AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ ಅಡ್ಡಾದಿಡ್ಡಿ ಕ್ಯಾಂಟರ್ ಚಾಲನೆ; ಇಬ್ಬರು ಪಾದಾಚಾರಿಗಳು ಸಾವು

Bengaluru News: ಚಾಲಕ ಮದ್ಯದ ಅಮಿಲನಲ್ಲೇ ಅಡ್ಡಾದಿಡ್ಡಿಯಾಗಿ ಟ್ಯಾಂಕರ್ ಚಲಾಯಿಸಿದ ಪರಿಣಾಮ ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.

ಮದ್ಯ ಸೇವಿಸಿ ಅಡ್ಡಾದಿಡ್ಡಿ ಕ್ಯಾಂಟರ್ ಚಾಲನೆ; ಇಬ್ಬರು ಪಾದಾಚಾರಿಗಳು ಸಾವು
ಅನೇಕಲ್​ನಲ್ಲಿ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಟ್ಯಾಂಕರ್
ರಾಮು, ಆನೇಕಲ್​
| Updated By: Rakesh Nayak Manchi|

Updated on:Aug 01, 2023 | 3:04 PM

Share

ಬೆಂಗಳೂರು, ಆಗಸ್ಟ್ 1: ಟ್ಯಾಂಕರ್ ವಾಹನ ಹರಿದು (Canter Accident) ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿರುವ ಘಟನೆ ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲೇ ಚಾಲಕ ಟ್ಯಾಂಕರ್ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್, ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್​​ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಮಂದಿಗೆ ಗಾಯ

ಹಾಸನದಲ್ಲಿ ಸರಣಿ ಅಪಘಾತ, ಆಟೋ ಎರಡು ಸುತ್ತು ಪಲ್ಟಿ

ಹಾಸನ: ಸರಣಿ ಅಪಘಾತ ಸಂಭವಿಸಿದ ಘಟನೆ ಆರ್.ಸಿ.ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದು ನಿಂತಿದ್ದ ಇಕೋ ಕಾರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರೂ ವಾಹನಗಳು ಜಖಂ ಗೊಂಡಿವೆ. ಡಿಕ್ಕಿ ರಭಸಕ್ಕೆ ಆಟೋ ಎರಡು ಸುತ್ತು ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕನ ಬೇಜವಾಬ್ದಾರಿತನದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರು ಡಿಕ್ಕಿ ಹೊಡೆಯುವ ದೃಶ್ಯ ಸಿ.ಸಿ.ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 1 August 23