AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್​ಗೆ ಟಿಪ್ಪರ್​ ಡಿಕ್ಕಿ ಓರ್ವ ವಿದ್ಯಾರ್ಥಿನಿ ಸಾವು

ಕೆಂಗೇರಿ ಠಾಣಾ ವ್ಯಾಪ್ತಿಯ ನೈಸ್​ ರಸ್ತೆ ಬಳಿ ವಿದ್ಯಾರ್ಥಿನಿಯರಿಬ್ಬರು ಬೈಕ್​ನಲ್ಲಿ ತೆರಳುವಾಗ ಟಿಪ್ಪರ್​ ಲಾರಿ ನಡುವೆ ಡಿಕ್ಕಿಯಾಗಿದ್ದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇನ್ನೂಬ್ಬ ವಿದ್ಯಾರ್ಥಿನಿಗೆ ಗಾಯಗಳಾಗಿವೆ.

ಬೆಂಗಳೂರು: ಬೈಕ್​ಗೆ ಟಿಪ್ಪರ್​ ಡಿಕ್ಕಿ ಓರ್ವ ವಿದ್ಯಾರ್ಥಿನಿ ಸಾವು
ಬೈಕ್ ಮತ್ತು ಟಿಪ್ಪರ್​ ನಡುವೆ ಡಿಕ್ಕಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jan 21, 2023 | 11:32 AM

Share

ಬೆಂಗಳೂರು: ನೈಸ್​ ರಸ್ತೆ ಬಳಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಸರಿತಾ (21) ಸಾವನ್ನಪ್ಪಿದ್ದಾಳೆ. ಇನ್ನೂಬ್ಬ ಯುವತಿ ಅನಿತಾ (20) ಎಂಬುವವರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಡಿಗ್ರಿ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಓದುತ್ತಿದ್ದರು. ಇನ್ನು ಸರಿತಾ ಎಂಬಾಕೆಗೆ 6 ತಿಂಗಳ ಹಿಂದೆ ಮದುವೆಯಾಗಿದ್ದು, ವಿವಾಹದ ಬಳಿಕವು ಕಾಲೇಜಿಗೆ ಹೋಗುತ್ತಿದ್ದಳು.

ಇಬ್ಬರು ಒಟ್ಟಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆ ಬಳಿ ನಿನ್ನೆ(ಜ.20) ಮಧ್ಯಾಹ್ನ 2.30 ಕ್ಕೆ ಟಿಪ್ಪರ್​ ಗುದ್ದಿದೆ. ಬಳಿಕ 10 ಮೀಟರ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳ್ಳತನ ಮಾಡಿ ಸ್ಟೇಷನ್ ಪಕ್ಕದಲ್ಲೇ ಮನೆ ಮಾಡಿದ್ದ ಕಳ್ಳ

ಬೆಂಗಳೂರು: ಮಂಜುನಾಥ್ ಅಲಿಯಾಸ್​ ಜಿಮ್ ಮಂಜು ಎಂಬಾತ ಕಳೆದ ಡಿಸೆಂಬರ್ 5 ನೇ ತಾರೀಖು ವಾಕಿಂಗ್ ಮಾಡುವ ವೇಳೆ ರುಕ್ಮಿಣಿ ಎಂಬ ವೃದ್ಧೆಯನ್ನ ತಳ್ಳಿ, 2 ಲಕ್ಷ 20 ಸಾವಿರ ಮೌಲ್ಯದ ಸರ ಕದ್ದು ಪರಾರಿಯಾಗಿದ್ದ ನಂತರ ಅಲ್ಲಿದ್ದ ಸಿಸಿಟಿವಿಗಳನ್ನ ಪರಿಶೀಲನೆ ನಡೆಸಿದ್ದ ಪೊಲೀಸರು, ಆರೋಪಿಯ ಹೆಜ್ಜೆ ಗುರುತಿನ ಸಿಸಿಟಿವಿ ಫಾಲೋ ಮಾಡಿದಾಗ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ಎಂಡ್ ಆಗುತ್ತಿತ್ತು. ಈ ವಿಚಾರವಾಗಿ ಪೊಲೀಸ್ ಇನ್ಸ್ಪೆಕ್ಟರ್ ಉದಯರವಿ ವಿಪರೀತ ತಲೆ ಕೆಡಿಸಿಕೊಂಡಿದ್ದರು.

ಹೆಚ್ಚು ಕಮ್ಮಿ ಒಂದೂವರೆ ತಿಂಗಳ ಬಳಿಕ ಸಿಕ್ಕಿಬಿದ್ದ ಆರೋಪಿ ಜಿಮ್ ಮಂಜು, ವಿಚಾರಣೆ ವೇಳೆ ಸರಗಳವು ಮಾಡಿದ ದಿನ ಹೊಯ್ಸಳದಲ್ಲಿ ಇನ್ಸ್ಪೆಕ್ಟರ್​ನ್ನ ನೋಡಿದ್ದನೆಂದು ಬಾಯ್ಬಿಟ್ಟಿದ್ದಾನೆ. ಕೃತ್ಯ ಎಸಗಿ ಪೊಲೀಸರ ಭಯದಿಂದ 20 ಕೆಜಿ ಸಣ್ಣ ಆಗಿರೋದಾಗಿ ಹೇಳಿದ್ದಾನೆ. ಸ್ನ್ಯಾಚಿಂಗ್ ವೇಳೆ ಹಾಕಿದ್ದ ಬಟ್ಟೆಯನ್ನ ಮನೆಯಲ್ಲೇ ಸುಟ್ಟುಹಾಕಿದ್ದನಂತೆ ಕೊನೆಗೂ ಆರೋಪಿಯನ್ನ ಬಂಧಿಸಿದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು

ಇದನ್ನೂ ಓದಿ:ಬೆಳಗ್ಗೆ ಹಣ್ಣಿನ ವ್ಯಾಪಾರ, ರಾತ್ರಿ ಆಟೋ ಕಳ್ಳತನ -14 ಆಟೋಗಳ ಎಗರಿಸಿದ್ದ ಖದೀಮ ಅಂದರ್ ಆದ ಕತೆಯಿದು!

ಸಾಲ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ

ಕೋಲಾರ: ನಗರದ ಅಬ್ದುಲ್‌ ಶಹಬಾಷ್ ಎಂಬಾತ ಅಲ್ಪಸಂಖ್ಯಾತರಿಗೆ ಲೋನ್​ ಕೊಡಿಸುವುದಾಗಿ ಹೇಳಿ 20 ಲಕ್ಷ ರೂ. ವಂಚಿಸಿದ್ದ ಇತನನ್ನು ಇದೀಗ ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿ. ಆರೋಪಿ ಬಳಿ ಇದ್ದ 82 ಸಾವಿರ ನಗದು, ವಿವಿಧ ಬ್ಯಾಂಕ್​ಗಳ ರಬ್ಬರ್​ ಸ್ಟ್ಯಾಂಪ್​ಗಳನ್ನು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 21 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ