ಬೆಂಗಳೂರು ದರೋಡೆ: ಕಾನ್ಸ್ಟೇಬಲ್ ಸಸ್ಪೆಂಡ್, ಇನ್ಮುಂದೆ ಇನ್ಸ್ಪೆಕ್ಟರ್ ಗಮನಕ್ಕೆ ತರದೆ ಕೇಸ್ ನಡೆಸುವಂತಿಲ್ಲ
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ ದರೋಡೆ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾಗುತ್ತಿರುವ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ನನ್ನು ಸಸ್ಪೆಂಡ್ ಮಾಡಲಾಗಿದೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಮಿನಷರ್ ಎಲ್ಲಾ ಪೊಲೀಸ್ ಠಾಣೆಗಳ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 23: ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣವನ್ನು (Robbery Case) ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೇಸ್ನಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅನ್ನು ಸಸ್ಪೆಂಡ್ (suspend) ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್ರಿಂದ ಆದೇಶ ಹೊರಡಿಸಲಾಗಿದೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್ ಸೀಮಂತ್ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನ ಖುದ್ದು ವಿಚಾರಣೆ ಮಾಡಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚಿಸಿದ್ದಾರೆ.
ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಈ ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ಮೈಂಡ್ ಎನ್ನಲಾಗಿದೆ. ಇತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು.
ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: 5.56 ಕೋಟಿ ಸಿಕ್ಕಿದ್ದೆಲ್ಲಿ? ಖದೀಮರ ಖರ್ತಾನಕ್ ಹೆಜ್ಜೆ ಗುರುತು ಬಯಲು
ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಬೀಟ್ ಸಿಬ್ಬಂದಿಯಾಗಿ ಅಣ್ಣಪ್ಪ ನಾಯ್ಕ್ ಕೆಲಸ ಮಾಡುತ್ತಿದ್ದ. ಈ ಹಿಂದೆ ಕ್ರೈಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪನನ್ನು ಅಲ್ಲಿಂದ ತೆಗೆದು ಬೀಟ್ ಡ್ಯೂಟಿಗೆ ಹಾಕಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.
ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಕಮಿನಷರ್ ಸೀಮಂತ್ ಕುಮಾರ್
ಇನ್ನು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಕೇಸ್ನಲ್ಲಿ ಕಾನ್ಸ್ಟೇಬಲ್ ಭಾಗಿ ಹಿನ್ನೆಲೆ ಬೆಂಗಳೂರು ಕಮಿನಷರ್ ಸೀಮಂತ್ ಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬೆನ್ನಲ್ಲೇ ಎಲ್ಲಾ ಠಾಣೆಯ ಪಿಎಸ್ಐ, ಎಎಸ್ ಐ, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ಗಳ ಮಾನಿಟರಿಂಗ್ಗೆ ಸೂಚಿಸಿದ್ದಾರೆ.
ಇದನ್ನೂ ಓದಿ: Bengaluru: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!
ಇತ್ತೀಚೆಗೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಕಾನ್ಸ್ಟೇಬಲ್ಗಳಿಂದ ಸುಲಿಗೆ ಮಾಡಲಾಗಿದೆ. ಇದೀಗ ದರೋಡೆ ಕೇಸ್ನಲ್ಲೂ ಕಾನ್ಸ್ಟೇಬಲ್ ಭಾಗಿ ಆಗಿದ್ದಾನೆ. ಕಿಡ್ನಾಪ್, ಬೆದರಿಕೆ ಸೇರಿದಂತೆ ಕೆಲ ಪ್ರಕರಣಗಳಲ್ಲಿ ಕೆಳ ಹಂತದ ಸಿಬ್ಬಂದಿಗಳೆ ಭಾಗಿ ಆಗುತ್ತಿದ್ದು, ಹೀಗಾಗಿ ಕೆಳಹಂತದ ಸಿಬ್ಬಂದಿ ಮೇಲೆ ನಿಗಾವಹಿಸದ ಇನ್ಸ್ಪೆಕ್ಟರ್ಗಳಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ಸ್ಪೆಕ್ಟರ್ಗಳ ಗಮನಕ್ಕೆ ತರದೆ ಸಿಬ್ಬಂದಿ ಯಾವ ಕೇಸ್ಗಳನ್ನ ನಡೆಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



