AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಸರಣಿ ವಂಚನೆ ಎಸಗುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.74 ಕೋಟಿ ರೂಪಾಯಿ ಮೌಲ್ಯದ ಫಾರ್ಚೂನರ್, ವೋಲ್ವೋ ಸೇರಿದಂತೆ 7 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರುಗಳನ್ನು ಸರಣಿಯಾಗಿ ಅಡಮಾನವಿಟ್ಟು ವಂಚಿಸುತ್ತಿದ್ದ ಈ ಜಾಲದಿಂದ ಮೂಲ ಮಾಲೀಕರನ್ನು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿದೆ.

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!
ಆರೋಪಿಗಳೊಂದಿಗೆ ಆಡುಗೋಡಿ ಪೊಲೀಸರು
ಶಿವಪ್ರಸಾದ್​ ಬಿ.
| Edited By: |

Updated on: Jul 28, 2026 | 1:55 PM

Share

ಮುಖ್ಯಾಂಶಗಳು

  • ನಕಲಿ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಆಡುಗೋಡಿ ಪೊಲೀಸರು ಬಂಧಿಸಿದರು.
  • ಆರೋಪಿಗಳಿಂದ 1.74 ಕೋಟಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
  • ಸರಣಿ ಅಡಮಾನ ಜಾಲದಿಂದ ಕಾರುಗಳ ಮೂಲ ಮಾಲೀಕರ ಪತ್ತೆ ಸವಾಲಾಗಿದೆ.

ಬೆಂಗಳೂರು, ಜುಲೈ 28: ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಣಿ ವಂಚನೆ ಎಸಗುತ್ತಿದ್ದ ಭಾರಿ ಜಾಲವನ್ನು ಆಡುಗೋಡಿ ಠಾಣೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 1.74 ಕೋಟಿ ರೂಪಾಯಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಭಾಕರ್, ಪ್ರಶಾಂತ್, ವೇಣುಗೌಡ ಹಾಗೂ ಭಾಗೇಶ್ ಬಂಧಿತ ಆರೋಪಿಗಳು. ಇವರಿಂದ 2 ಫಾರ್ಚೂನರ್, 1 ವೋಲ್ವೋ, 1 ಇನ್ನೋವಾ, ಫೋರ್ಡ್ ಹಾಗೂ ಸ್ವಿಫ್ಟ್ ಸೇರಿದಂತೆ ಒಟ್ಟು 7 ಕಾರುಗಳನ್ನು ಜಪ್ತಿ ಮಾಡಲಾಗಿದೆ.

ವಂಚನೆಯ ಜಾಲ ಹೇಗಿತ್ತು?

ಬಂಧಿತ ಆರೋಪಿಗಳು ಕಾರು ಬ್ರೋಕರ್ ಕೆಲಸದ ನೆಪದಲ್ಲಿ ವಂಚನೆಗೆ ಇಳಿಯುತ್ತಿದ್ದರು. 40 ರಿಂದ 50 ಲಕ್ಷ ರೂಪಾಯಿ ಮೌಲ್ಯದ ಕಾರುಗಳನ್ನು ಅಡವಿಟ್ಟು 4-5 ಲಕ್ಷ ರೂಪಾಯಿ ಸಾಲ ಪಡೆಯುವ ಆಟೋಮೊಬೈಲ್ ಮಾಲೀಕರನ್ನು ಈ ಜಾಲ ಟಾರ್ಗೆಟ್ ಮಾಡುತ್ತಿತ್ತು. ಮಾಲೀಕರು ಕಾರು ಅಡಮಾನವಿಟ್ಟ ತಕ್ಷಣ, ಆ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಅಥವಾ ಒರಿಜಿನಲ್ ಆರ್‌ಸಿ (RC) ಕಾರ್ಡ್ ಟ್ಯಾಂಪರ್ ಮಾಡಿ ಹೆಸರು ಬದಲಾಯಿಸುತ್ತಿದ್ದರು.

ಬಳಿಕ, ಹೆಸರು ಬದಲಾಯಿಸಿದ ನಕಲಿ ದಾಖಲೆಗಳೊಂದಿಗೆ ಮತ್ತೊಬ್ಬ ಡೀಲರ್ ಬಳಿ ಹೋಗಿ, 4-5 ಲಕ್ಷಕ್ಕೆ ಅಡಮಾನವಿದ್ದ ಕಾರನ್ನು 20 ರಿಂದ 25 ಲಕ್ಷ ರೂಪಾಯಿಗೆ ಮತ್ತೆ ಅಡ ಇಡುತ್ತಿದ್ದರು. ಬಂದ ಹಣದಲ್ಲಿ ಮೂಲ ಮಾಲೀಕರಿಗೆ 4-5 ಲಕ್ಷ ನೀಡಿ ಕಾರು ಬಿಡಿಸಿಕೊಂಡು, ಅದನ್ನು ಮತ್ತೆ ಬೇರೊಬ್ಬರಿಗೆ ಅಡಮಾನವಿಡುತ್ತಿದ್ದರು. ಹೀಗೆ ಸರಣಿಯಾಗಿ ಹಲವರಿಗೆ ಅಡಮಾನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದರು.

ಪೊಲೀಸರಿಗೆ ಸವಾಲಾದ ‘ಮೂಲ ಮಾಲೀಕರು’

ಆರೋಪಿಗಳು ಸೃಷ್ಟಿಸಿದ್ದ ನಕಲಿ ದಾಖಲೆಗಳು ಮತ್ತು ಸರಣಿ ಅಡಮಾನ ಪ್ರಕ್ರಿಯೆಯಿಂದಾಗಿ, ಜಪ್ತಿಯಾಗಿರುವ ಕಾರುಗಳ ನಿಜವಾದ ಮೂಲ ಮಾಲೀಕರು ಯಾರು ಎಂಬುದನ್ನು ಪತ್ತೆಹಚ್ಚುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ತಮ್ಮ ಕಾರನ್ನು ಪಡೆದು ವಾಪಸ್ ನೀಡದೆ ವಂಚಿಸಲಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಆಡುಗೋಡಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ