AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 13 ಅಪಘಾತಗಳು! ಎಲ್ಲೆಲ್ಲಿ ಎಷ್ಟು ಸಾವು? ಇಲ್ಲಿದೆ ಅಂಕಿಅಂಶ

ಇತ್ತೀಚೆಗೆ ಕರ್ನಾಟಕದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಇದೀಗ, ಬೆಂಗಳೂರು ನಗರದಲ್ಲೇ ಕಳೆದ 24 ಗಂಟೆಗಳಲ್ಲಿ 13 ಅಫಾತಗಳು ಸಂಭವಿಸಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 13 ಅಪಘಾತಗಳು! ಎಲ್ಲೆಲ್ಲಿ ಎಷ್ಟು ಸಾವು? ಇಲ್ಲಿದೆ ಅಂಕಿಅಂಶ
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 13 ಅಪಘಾತಗಳು (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on:Aug 22, 2023 | 12:55 PM

ಬೆಂಗಳೂರು, ಆಗಸ್ಟ್ 22: ಇತ್ತೀಚೆಗೆ ಕರ್ನಾಟಕದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದರು. ಈ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಇದೀಗ ಕಳೆದ 24 ಗಂಟೆಗಳಲ್ಲಿ ಬೆಂಗಳೂರು (Bengaluru) ನಗರದಲ್ಲೇ ಸಂಭವಿಸಿದ 13 ಅಫಾತಗಳಲ್ಲಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಅಪಘಾತ ಸಂಭವಿಸಿದೆ?

  • ಹೆಬ್ಬಾಳ – ಒಂದು ಅಪಘಾತ, ಒಂದು ಸಾವು (ಸೆಲ್ಫ್ ಆಕ್ಸಿಡೆಂಟ್)
  • ರಾಜಾಜಿನಗರ – ಎರಡು ಅಪಘಾತ, ಒಂದು ಸಾವು‌ (ಸೆಲ್ಫ್ ಆಕ್ಸಿಡೆಂಟ್)
  • ಹೆಣ್ಣೂರು – ಎರಡು ಅಪಘಾತ, ಒಂದು ಸಾವು (ಪಾದಚಾರಿ ಸಾವು)
  • ಬಸವನಗುಡಿ – ಎರಡು ಅಪಘಾತ
  • ಕೆ.ಆರ್ ಪುರಂ – ಒಂದು ಅಪಘಾತ
  • ವೈಟ್ ಫೀಲ್ಡ್ – ಎರಡು ಅಪಘಾತ
  • ಹುಳಿಮಾವು – ಎರಡು ಅಪಘಾತ
  • ಸದಾಶಿವನಗರ – ಒಂದು ಅಪಘಾತ
  • ಮೈಲೋ ಲೇ ಔಟ್ – ಒಂದು ಅಪಘಾತ

ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಸೆಲ್ಪ್ ಆಕ್ಸಿಡೆಂಟ್​​ಗೆ ಪಶ್ಚಿಮ ಬಂಗಾಳ‌ ಮೂಲದ 32 ವರ್ಷದ ಯುವಕ ಬಲಿಯಾಗಿದ್ದು, ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಪೂನಂದಾಸ್ (32) ಮೃತೆ. ಅತಿ ವೇಗದಿಂದ ಬಂದು ಡಿವೈಡರ್​​ಗೆ ಬೈಕ್ ಡಿಕ್ಕಿಯಾಗಿ ರಾಹುಲ್ (19) ಎಂಬಾತ ಮೃತಪಟ್ಟಿದ್ದಾನೆ. ಒಟ್ಟಾರೆಯಾಗಿ 13 ಅಪಘಾತಗಳಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಾಲೇಜು ಯುವಕ, ಯುವತಿಯರು, ಮಹಿಳೆಯರು, ಮಕ್ಕಳು, ಪುರುಷರು ಸೇರಿದಂತೆ ವಯೋವೃದ್ಧರು ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಈ ಕುರಿತು ಆತಂಕ ವ್ಯಕ್ತಪಡಿಸಿದ್ದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ಕರಾಳ ಶನಿವಾರ ಎಂದು ಕರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Tue, 22 August 23

ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ