Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವು

ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್​ನಲ್ಲಿ ನಡೆದಿದೆ.

ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವು
ಮೃತ ಮಗು ದೀಕ್ಷಾ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 15, 2023 | 7:16 AM

ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್​ನಲ್ಲಿ ನಡೆದಿದೆ. ಒಂದೂವರೆ ವರ್ಷದ ದೀಕ್ಷಾ ಮಹಡಿ‌ ಮೇಲಿಂದ ಬಿದ್ದು ಸಾವನ್ನಪ್ಪಿದ ಮಗು. ವಿನಯ್ ಎಂಬ ದಂಪತಿಯ ಪುತ್ರಿ ದೀಕ್ಷಾ, ಸ್ನೇಹಿತರ ಮನೆಗೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಊಟ ಮಾಡಿಸುತ್ತಿದ್ದ ದೀಕ್ಷಾ ತಾಯಿ. ಆ ವೇಳೆ ಆಟವಾಡುತ್ತ ಗ್ರಿಲ್ಸ್ ಮೇಲೆ ಮಗು ಹತ್ತಿದೆ. ಬಳಿಕ ನೋಡ ನೋಡುತ್ತಿದ್ದಂತೆ ಜಾರಿ ಕೆಳ ಬಿದ್ದಿದ್ದು, ಕೂಡಲೇ ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನವ ವಿವಾಹಿತೆ ಅನುಮಾನಾಸ್ಪದ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲೂಕಿನ ಹೊಸಕೇಟೆ ಗ್ರಾಮದ ಅಕ್ಷಿತಾ (18) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಕಳೆದ‌ ಶುಕ್ರವಾರ ಪೋಷಕರ ವಿರೋಧದ ಮಧ್ಯೆ ಪ್ರೀತಿಸಿ ಹೇಮಂತ್ ಎಂಬಾತನೊಂದಿಗೆ ವಿವಾಹವಾಗಿದ್ದ ಅಕ್ಷಿತಾ ಇದೀಗ ಗಂಡನ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ. ಅಕ್ಷಿತಾ ಮನೆಗೆ ತೆರಳಿ ಜೀವ ಬೆದರಿಕೆ‌ ಹಾಕಿದ್ದ ಅತ್ತೆ ಗುರಿಜಾ, ಮಾವ ದಶರಥ ಎಂಬುವವರೆ ಕೊಲೆ ಮಾಡಿದ್ದಾರೆಂದು ಅಕ್ಷಿತಾ ಪೋಷಕರು ಆರೋಪಿಸಿದ್ದಾರೆ. ಇನ್ನು ಈ ಕುರಿತು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕ ಅನುಮಾನಸ್ಪದ ರೀತಿಯಲ್ಲಿ ಸಾವು

ನಕಲಿ ಬಂಗಾರ ನೀಡಿ 30.50 ಲಕ್ಷ ವಂಚನೆ

ದಾವಣಗೆರೆ: ತಮಿಳುನಾಡು ಮೂಲದ ವೀಳ್ಯೆದೆಲೆ ವ್ಯಾಪಾರಿಯೊಬ್ಬರಿಗೆ ವ್ಯಕ್ತಿಯೊಬ್ಬ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ನಕಲಿ ನಾಣ್ಯಗಳನ್ನು ನೀಡಿ ಬರೊಬ್ಬರಿ 30.50 ಲಕ್ಷ ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮ್ಮಿನಕಟ್ಟೆಯ ತಾಯಪ್ಪ ಎಂಬಾತನೇ ಮೋಸ ಮಾಡಿದ ವ್ಯಕ್ತಿ. ಹರಿಹರದ ಅಂಡರ್ ಬ್ರಿಡ್ಜ್‌ ಬಳಿ ನಿಮ್ಮನ್ನು ನೋಡಿರುವುದಾಗಿ ನಂಬಿಸಿದ ತಾಯಪ್ಪ ನಮ್ಮ ಊರಿನಲ್ಲಿ ತಿಪ್ಪೆಗುಂಡಿ ತೆಗೆಯುವಾಗ 2 ಕೆಜಿ. ಬಂಗಾರದ ನಾಣ್ಯಗಳು ಸಿಕ್ಕಿದ್ದು, ಕಡಿಮೆ ಬೆಲೆಗೆ ಕೊಡುತ್ತೇನೆ ಎಂದು ಹೇಳಿದ್ದಾನೆ.

ಆಗ ರವೀಂದ್ರನ್ ನಾಣ್ಯ ತೋರಿಸು ಎಂದು ಹೇಳಿದಾಗ ಹಿರೇಕೆರೂರಿಗೆ ಹೋಗಿ ಅಸಲಿ ನಾಣ್ಯವನ್ನು ತೋರಿಸಿದ್ದಾನೆ. ಅದನ್ನು ನಂಬಿದ ವ್ಯಾಪಾರಿ 30.50 ಲಕ್ಷವನ್ನು ನೀಡಿದಾಗ ನಕಲಿ ಬಂಗಾರ ಕೊಟ್ಟಿದ್ದಾನೆ. ಇದನ್ನ ತಮಿಳುನಾಡಿನಲ್ಲಿ ಪರೀಕ್ಷಿಸಿದಾಗ ನಕಲಿ ಎಂದು ತಿಳಿದಿದೆ. ಬಳಿಕ ತಾಯಪ‍್ಪನ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ