೆಳಗ್ಗೆ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದವು. ಇದೀಗ ಆ ಸಂಖ್ಯೆ 10.62 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ ರಿಯಾಯಿತಿ ಘೋಷಣೆ ಮಾಡಿ ಇಂದಿಗೆ ನಾಲ್ಕು ದಿನಗಳು ಆಗಿದ್ದು, ಈವರೆಗೆ ಒಟ್ಟು 30.96 ಕೋಟಿ ರೂಪಾಯಿ ದಂಡದ ಹಣ ಸಂಗ್ರಹ ಮಾಡಲಾಗಿದೆ.

ಜನವರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ರಾಜ್ಯ ಸಾರಿಗೆ ಇಲಾಖೆ ನಿಯಮ ಉಲ್ಲಂಘಿಸುವವರಿಗೆ 50% ರಿಯಾಯಿತಿಯನ್ನು ನೀಡಿತು. ಬೆಂಗಳೂರು ಸಂಚಾರ ಆಯುಕ್ತ ಸಲೀಂ ಮಾತನಾಡಿ, ನಗರದಲ್ಲಿ ಎರಡು ಕೋಟಿಗೂ ಹೆಚ್ಚು ಇ-ಚಲನ್ ಪ್ರಕರಣಗಳಿದ್ದು, ಒಟ್ಟು 500 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು ಎಂದಿದ್ದರು.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

2022 ರಲ್ಲಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಇದೇ ರೀತಿಯ ರಿಯಾಯಿತಿ ಕೊಡುಗೆಯನ್ನು ನೀಡಿದ್ದರು ಮತ್ತು ಇದು ಸಂಚಾರ ನಿಯಮ ಉಲ್ಲಂಘಿಸುವವರಿಂದ ಬಾಕಿ ಉಳಿದಿರುವ ದಂಡವನ್ನು ಸಂಗ್ರಹಿಸುವಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ಇದೀಗ ಬೆಂಗಳೂರಿನಲ್ಲೂ ಈ ಅಸ್ತ್ರವನ್ನು ಪ್ರಯೋಗಿಸಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ರಿಯಾಯಿತಿ ಮೇಲೆ ದಂಡ ಪಾವತಿಸಲು ಫೆ.11ರವರೆಗೆ ಕಾಲವಕಾಶ ಇದ್ದು, ಒಟ್ಟು ಎಷ್ಟು ಸಂಗ್ರಹವಾಗಲಿದೆ ಎಂಬುದನ್ನು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Mon, 6 February 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​