AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತು ಹಲವಾರು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಕಳೆದ ಒಂದು ವಾರದಲ್ಲಿ 10 ಬಾರಿ ಬೆದರಿಕೆಗಳು ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ವೆಬ್‌ಸೈಟ್ ಮತ್ತು ಎಕ್ಸ್ ಖಾತೆಗಳ ಮೂಲಕ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: |

Updated on: Oct 28, 2024 | 1:41 PM

Share

ಬೆಂಗಳೂರು, ಅಕ್ಟೋಬರ್​ 28: ಬೆಂಗಳೂರು ಗ್ರಾಮಾಂತರ (Bengaluru) ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಮತ್ತು ವಿಮಾನಕ್ಕೆ ಬಾಂಬ್​ ಬೆದರಿಕೆ ಸಂದೇಶ (Bomb Threat) ಕಳುಹಿಸಿದ ಆರೋಪಿಗಳ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ​​ಪೊಲೀಸ್ ಠಾಣೆಯಲ್ಲಿ 10 ಕೇಸ್​ ದಾಖಲಾಗಿವೆ. ಕಳೆದ ಒಂದು ವಾರದಲ್ಲಿ 10 ಬಾರಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಕಿಡಿಗೇಡಿಗಳು ಅಕ್ಟೋಬರ್​ 22 ರಿಂದ 26ರವರೆಗೆ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.

ಕಿಡಿಗೇಡಿಗಳು ವೆಬ್​​ಸೈಟ್​ ಮತ್ತು ಎಕ್ಸ್ ಖಾತೆ ಮುಖಾಂತರ ವಿಮಾನ ನಿಲ್ದಾಣ ಮತ್ತು ಇಂಡಿಗೋ ಏರ್​ಲೈನ್ಸ್​​ ಸೇರಿದಂತೆ ಹಲವು ಏರ್​ಲೈನ್ಸ್​ಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ದೇವನಹಳ್ಳಿ ಎಸಿಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಬೆಂಗಳೂರು ಟು ಅಯೋಧ್ಯೆ ವಿಮಾನಕ್ಕೆ ಬಾಂಬ್​ ಬೆದರಿಕೆ

ಅಕ್ಟೋಬರ್​ 27 ರಂದು ಬೆಂಗಳೂರಿನಿಂದ ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಕಿಡಿಗೇಡಿಗಳು ಬಾಂಬ್​ ಬೆದರಿಕೆ ಸಂದೇಶ ಕಳುಹಿಸಿದ್ದರು. ಬಾಂಬ್​ ಬೆದರಿಕೆ ಸಂದೇಶ ಬರುತ್ತಿದ್ದಂತೆ ವಿಮಾನ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಬಾಂಬ್​ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್​ ಬೆದರಿಕೆ ಎಂದು ಖಾತರಿಯಾಗಿದೆ.

ಇದನ್ನೂ ಓದಿ: ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್​

ಮುಂಬೈ ಬೆಂಗಳೂರು ವಿಮಾನಕ್ಕೆ ಬಾಂಬ್​ ಬೆದರಿಕೆ

ಅಕ್ಟೋಬರ್​ 22 ರಂದು ಮುಂಬೈಯಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಮುಂಬೈ-ಬೆಂಗಳೂರು ವಿಮಾನ ಸೇರಿದಂತೆ ಇಂಡಿಗೋ, ವಿಸ್ತಾರ ಏರ್​ಲೈನ್ಸ್​​, ಏರ್​ ಇಂಡಿಯಾದ ಸುಮಾರು 30 ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದವು. ಇದರಿಂದ ದೇಶದ ವಿಮಾನ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಮೂಡಿತ್ತು.

6 ವಿಮಾನಗಳಿಗೆ ಬಾಂಬ್​ ಬೆದರಿಕೆ

ಬೆಂಗಳೂರಿನಿಂದ ಹೊರಡುವ 6 ವಿಮಾನಗಳಲ್ಲಿ ತಲಾ ಇಬ್ಬರಂತೆ ಒಟ್ಟು 12 ಬಾಂಬರ್‌ಗಳಿದ್ದಾರೆ ಎಂದು ಅಕ್ಟೋಬರ್​ 20 ರಂದು ಅನಾಮಧೇಯ ಎಕ್ಸ್​ ಖಾತೆಯಿಂದ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಇಂಡಿಗೋ ಏರ್‌ಲೈನ್ಸ್‌ನ IX 233, IX 375, IX 481, IX 383, IX 549, IX 399 ವಿಮಾನಗಳಲ್ಲಿ ಬಾಂಬರ್‌ಗಳಿರುವುದಾಗಿ ಸಂದೇಶ ರವಾನಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ