AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ

ಬೆಂಗಳೂರಿನ ಆಡುಗೋಡಿಯ ಮನೆಯೊಂದರಲ್ಲಿ ಜಾರ್ಖಂಡ್ ಮೂಲದ ಯುವತಿಯ ಅರೆಕೊಳೆತ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ. ಯುವತಿಯನ್ನು ಭೇಟಿ ಮಾಡಲು ಬರುತ್ತಿದ್ದ ಯುವಕನೊಂದಿಗೆ ಆಕೆ ಸದಾ ಜಗಳವಾಡುತ್ತಿದ್ದಳು ಎಂದು ಮನೆ ಮಾಲೀಕರು ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವರಗಳು ಇಲ್ಲಿದೆ.

ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ
ಮೃತದೇಹ ಪತ್ತೆಯಾಗಿದ್ದ ಕೊಠಡಿ ಹಾಗೂ ಒಳಚಿತ್ರದಲ್ಲಿ ಪೂಜಾ ದತ್ತಾImage Credit source: tv9
ಶಿವಪ್ರಸಾದ್​ ಬಿ.
| Edited By: |

Updated on:Apr 28, 2026 | 8:59 AM

Share

ಬೆಂಗಳೂರು, ಏಪ್ರಿಲ್ 28: ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್‌ನಲ್ಲಿ ಜಾರ್ಖಂಡ್ ಮೂಲದ ಯುವತಿ ಪೂಜಾ ದತ್ತಾ ಅವರ ನಗ್ನ ಮೃತದೇಹ ಪತ್ತೆಯಾದ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿ ಕಳೆದ ಮೂರು ವರ್ಷಗಳಿಂದ ವಾಸವಿದ್ದ ಮನೆಯಲ್ಲೇ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ (Suspected Murder Case) ಅಥವಾ ಅನುಮಾನಾಸ್ಪದ ಸಾವೋ (Suspicious Death) ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ (Police Investigation) ನಡೆಸುತ್ತಿದ್ದಾರೆ.

ಮನೆ ಮಾಲೀಕರು ನೀಡಿದ ಮಾಹಿತಿ ಇಲ್ಲಿದೆ

ಮೃತ ಪೂಜಾ ವಾಸವಿದ್ದ ಮನೆಯ ಮಾಲೀಕ ಜಾನಕಮ್ಮ ಅವರು ಈ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ‘ಪೂಜಾ ದತ್ತಾ ಕಳೆದ ಮೂರು ವರ್ಷಗಳಿಂದ ನನ್ನ ಮನೆಯಲ್ಲಿ ಬಾಡಿಗೆಗೆ ಇದ್ದಳು. ಆಕೆ ಅವಿವಾಹಿತೆಯಾಗಿದ್ದು, ಹೆಚ್ಚಾಗಿ ಹಿಂದಿಯಲ್ಲೇ ಸಂವಹನ ನಡೆಸುತ್ತಿದ್ದಳು. ಆಕೆಯನ್ನು ಭೇಟಿ ಮಾಡಲು ಒಬ್ಬ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅವನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು. ಆದರೆ ಆ ಜಗಳಕ್ಕೆ ಕಾರಣವೇನು ಎಂಬುದು ಮಾತ್ರ ತಿಳಿಯುತ್ತಿರಲಿಲ್ಲ’ ಎಂದು ಅವರು ಹೇಳಿದ್ದಾರೆ.

ದುರ್ನಾತ ಬಂದಾಗ ಬೆಳಕಿಗೆ ಬಂದ ಕೃತ್ಯ

ಕಳೆದ ಗುರುವಾರ ದಿನಸಿ ಸಾಮಗ್ರಿ ತರಲು ಕೆಳಗಿಳಿದು ಬಂದಿದ್ದೇ ಪೂಜಾಳನ್ನು ನೋಡಿದ ಕೊನೆಯ ಕ್ಷಣ ಎಂದು ಜಾನಕಮ್ಮ ತಿಳಿಸಿದ್ದಾರೆ. ಏಪ್ರಿಲ್ 27 ರ ಸಂಜೆ ಮನೆಯಿಂದ ತೀವ್ರ ದುರ್ನಾತ ಬರುತ್ತಿದ್ದ ಕಾರಣ, ಪಕ್ಕದ ಮನೆಯ ಯುವಕರು ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರ ಸಮ್ಮುಖದಲ್ಲಿ ಬಾಗಿಲು ಒಡೆದು ನೋಡಿದಾಗ, ಪೂಜಾ ಬೆತ್ತಲಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಮನೆಯಲ್ಲಿ ಬಟ್ಟೆಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಫ್ಯಾನ್ ಚಾಲನೆಯಲ್ಲೇ ಇತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

ಸ್ಥಳಕ್ಕೆ ಧಾವಿಸಿದ ಆಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆಗಾಗ ಮನೆಗೆ ಬರುತ್ತಿದ್ದ ಆ ನಿಗೂಢ ಯುವಕ ಯಾರು? ಆತನಿಗೂ ಈ ಸಾವಿಗೂ ಸಂಬಂಧವಿದೆಯೇ? ಎಂಬ ನಿಟ್ಟಿನಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಪೂಜಾಳ ಸಾವಿನ ಹಿಂದಿನ ಅಸಲಿ ಸತ್ಯ ಹೊರಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Tue, 28 April 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ