AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 22 ಬ್ಯಾಂಕ್​ನಲ್ಲಿ ಹತ್ತು ಕೋಟಿ ಲೋನ್ ಪಡೆದ ಪ್ರಕರಣ; ಒಂದೇ ಕುಟುಂಬದ ಐವರು ಸೇರಿ ಆರು ಜನ ಅರೆಸ್ಟ್

ವಂಚನೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಎಷ್ಟೇ ಮುತುವರ್ಜಿವಹಿಸಿದರೂ ಒಮ್ಮೊಮ್ಮೆ ಮೋಸ ಹೋಗಬೇಕಾಗುತ್ತದೆ. ಅದರಂತೆ ಇದೀಗ 22 ಬ್ಯಾಂಕ್​​ನಲ್ಲಿ ಹತ್ತು ಕೋಟಿ ಲೋನ್(loan) ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಜನರನ್ನು ಅರೆಸ್ಟ್ ಮಾಡಲಾಗಿದೆ.

ಬೆಂಗಳೂರು: 22 ಬ್ಯಾಂಕ್​ನಲ್ಲಿ ಹತ್ತು ಕೋಟಿ ಲೋನ್ ಪಡೆದ ಪ್ರಕರಣ; ಒಂದೇ ಕುಟುಂಬದ ಐವರು ಸೇರಿ ಆರು ಜನ ಅರೆಸ್ಟ್
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 19, 2024 | 4:01 PM

Share

ಬೆಂಗಳೂರು, ಏ.19: ಕಟ್ಟಡವಿದೆ ಎಂದು ನಂಬಿಸಿ 22 ಬ್ಯಾಂಕ್​​ನಲ್ಲಿ ಹತ್ತು ಕೋಟಿ ಲೋನ್(loan) ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಜನರನ್ನು ಅರೆಸ್ಟ್ ಮಾಡಲಾಗಿದೆ. ನಾಗೇಶ್ ಭಾರದ್ವಾಜ್ ,ಬಿ ಎಸ್ ಸುಮಾ, ಸತೀಶ್, ವೇದಾ, ಆರ್ ವಿ ಶೇಷಗಿರಿ, ಆರ್​ಎಸ್ ಶೋಭಾ ಬಂಧಿತ ಆರೋಪಿಗಳು. ಬೇಗೂರಿನಲ್ಲಿ ನಿವಾಸವಿದೆ ಎಂದು ನಂಬಿಸಿ ಅದರ ಮೇಲೆ ಲೋನ್ ಪಡೆಯಲಾಗಿತ್ತು, ಈ ಕುರಿತು ಜಯನಗರ ಪೊಲೀಸ್ ಠಾಣೆ(Jayanagar Police Station)ಯಲ್ಲಿ 2022 ರಲ್ಲಿ ಕೇಸ್ ಕೂಡ ದಾಖಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಆರೋಪಿಗಳು ನಾಪತ್ತೆಯಾಗಿದ್ದರು.

ಕಟ್ಟಡವಿದೆ ಎಂದು ನಂಬಿಸಿ ಹಲವು ಬ್ಯಾಂಕ್​ಗಳಲ್ಲಿ ಲೋನ್​

ಸಹಕಾರಿ ಬ್ಯಾಂಕ್, ರಾಷ್ಟೀಕೃತ ಬ್ಯಾಂಕ್, ಕೋ ಅಪರೇಟಿವ್ ಬ್ಯಾಂಕ್ ಸೇರಿ ಹಲವಾರು ಕಡೆಗಳಲ್ಲಿ ಬೇಗೂರಿನಲ್ಲಿ 2100 ಅಡಿ ವಿಸ್ತೀರ್ಣದಲ್ಲಿ ನಮ್ಮ ಕಟ್ಟಡ  ಇದೆ ಎಂದು ನಂಬಿಸಿದ್ದರು. ಜೊತೆಗೆ ಅದಕ್ಕೆ ಬೇಕಾದ ದಾಖಲಾತಿಗಳನ್ನು ಕೂಡ ಸೃಷ್ಟಿಸಿ, ಅದನ್ನು ಕುಟುಂಬದ ಬೇರೆ ಬೇರೆ ವ್ಯಕ್ತಿಗಳ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದರು. ನಂತರ ಅದಕ್ಕೆ ಬೇಕಾದ ದಾಖಲಾತಿಗಳನ್ನು ನಕಲಿಯಾಗಿ ಸೃಷ್ಟಿಸಿಕೊಂಡು 2014 ರಿಂದ 2015ರ ಅವಧಿಯಲ್ಲಿ ವಂಚನೆ ಮಾಡಿದ್ದರು. ಅಷ್ಟೇ ಅಲ್ಲ, ಪಡೆದ ಲೋನ್ ಹಣದಲ್ಲಿ ಒಂದು ಸೈಟ್ ಕೂಡ ಪಡೆದುಕೊಂಡಿದ್ದರು. ಸದ್ಯ ಅದನ್ನು ಕೇಸ್​ನಲ್ಲಿ ಅಟ್ಯಾಚ್ ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಜಾಲ: ಕುವೈತ್​ನಲ್ಲಿ ಕುಳಿತು ಕೋಟಿ ಕೋಟಿ ವಂಚಿಸಿದವ ಅರೆಸ್ಟ್

ಬೈಕ್​​ಗೆ ಟಿಪ್ಪರ್​ ಲಾರಿ ಡಿಕ್ಕಿ; ಬೈಕ್​ ಸವಾರನ ಬಲಗೈ ಛಿದ್ರ ಛಿದ್ರ

ಆನೇಕಲ್: ಪಟ್ಟಣದ ರಾಘವೇಂದ್ರ ಭವನ ಮುಂಭಾಗದಲ್ಲಿ ಬೈಕ್​​ಗೆ ಟಿಪ್ಪರ್​ ಲಾರಿ ಡಿಕ್ಕಿಯಾಗಿ ಬೈಕ್​ ಸವಾರನ ಬಲಗೈ ಛಿದ್ರವಾಗಿದೆ. ವಣಕನಹಳ್ಳಿ ವಾಸಿ ಗ್ರಾಮದ ಗಾಯಾಳು ಗೋಪಾಲರೆಡ್ಡಿ(60). ಮುಂದೆ ಸಾಗುತ್ತಿದ್ದ ಬೈಕ್​​ಗೆ ಹಿಂಬದಿಯಿಂದ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಬಿದ್ದಿದ್ದ ಬೈಕ್​ ಸವಾರನ ಬಲಗೈ ಮೇಲೆ ಟಿಪ್ಪರ್ ಲಾರಿ ಚಕ್ರ ಹರಿದಿದೆ. ಇನ್ನು ಇದೇ ರೀತಿ ಲಾರಿಗಳ ಅತಿ ವೇಗದಿಂದ ತಿಂಗಳಲ್ಲಿ ಮೂರು ಬಲಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Fri, 19 April 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ