AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದರೋಡೆ: ಕಾನ್ಸ್​ಟೇಬಲ್​ ಸಸ್ಪೆಂಡ್​, ಇನ್ಮುಂದೆ ಇನ್ಸ್​ಪೆಕ್ಟರ್​ ಗಮನಕ್ಕೆ ತರದೆ ಕೇಸ್ ನಡೆಸುವಂತಿಲ್ಲ

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ ದರೋಡೆ ಪ್ರಕರಣದ ಮಾಸ್ಟರ್‌ಮೈಂಡ್​ ಎನ್ನಲಾಗುತ್ತಿರುವ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್​​ನನ್ನು ಸಸ್ಪೆಂಡ್ ಮಾಡಲಾಗಿದೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಮಿನಷರ್​​ ಎಲ್ಲಾ ಪೊಲೀಸ್ ಠಾಣೆಗಳ ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು ದರೋಡೆ: ಕಾನ್ಸ್​ಟೇಬಲ್​ ಸಸ್ಪೆಂಡ್​, ಇನ್ಮುಂದೆ ಇನ್ಸ್​ಪೆಕ್ಟರ್​ ಗಮನಕ್ಕೆ ತರದೆ ಕೇಸ್ ನಡೆಸುವಂತಿಲ್ಲ
ಪೊಲೀಸ್​ ಕಾನ್ಸ್​ಟೇಬಲ್​ ಅಣ್ಣಪ್ಪ ನಾಯ್ಕ್
Shivaprasad B
| Edited By: |

Updated on: Nov 23, 2025 | 7:25 PM

Share

ಬೆಂಗಳೂರು, ನವೆಂಬರ್​ 23: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನು (Robbery Case) ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೇಸ್​ನಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆ ಪೊಲೀಸ್​ ಕಾನ್ಸ್​ಟೇಬಲ್​ ಅಣ್ಣಪ್ಪ ನಾಯ್ಕ್​​ ಅನ್ನು ಸಸ್ಪೆಂಡ್​ (suspend) ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್​ರಿಂದ ಆದೇಶ ಹೊರಡಿಸಲಾಗಿದೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್​ ಸೀಮಂತ್​ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನ ಖುದ್ದು ವಿಚಾರಣೆ ಮಾಡಿ ರಿಪೋರ್ಟ್​ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚಿಸಿದ್ದಾರೆ.

ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಈ ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗಿದೆ. ಇತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: 5.56 ಕೋಟಿ ಸಿಕ್ಕಿದ್ದೆಲ್ಲಿ? ಖದೀಮರ ಖರ್ತಾನಕ್ ಹೆಜ್ಜೆ ಗುರುತು ಬಯಲು

ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಬೀಟ್ ಸಿಬ್ಬಂದಿಯಾಗಿ ಅಣ್ಣಪ್ಪ ನಾಯ್ಕ್ ಕೆಲಸ ಮಾಡುತ್ತಿದ್ದ. ಈ ಹಿಂದೆ ಕ್ರೈಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪನನ್ನು ಅಲ್ಲಿಂದ ತೆಗೆದು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.

ಅಧಿಕಾರಿಗಳಿಗೆ ಖಡಕ್​ ​ಸೂಚನೆ ನೀಡಿದ ಕಮಿನಷರ್​ ಸೀಮಂತ್​ ಕುಮಾರ್​

ಇನ್ನು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಕೇಸ್​ನಲ್ಲಿ ಕಾನ್ಸ್​ಟೇಬಲ್​​ ಭಾಗಿ ಹಿನ್ನೆಲೆ ಬೆಂಗಳೂರು ಕಮಿನಷರ್​ ಸೀಮಂತ್​ ಕುಮಾರ್​ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬೆನ್ನಲ್ಲೇ ಎಲ್ಲಾ ಠಾಣೆಯ ಪಿಎಸ್​ಐ, ಎಎಸ್ ಐ, ಹೆಡ್ ಕಾನ್ಸ್​ಟೇಬಲ್ ಹಾಗೂ ಕಾನ್ಸ್​ಟೇಬಲ್​​​ಗಳ ಮಾನಿಟರಿಂಗ್​​​ಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Bengaluru: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!

ಇತ್ತೀಚೆಗೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಕಾನ್ಸ್​ಟೇಬಲ್​​ಗಳಿಂದ ಸುಲಿಗೆ ಮಾಡಲಾಗಿದೆ. ಇದೀಗ ದರೋಡೆ ಕೇಸ್​ನಲ್ಲೂ ಕಾನ್ಸ್​ಟೇಬಲ್ ಭಾಗಿ ಆಗಿದ್ದಾನೆ. ಕಿಡ್ನಾಪ್, ಬೆದರಿಕೆ ಸೇರಿದಂತೆ ಕೆಲ ಪ್ರಕರಣಗಳಲ್ಲಿ ಕೆಳ ಹಂತದ ಸಿಬ್ಬಂದಿಗಳೆ ಭಾಗಿ ಆಗುತ್ತಿದ್ದು, ಹೀಗಾಗಿ ಕೆಳಹಂತದ ಸಿಬ್ಬಂದಿ ಮೇಲೆ ನಿಗಾವಹಿಸದ ಇನ್ಸ್​ಪೆಕ್ಟರ್​ಗಳಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ಸ್​ಪೆಕ್ಟರ್​ಗಳ ಗಮನಕ್ಕೆ ತರದೆ ಸಿಬ್ಬಂದಿ ಯಾವ ಕೇಸ್​ಗಳನ್ನ ನಡೆಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.