AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ

ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ರಿಯಲ್ ಎಸ್ಟೇಟ್ ಮತ್ತು ಹಣಕಾಸು ಉದ್ಯಮಿಯೋರ್ವರು ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತರೊಂದಿಗೆ ಮದ್ಯಪಾನ ಮಾಡಲು ತೆರಳಿದ್ದ ಇವರನ್ನು ಆ ಬಳಿಕ ಕಾರಿನಲ್ಲೇ ಬಿಟ್ಟು ಹೋಗಲಾಗಿತ್ತು. ಮರುದಿನದ ಅದೇ ಸ್ಥಳದಲ್ಲಿ ಮೃತ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷಾ ವರದಿಗೆ ಕಾಯಲಾಗುತ್ತಿದೆ.

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on: Apr 20, 2026 | 6:39 AM

Share

ಬೆಂಗಳೂರು, ಏಪ್ರಿಲ್​​ 20: ರಿಯಲ್​ ಎಸ್ಟೇಟ್​​ ಮತ್ತು ಸಣ್ಣ ಮಟ್ಟದ ಹಣಕಾಸು ವ್ಯವಹಾರ ನಡೆಸುತ್ತಿದ್ದ 56 ವರ್ಷದ ವ್ಯಕ್ತಿಯೋರ್ವರು ತಮ್ಮದೇ ಕಾರಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬಸಾಪುರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಕಾರಿನೊಳಗೆ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿದ್ದ ನಾರಾಯಣಪ್ಪ ಅವರನ್ನು ಗಮನಿಸಿದ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಅವರು ಅದಾಗಲೇ ಮೃತಪಟ್ಟಿರೋದು ದೃಢಪಟ್ಟಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ನಾರಾಯಣಪ್ಪ ತಮ್ಮ ಸ್ನೇಹಿತರಾದ ಮಂಜುನಾಥ ರೆಡ್ಡಿ ಮತ್ತು ಶಿವು ಜೊತೆ ಎಲೆಕ್ಟ್ರಾನಿಕ್ಸ್ ಸಿಟಿಯ ಬಾರ್‌ಗೆ ತೆರಳಿದ್ದರು. ತೀವ್ರವಾಗಿ ಮದ್ಯಪಾನ ಮಾಡಿದ್ದ ಅವರು ನಿಲ್ಲಲೂ ಕಷ್ಟಪಡುತ್ತಿದ್ದರು. ಹೀಗಾಗಿ ಮಂಜುನಾಥ ರೆಡ್ಡಿ ಮತ್ತು ಶಿವು ಅವರ ಕೈ ಹಿಡಿದು ಬಾರ್​​ನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ನಂತರ ನಾರಾಯಣಪ್ಪ ಕಾರಿನ ಚಾಲಕನ ಪಕ್ಕದ ಸೀಟ್‌ನಲ್ಲಿ ಕುಳಿತಿದ್ದು, ಅವರದ್ದೇ ಕಾರನ್ನು ಮಂಜುನಾಥ ರೆಡ್ಡಿ ಚಲಾಯಿಸಿದ್ದಾರೆ. ಸ್ನೇಹಿತ ಶಿವು ಬಾರ್​​ನಿಂದ ಹೊರ ಬಂದ ಬಳಿಕ ಇವರಿಂದ ಬೇರೆಯಾಗಿ ತೆರಳಿದ್ದಾರೆ. ಈ ಎಲ್ಲ ಘಟನೆಗಳ ಸಂಪೂರ್ಣ ಚಿತ್ರಣ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ; ಮಾನವೀಯತೆಗೆ ಸಾಕ್ಷಿಯಾದ ವಿಮಾನ

ಇನ್ನು ಕೆಲ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಮಂಜುನಾಥ ರೆಡ್ಡಿಗೆ ಕಾರು ಚಲಾಯಿಸಲು ಕಷ್ಟವಾಗಿದ್ದರಿಂದ ರಸ್ತೆಯ ಬದಿಯಲ್ಲಿ ಕಾರನ್ನು ನಿಲ್ಲಿಸಿ ಅವರು ಮನೆಗೆ ತೆರಳಿದ್ದಾರೆ. ಮರುದಿನ ಅದೇ ಸ್ಥಳದಲ್ಲಿ ಕಾರಿನೊಳಗೆ ನಾರಾಯಣಪ್ಪ ಅವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದು, ಯಾವುದೇ ಅನುಮಾನಾಸ್ಪದ ಅಂಶ ಇಲ್ಲವೆಂದು ತಿಳಿಸಿದ್ದಾರೆ. ದೇಹದಲ್ಲಿ ಯಾವುದೇ ಗಾಯಗಳಿಲ್ಲ, ಮಂಜುನಾಥ ರೆಡ್ಡಿ ಮತ್ತು ನಾರಾಯಣಪ್ಪ ನಡುವೆ ಯಾವುದೇ ಜಗಳ ನಡೆದಿಲ್ಲ. ಹೀಗಾಗಿ ಸಾವಿಗೆ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಗೊತ್ತಾಗಲಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?