AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್‌ನಲ್ಲಿ ಸ್ವಾತಂತ್ರ್ಯ ದಿನದಂದು 61 ಲಕ್ಷ ಮಂದಿ ಉಚಿತ ಪಯಾಣ? ಅನುಮಾನ ವ್ಯಕ್ತಪಡಿಸಿದ ಜನ!

BMTC ಯಂತೆಯೇ BMRCL ಸಂಸ್ಥೆಯ ನಮ್ಮ ಮೆಟ್ರೋದ ದೈನಂದಿನ ಪ್ರಯಾಣಿಕರ ಸಂಖ್ಯೆಯೂ ಆಗಸ್ಟ್ 15 ರಂದು ದಾಖಲೆ ಮಾಡಿದೆ.

ಬಿಎಂಟಿಸಿ ಬಸ್‌ನಲ್ಲಿ ಸ್ವಾತಂತ್ರ್ಯ ದಿನದಂದು 61 ಲಕ್ಷ ಮಂದಿ ಉಚಿತ ಪಯಾಣ? ಅನುಮಾನ ವ್ಯಕ್ತಪಡಿಸಿದ ಜನ!
ಬಿಎಂಟಿಸಿ ಬಸ್‌ನಲ್ಲಿ ಸ್ವಾತಂತ್ರ್ಯ ದಿನದಂದು 61 ಲಕ್ಷ ಮಂದಿ ಉಚಿತ ಪಯಾಣ? ಅನುಮಾನ ವ್ಯಕ್ತಪಡಿಸಿದ ಜನ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 19, 2022 | 7:06 PM

ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನ ದೇಶಕ್ಕೆ ವಿಶೇಷವಾಗಿತ್ತು. ಅಂದು ಸ್ವಾತಂತ್ರ್ಯದ ಅಮೃತಮಹೋತ್ಸವವಾಗಿತ್ತು (Azadi Ka Amrit Mahotsav). ಹಾಗೆಂದೇ ಅನೇಕ ಸೇವಾ ಸಂಸ್ಥೆಗಳು 75ನೇ ಸ್ವಾತಂತ್ರ್ಯ ದಿನಕ್ಕೆ ವಿಶೇಷ ಮಹತ್ವ ನೀಡಿದ್ದವು. ರಾಜಧಾನಿ ಬೆಂಗಳೂರಿನಲ್ಲಿ ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (BMTC free bus travel) ಮತ್ತು ನಮ್ಮ ಮೆಟ್ರೋ (ಬಿಎಂಆರ್​ಸಿಎಲ್​) ಉಚಿತವಾದ ಸೇವೆಯನ್ನು ತನ್ನ ಪ್ರಯಾಣಿಕರಿಗೆ ಕೊಡಮಾಡಿತ್ತು.

ಆಗಸ್ಟ್​ 15 ರಂದು ನೀಡಿದ್ದ ಉಚಿತ ಪ್ರಯಾಣ ಸೇವೆಯನ್ನು 61 ಲಕ್ಷ ಮಂದಿ ಪಡೆದುಕೊಂಡಿದ್ದಾರೆ ಎಂದು ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಕಟಣೆ ತಿಳಿಸಿದೆ. ಆದರೆ ನಿಗಮದ ಈ ಅಂಕಿ ಅಂಶಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ವ್ಯಕ್ತವಾಗಿದೆ. ರಾಜಧಾನಿಯ ಬಹುತೇಕ ಭಾಗಗಳಲ್ಲಿ ಸಾರ್ವಜನಿಕರು ಬಸ್ಸಗಳ ಕೊರತೆ ಎದುರಿಸಿದ್ದಾರೆ. ಬಸ್​ ಗಳ ಸಂಖ್ಯೆ ಅಂದು ಕಡಿಮೆಯಿತ್ತು. ಆದರೂ ಬಿಎಂಟಿಸಿ ಅದು ಹೇಗೆ, ಅದು ಯಾವಾಗ, ಅದು ಎಲ್ಲಿಂದ 61 ಲಕ್ಷ ಮಂದಿಯನ್ನು ಉಚಿತವಾಗಿ ಹತ್ತಿಸಿಕೊಂಡು ಹೋಯಿತು? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಬಿಎಂಟಿಸಿ ಸಾಪನೆಯಾಗಿ 125 ವರ್ಷ ತುಂಬಿದ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ ದಿನದಂದು ಉಚಿತ ಬಸ್‌ ಪ್ರಯಾಣ ಕಲ್ಪಿಸಲಾಗಿತ್ತು. ಉಚಿತ ಪ್ರಯಾಣ ದರ ಕೊಡುಗೆಯ ನಿಮಿತ್ತ ಆಗಸ್ಟ್ 15ರಂದು 5 ಸಾವಿರ ಬಸ್ಸುಗಳು ಸಂಚರಿಸಿದ್ದವು, 61,41,323 ಮಂದಿ ಪ್ರಯಾಣಿಸಿದ್ದಾರೆ. ಸಾಮಾನ್ಯ ದಿನಗಳಲ್ಲಿ ಸಾಮಾನ್ಯವಾಗಿ 6,834 ಬಿಎಂಟಿಸಿ ಬಸ್ಸುಗಳನ್ನು ರಸ್ತೆಗೆ ಬಿಡಲಾಗುತ್ತದೆ. ಆಗ 28 ಲಕ್ಷ ಮಂದಿ ಪ್ರಯಾಣ ಮಾಡುತ್ತಾರೆ (BMTC daily ridership number). ಅಂದು ನಾವು ಕಲ್ಪಿಸಿದ್ದ ಉಚಿತ ಪ್ರಯಾಣವನ್ನು ಜನ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ. ಆದರೆ ಉಚಿತ ಪ್ರಯಾಣ ಎಂಬ ಕಾರಣಕ್ಕೆ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಆ. 15 ರಂದು ಬಸ್‌ಗಳು ಕಡಿಮೆ ಸಂಚರಿಸಿದ್ದವು ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿತ್ತು. ನಗರದ ಹೊರಭಾಗಗಳಲ್ಲಿ ಗಂಟೆಗಟ್ಟಲೆ ಕಾದಿದ್ದವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು.

BMTC ಯಂತೆಯೇ BMRCL ಸಂಸ್ಥೆಯ ನಮ್ಮ ಮೆಟ್ರೋದ ದೈನಂದಿನ ಪ್ರಯಾಣಿಕರ ಸಂಖ್ಯೆಯೂ ಆಗಸ್ಟ್ 15 ರಂದು ದಾಖಲೆ ಮಾಡಿದೆ. ಪರ್ಪಲ್ ಲೈನ್ (Purple Line -2.5 ಲಕ್ಷ), ಗ್ರೀನ್ ಲೈನ್ (Green Line -4.02 ಲಕ್ಷ) ಮತ್ತು ಮೆಜೆಸ್ಟಿಕ್ ಇಂಟರ್‌ಚೇಂಜ್ (Majestic interchange) (1.6 ಲಕ್ಷ) ಸೇರಿದಂತೆ ಒಟ್ಟು 8.2 ಲಕ್ಷ ಪ್ರಯಾಣಿಕರು ಅಂದು ಸಂಚರಿಸಿದ್ದಾರೆ. 2011 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ BMRCL ಸಂಸ್ಥೆ ಇಲ್ಲಿಯವರೆಗಿನ ಅತಿ ಹೆಚ್ಚು ಪ್ರಯಾಣಿಕರ ಸಂಖ್ಯೆಯನ್ನು ಅಂದು ಕಂಡಿತು.

ಪ್ರಮುಖವಾಗಿ ಗ್ರೀನ್ ಲೈನ್ (ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್ -Nagasandra-Silk Institute) ಉದ್ದಕ್ಕೂ ಸವಾರರ ಹೆಚ್ಚಳಕ್ಕೆ ಕಾರಣ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರ್ಯಾಲಿ ಮತ್ತು ಲಾಲ್‌ಬಾಗ್ ಫಲಪುಷ್ಪ (Lalbagh flower show) ಪ್ರದರ್ಶನವಾಗಿತ್ತು. ಇನ್ನು ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು 1 ಲಕ್ಷ ಮೆಟ್ರೋ ಪಾಸ್‌ಗಳನ್ನು ಖರೀದಿಸಿದ್ದರು.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್