AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದರೋಡೆ: ಕಾನ್ಸ್​ಟೇಬಲ್​ ಸಸ್ಪೆಂಡ್​, ಇನ್ಮುಂದೆ ಇನ್ಸ್​ಪೆಕ್ಟರ್​ ಗಮನಕ್ಕೆ ತರದೆ ಕೇಸ್ ನಡೆಸುವಂತಿಲ್ಲ

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ ದರೋಡೆ ಪ್ರಕರಣದ ಮಾಸ್ಟರ್‌ಮೈಂಡ್​ ಎನ್ನಲಾಗುತ್ತಿರುವ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್​​ನನ್ನು ಸಸ್ಪೆಂಡ್ ಮಾಡಲಾಗಿದೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಮಿನಷರ್​​ ಎಲ್ಲಾ ಪೊಲೀಸ್ ಠಾಣೆಗಳ ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು ದರೋಡೆ: ಕಾನ್ಸ್​ಟೇಬಲ್​ ಸಸ್ಪೆಂಡ್​, ಇನ್ಮುಂದೆ ಇನ್ಸ್​ಪೆಕ್ಟರ್​ ಗಮನಕ್ಕೆ ತರದೆ ಕೇಸ್ ನಡೆಸುವಂತಿಲ್ಲ
ಪೊಲೀಸ್​ ಕಾನ್ಸ್​ಟೇಬಲ್​ ಅಣ್ಣಪ್ಪ ನಾಯ್ಕ್
Shivaprasad B
| Edited By: |

Updated on: Nov 23, 2025 | 7:25 PM

Share

ಬೆಂಗಳೂರು, ನವೆಂಬರ್​ 23: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನು (Robbery Case) ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೇಸ್​ನಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆ ಪೊಲೀಸ್​ ಕಾನ್ಸ್​ಟೇಬಲ್​ ಅಣ್ಣಪ್ಪ ನಾಯ್ಕ್​​ ಅನ್ನು ಸಸ್ಪೆಂಡ್​ (suspend) ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್​ರಿಂದ ಆದೇಶ ಹೊರಡಿಸಲಾಗಿದೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್​ ಸೀಮಂತ್​ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನ ಖುದ್ದು ವಿಚಾರಣೆ ಮಾಡಿ ರಿಪೋರ್ಟ್​ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚಿಸಿದ್ದಾರೆ.

ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಈ ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗಿದೆ. ಇತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: 5.56 ಕೋಟಿ ಸಿಕ್ಕಿದ್ದೆಲ್ಲಿ? ಖದೀಮರ ಖರ್ತಾನಕ್ ಹೆಜ್ಜೆ ಗುರುತು ಬಯಲು

ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಬೀಟ್ ಸಿಬ್ಬಂದಿಯಾಗಿ ಅಣ್ಣಪ್ಪ ನಾಯ್ಕ್ ಕೆಲಸ ಮಾಡುತ್ತಿದ್ದ. ಈ ಹಿಂದೆ ಕ್ರೈಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪನನ್ನು ಅಲ್ಲಿಂದ ತೆಗೆದು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.

ಅಧಿಕಾರಿಗಳಿಗೆ ಖಡಕ್​ ​ಸೂಚನೆ ನೀಡಿದ ಕಮಿನಷರ್​ ಸೀಮಂತ್​ ಕುಮಾರ್​

ಇನ್ನು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಕೇಸ್​ನಲ್ಲಿ ಕಾನ್ಸ್​ಟೇಬಲ್​​ ಭಾಗಿ ಹಿನ್ನೆಲೆ ಬೆಂಗಳೂರು ಕಮಿನಷರ್​ ಸೀಮಂತ್​ ಕುಮಾರ್​ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬೆನ್ನಲ್ಲೇ ಎಲ್ಲಾ ಠಾಣೆಯ ಪಿಎಸ್​ಐ, ಎಎಸ್ ಐ, ಹೆಡ್ ಕಾನ್ಸ್​ಟೇಬಲ್ ಹಾಗೂ ಕಾನ್ಸ್​ಟೇಬಲ್​​​ಗಳ ಮಾನಿಟರಿಂಗ್​​​ಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Bengaluru: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!

ಇತ್ತೀಚೆಗೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಕಾನ್ಸ್​ಟೇಬಲ್​​ಗಳಿಂದ ಸುಲಿಗೆ ಮಾಡಲಾಗಿದೆ. ಇದೀಗ ದರೋಡೆ ಕೇಸ್​ನಲ್ಲೂ ಕಾನ್ಸ್​ಟೇಬಲ್ ಭಾಗಿ ಆಗಿದ್ದಾನೆ. ಕಿಡ್ನಾಪ್, ಬೆದರಿಕೆ ಸೇರಿದಂತೆ ಕೆಲ ಪ್ರಕರಣಗಳಲ್ಲಿ ಕೆಳ ಹಂತದ ಸಿಬ್ಬಂದಿಗಳೆ ಭಾಗಿ ಆಗುತ್ತಿದ್ದು, ಹೀಗಾಗಿ ಕೆಳಹಂತದ ಸಿಬ್ಬಂದಿ ಮೇಲೆ ನಿಗಾವಹಿಸದ ಇನ್ಸ್​ಪೆಕ್ಟರ್​ಗಳಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ಸ್​ಪೆಕ್ಟರ್​ಗಳ ಗಮನಕ್ಕೆ ತರದೆ ಸಿಬ್ಬಂದಿ ಯಾವ ಕೇಸ್​ಗಳನ್ನ ನಡೆಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!