AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿ, ದಂಡ ಬಾಕಿ ಉಳಿಸಿಕೊಂಡು ಓಡಾಡುವಂತ್ತಿಲ್ಲ: ಏಕೆ ಗೊತ್ತಾ?

ಬೆಂಗಳೂರು ಸಂಚಾರ ಪೊಲೀಸರು ಮತ್ತು ಕಾರ್ಸ್24 ಸಹಯೋಗದೊಂದಿಗೆ ಎಐ ಆಧಾರಿತ ಬಿಲ್‌ಬೋರ್ಡ್‌ಗಳನ್ನು ನಗರದಲ್ಲಿ ಅಳವಡಿಸಲಾಗಿದೆ. ಈ ಬಿಲ್‌ಬೋರ್ಡ್‌ಗಳು ವಾಹನಗಳ ನೋಂದಣಿ ಸಂಖ್ಯೆಯನ್ನು ಸ್ಕ್ಯಾನ್ ಮಾಡಿ, ಬಾಕಿ ಇರುವ ದಂಡ, ಪಿಯುಸಿ ಮುಂತಾದ ಮಾಹಿತಿಯನ್ನು ರಿಯಲ್ ಟೈಮ್‌ನಲ್ಲಿ ಪ್ರದರ್ಶಿಸುತ್ತದೆ. ಇದು ಸಂಚಾರ ನಿಯಮ ಉಲ್ಲಂಘನೆ ತಡೆಯಲು ಮತ್ತು ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ.

ಬೆಂಗಳೂರಲ್ಲಿ ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿ, ದಂಡ ಬಾಕಿ ಉಳಿಸಿಕೊಂಡು ಓಡಾಡುವಂತ್ತಿಲ್ಲ: ಏಕೆ ಗೊತ್ತಾ?
ಎಐ ಆಧಾರಿತ ಬಿಲ್‍ಬೋರ್ಡ್
ಗಂಗಾಧರ​ ಬ. ಸಾಬೋಜಿ
|

Updated on:Sep 25, 2025 | 10:49 AM

Share

ಬೆಂಗಳೂರು, ಸೆಪ್ಟೆಂಬರ್​ 25: ಸಿಲಕಾನ್​ ಸಿಟಿ, ಉದ್ಯಾನ ನಗರಿ ಬೆಂಗಳೂರು (bangaluru) ಸಂಚಾರ ದಟ್ಟಣೆ ನಗರವೆಂದು ಹೇಳಲಾಗುತ್ತದೆ. ಟ್ರಾಫಿಕ್​ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ. ಟ್ರಾಫಿಕ್​ ಸಮಸ್ಯೆ ಪರಿಹರಿಸಲು ಬೆಂಗಳೂರು ಸಂಚಾರ ಪೊಲೀಸರು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿರುತ್ತಾರೆ. ಈಗಾಗಲೇ ನಗರದಲ್ಲಿ ಅಳವಡಿಸಿರುವ ಎಐ ಆಧಾರಿತ ಕ್ಯಾಮೆರಾಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಕಣ್ಣಿಟ್ಟಿದೆ. ಆದರೆ ಇದೀಗ ಅದಕ್ಕೂ ಒಂದು ಹೆಜ್ಜೆ ಮುಂದೆ ಎನ್ನುವಂತೆ ಎಐ ಆಧಾರಿತ ಬಿಲ್‍ಬೋರ್ಡ್​ಗಳು (AI-powered billboard) ಬಂದಿವೆ. ಈ ಬಿಲ್‍ಬೋರ್ಡ್​ ರಿಯಲ್ ಟೈಮ್‌ನಲ್ಲಿ ನಿಮ್ಮ ವಾಹನದ ನಿಯಮ ಉಲ್ಲಂಘನೆ ಸೇರಿದಂತೆ ಬಾಕಿ ದಂಡದ ಮಾಹಿತಿಯನ್ನು ಡಿಸ್‌ಪ್ಲೇ ಮಾಡುತ್ತದೆ.

ಬೆಂಗಳೂರು ಸಂಚಾರ ಪೊಲೀಸರು ತಂತ್ರಜ್ಞಾನಗಳನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತೊಂದು ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಅದುವೇ ಎಐ ಆಧಾರಿತ ಡಿಜಿಟಲ್ ಜಾಹೀರಾತು ಫಲಕ ಅಥವಾ ಬಿಲ್‍ಬೋರ್ಡ್.

ಇದನ್ನೂ ಓದಿ: ಬೆಂಗಳೂರಿನ ಸುತ್ತಮುತ್ತಲಿನ ಜನರಿಗೆ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ ಅಕ್ಕಪಕ್ಕದ ಜಿಲ್ಲೆಗಳಿಗೂ ಬಸ್​ ಸಂಚಾರ

ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಕಾರ್ಸ್ 24 ಸಹಯೋಗದಲ್ಲಿ ನಗರದ ಅತ್ಯಂತ ವಾಹನ ಸಂಚಾರ ಹೊಂದಿರುವ ಪ್ರದೇಶಗಳಲ್ಲಿ ಒಂದಾದ ಟ್ರಿನಿಟಿ ಸರ್ಕಲ್​ನಲ್ಲಿ ಈ ಎಐ ಆಧಾರಿತ ಡಿಜಿಟಲ್ ಜಾಹೀರಾತು ಫಲಕವನ್ನು ಅಳವಡಿಸಲಾಗಿದೆ. ಈ ವೃತ್ತದಿಂದ ಹಾದುಹೋಗುವ ವಾಹನಗಳ ಸಂಚಾರ ಉಲ್ಲಂಘನೆ ಸೇರಿದಂತೆ ಬಾಕಿ ದಂಡದ ಮಾಹಿತಿಯನ್ನು ಡಿಸ್‌ಪ್ಲೇ ಮಾಡುತ್ತದೆ.

ಹೇಗೆ ಕೆಲಸ ಮಾಡುತ್ತದೆ?

ಈ ಬಿಲ್‍ಬೋರ್ಡ್ ಅತ್ಯಾಧುನಿಕ ಎಐ ಆಧಾರಿತ ಕ್ಯಾಮೆರಾಗಳನ್ನು ಹೊಂದಿದ್ದು, ನೂರು ಮೀಟರ್​​​ ದೂರದಿಂದಲೇ ವಾಹನಗಳ ನೋಂದಣಿ ಸಂಖ್ಯೆಯನ್ನು ಸ್ಕ್ಯಾನ್ ಮಾಡುತ್ತದೆ. ಕ್ಷಣ ಮಾತ್ರದಲ್ಲೇ ಇದು ರಾಷ್ಟ್ರೀಯ ವಾಹನ್ ಡೇಟಾಬೇಸ್‌ನಿಂದ ನಿಮ್ಮ ವಾಹನದ ಇಡೀ ಜಾತಕವನ್ನು ನೀಡುತ್ತದೆ. ಅಂದರೆ ಬಾಕಿ ಇರುವ ಯಾವುದೇ ಇ-ಚಲನ್‌ ಆಗಿರಬಹುದು, ಅವಧಿ ಮೀರಿದ ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರ ಅಥವಾ ಇತರ ಸಂಚಾರ ನಿಮಯ ಉಲ್ಲಂಘನೆಗಳನ್ನು ನೇರವಾಗಿ ಪರದೆಯ ಮೇಲೆ ಡಿಸ್‌ಪ್ಲೇ ಮಾಡುವ ಮೂಲಕ ಜಗಜ್ಜಾಹೀರು ಮಾಡಲಿದೆ. ಈ ಕುರಿತಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಇದನ್ನೂ ಓದಿ: Viral: ಬೆಂಗಳೂರಿನ ಈ ಭಾಗದಲ್ಲೇ ಟ್ರಾಫಿಕ್​​ ಹೆಚ್ಚು, ವೈರಲ್ ಆಯ್ತು ಪೋಸ್ಟ್

ಬೆಂಗಳೂರು ಸಂಚಾರ ಪೊಲೀಸರ ಈ ನೂತನ ಪ್ರಯೋಗವು ವಾಹನ ಚಾಲಕರಲ್ಲಿ ಜಾಗೃತಿಯೊಂದಿಗೆ ದಂಡ ಪಾವತಿಸಲು ಪ್ರೇರೇಪಿಸಲಿದೆ. ಅಷ್ಟೇ ಅಲ್ಲದೆ ಅವರಲ್ಲಿ ಜವಾಬ್ದಾರಿಯನ್ನು ಮೂಡಿಸಲಿದೆ. ಈ ಉಪಕ್ರಮದ ಬಗ್ಗೆ ಕಾರ್ಸ್24 ನ ಸಹ-ಸಂಸ್ಥಾಪಕ ಮತ್ತು ಮುಖ್ಯ ಮಾರುಕಟ್ಟೆ ಅಧಿಕಾರಿ ಗಜೇಂದ್ರ ಜಂಗಿಡ್​ ಮಾತನಾಡಿದ್ದು, ನಾವು ವಾಹನ ಸವಾರರಿಗೆ ಬಾಕಿ ದಂಡ ಪಾವತಿಸುವುದನ್ನು ನೆನಪಿಸುವುದಲ್ಲದೆ, ಸಂಚಾರ ನಿಯಮದ ಬಗ್ಗೆಯೂ ತಿಳಿಹೇಳುತ್ತಿದ್ದೇವೆ. ಈ ಚಿಕ್ಕ ಪ್ರಯತ್ನ ಜೀವನಾಡಿಗೆ ಕೊಡುಗೆ ನೀಡುತ್ತದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 am, Thu, 25 September 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!