AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಆತಂಕ ಸೃಷ್ಟಿಸಿತು. ವಿಮಾನದ ಶೌಚಾಲಯದಲ್ಲಿ ಪತ್ತೆಯಾದ ಟಿಷ್ಯೂ ಪೇಪರ್‌ನಲ್ಲಿ ಬಾಂಬ್ ಸಂದೇಶವಿತ್ತು. 183 ಪ್ರಯಾಣಿಕರನ್ನು ಸ್ಥಳಾಂತರಿಸಿದ ನಂತರ, ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!
ನವೀನ್ ಕುಮಾರ್ ಟಿ
| Edited By: |

Updated on: Apr 05, 2026 | 2:14 PM

Share

ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ

ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.

ವಿಮಾನದ ಶೌಚಾಯಲದಲ್ಲಿ ಬಾಂಬ್ ಇದೆ ಎಂದು ಟಿಷ್ಯೂ ಪೇಪರ್‌ನಲ್ಲಿ ಬೆದರಿಕೆ ಸಂದೇಶ ಬರೆದಿರುವುದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲೆ ಒಬ್ಬರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ