AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಆಡುಗೋಡಿ ಪೊಲೀಸರಿಂದ ಚೇಸ್ ಮಾಡಿ ಕಿಡ್ನಾಪ್ ಕೇಸ್ ಭೇದಿಸಿದ ಪ್ರಕರಣ; ತನಿಖೆ ವೇಳೆ ರಿವೈಲ್ ಆಯ್ತು ಸ್ಪೋಟಕ ಸಂಗತಿ

ಹಣಕ್ಕಾಗಿ ಯುವಕನನ್ನ ಅಪಹರಣ ಮಾಡಿದ್ದ ಕಿಡ್ನಾಪರ್ಸ್ ಹಣ ಬಂದ ಮೇಲೆ ಯುವತಿ ಬೇಕು ಎಂದಿದ್ದರಂತೆ ತನಿಖೆ ವೇಳೆ ಆರೋಪಿ ಗೋಪಿ ಬಾಯ್ಬಿಟ್ಟಿದ್ದಾನೆ.

Bengaluru: ಆಡುಗೋಡಿ ಪೊಲೀಸರಿಂದ ಚೇಸ್ ಮಾಡಿ ಕಿಡ್ನಾಪ್ ಕೇಸ್ ಭೇದಿಸಿದ ಪ್ರಕರಣ; ತನಿಖೆ ವೇಳೆ ರಿವೈಲ್ ಆಯ್ತು ಸ್ಪೋಟಕ ಸಂಗತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 13, 2023 | 8:59 AM

Share

ಬೆಂಗಳೂರು: 4ದಿನಗಳ ಹಿಂದೆ ಬಂಡೇಪಾಳ್ಯ ನಿವಾಸಿ ತೌಹಿದ್​ ಎಂಬ ಯುವಕನನ್ನ ಬೈಕ್​ನ ಹಣಕ್ಕಾಗಿ ಕಿಡ್ನಾಪ್ ಮಾಡಿದ್ದ ಆರೋಪಿಗಳನ್ನ ಆಡಗೋಡಿ ಪೊಲೀಸರು 2 ಕಿ.ಮೀ ಚೇಸ್​ ಮಾಡಿ ಕಿಡ್ನಾಪ್​ರ್​ನ್ನು ಬಂಧಿಸಿ ಯುವಕನ ರಕ್ಷಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೋಪಿಯನ್ನ ತನಿಖೆಗೆ ಒಳಪಡಿಸಿದ್ದು ಕಿಡ್ನಾಪರ್ಸ್ ವಿಚಾರ ತಿಳಿದು ಪೊಲೀಸರು ಶಾಕ್ ಆಗಿದ್ದಾರೆ. ಹಣವನ್ನ ಕೊಟ್ಟ ಮೇಲೂ ತೌಹಿದ್​ನನ್ನ ಬೀಡದೇ ಹಣ ಕೊಡಲು ಬಂದ ಸಂಬಂಧಿ ಹಾಗೂ ಯುವತಿಯ ಮೊಬೈಲ್ ಕಸಿದುಕೊಂಡು ಬಳಿಕ ರಸ್ತೆಯಲ್ಲಿದ್ದ ಆ ಯುವತಿಯ ಫೋಟೋವನ್ನ ಮೊಬೈಲ್​ನಲ್ಲಿ ನೋಡಿ ಫೋಟೊದಲ್ಲಿದ್ದ ಹುಡುಗಿ ಬೇಕು ಎಂದು ವರಸೆ ಬದಲಾಯಿಸಿದ್ದರಂತೆ.

 ಯುವಕನನ್ನ ರಕ್ಷಣೆ ಮಾಡಿದ್ದ ಬೀಟ್​ ಪೊಲೀಸರು

ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿ ಇನ್ನುಳಿದವರಿಗಾಗಿ ಬಲೆ ಬಿಸಿದ್ದಾರೆ.

ಇದನ್ನೂ ಓದಿ: Nigeria: ಬಂಧೂಕುಧಾರಿಗಳಿಂದ ರೈಲ್ವೆ ನಿಲ್ದಾಣದ ಮೇಲೆ ದಾಳಿ, 30ಕ್ಕೂ ಹೆಚ್ಚು ಮಂದಿಯ ಅಪಹರಣ

ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಆರೋಪಿಯನ್ನ ಹಸ್ತಾಂತರ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Fri, 13 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ