AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 2024-25ನೇ ಹಣಕಾಸು ವರ್ಷದಲ್ಲಿ 41 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದಾರೆ. ಮತ್ತು 500,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಿ ಹೊಸ ದಾಖಲೆ ಬರೆದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಸರಕು ಸಾಗಣೆಯಲ್ಲಿಯೂ ದೊಡ್ಡ ಪ್ರಮಾಣದ ಬೆಳವಣಿಗೆ ಕಂಡುಬಂದಿದೆ. ಬೆಂಗಳೂರು ಜಾಗತಿಕವಾಗಿ ಪ್ರಮುಖ ವಿಮಾನಯಾನ ಕೇಂದ್ರಗಳಲ್ಲಿ ಒಂದಾಗಿ ಬದ್ಧತೆಯನ್ನು ಹೆಚ್ಚಿಸಿಕೊಂಡಿದೆ.

ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on:Apr 04, 2025 | 9:58 PM

ಬೆಂಗಳೂರು, ಏಪ್ರಿಲ್ 4: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು (Bengaluru) 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಮೂಲಕ, 2024-25ರ ಹಣಕಾಸು ವರ್ಷದಲ್ಲಿ 41 ದಶಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, 500,000 ಮೆಟ್ರಿಕ್ ಟನ್ (ಎಂಟಿ) ತೂಕದ ಸರಕುಗಳನ್ನು ಸಾಗಿಸಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳೆದ ಹಣಕಾಸು ವರ್ಷದಲ್ಲಿ 37.53 ದಶಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. 2024-25ರ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿ 41.88 ದಶಲಕ್ಷಕ್ಕೆ ತಲುಪಿದ್ದು, ಶೇ. 11.6ರಷ್ಟು ಹೆಚ್ಚಳವಾಗಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯು ಶೇ.10ರಷ್ಟು ಬೆಳವಣಿಗೆಯಾಗಿ 36.05 ದಶಲಕ್ಷ ತಲುಪಿದ್ದರೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯು ಶೇ.25ರಷ್ಟು ಹೆಚ್ಚಳವಾಗಿ, 5.83 ದಶಲಕ್ಷಕ್ಕೆ ಏರಿಕೆಯಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲು, ಇಂಡಿಗೋ ವಿಮಾನಯಾನ ಸಂಸ್ಥೆಯು ತನ್ನ ಜಾಗತಿಕ ಜಾಲವನ್ನು ವಿಸ್ತರಿಸಿರುವುದು ಪ್ರಮುಖ ಕಾರಣವಾಗಿದೆ. ಜೊತೆಗೆ, ಬೆಂಗಳೂರಿನಿಂದ ಲಂಡನ್ ಹೀಥ್ರೂಗೆ ದೈನಂದಿನ ಹೆಚ್ಚುವರಿ ವಿಮಾನ ಹಾರಾಟ, ಕ್ಯಾಥೆ ಪೆಸಿಫಿಕ್, ಕೆಎಲ್ಎಂ, ಜಪಾನ್ ಏರ್‌ಲೈನ್ಸ್, ಕ್ವಾಂಟಾಸ್ ಸೇರಿದಂತೆ ಹಲವು ವಿದೇಶಿ ವಿಮಾನಯಾನ ಸಂಸ್ಥೆಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒದಗಿಸುವ ವಿಮಾನ ಸೇವೆಯನ್ನು ಇನ್ನಷ್ಟು ಹೆಚ್ಚಿಸಿರುವುದು ಸಹ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯ ಹೆಚ್ಚಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
ಬೆಂಗಳೂರು ವಿಮಾನ ನಿಲ್ದಾಣ ಮಾಹಿತಿ, ವಿಮಾನ ವೇಳಾಪಟ್ಟಿ ಕನ್ನಡದಲ್ಲಿ ಪ್ರಕಟ
Image
ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ
Image
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಮುಡಿಗೆ ಮತ್ತೆರಡು ಪ್ರಶಸ್ತಿ
Image
ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸುವಂತೆ ಒತ್ತಾಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಸ್ಥಾನ ಪಡೆದುಕೊಂಡಿದೆ. 76 ದೇಶೀಯ ಮತ್ತು 33 ಅಂತಾರಾಷ್ಟ್ರೀಯ ತಾಣಗಳಿಗೆ ಬೆಂಗಳೂರಿನಿಂದ ತಡೆರಹಿತ ವಿಮಾನ ಸೇವೆ ಲಭ್ಯವಿದ್ದು, ಇದೇ ವರ್ಷದ ಮೇ ತಿಂಗಳಿನಿಂದ ವಿಯೆಟ್ನಾಂನ ಹನೋಯಿ ನಗರಕ್ಕೆ ಆರಂಭವಾಗಲಿರುವ ವಿಮಾನ ಸೇವೆಯು 34ನೇ ಅಂತಾರಾಷ್ಟ್ರೀಯ ತಾಣವಾಗಿ ಹೊರಹೊಮ್ಮಲಿದೆ.

500,000 ಮೆಟ್ರಿಕ್‌ ಟನ್ ದಾಟಿದ ಸರಕು ಸಾಗಣೆ

ಸರಕು ಸಾಗಣೆಯಲ್ಲಿಯೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ, 500,000 ಮೆಟ್ರಿಕ್ ಟನ್‌ಗಿಂತ ಹೆಚ್ಚು ಸರಕು ಸಾಗಣೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. 2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 502,480 ಮೆಟ್ರಿಕ್‌ ಟನ್ ಸರಕನ್ನು ಸಾಗಣೆ ಮಾಡಲಾಗಿದ್ದು, ವರ್ಷದಿಂದ ವರ್ಷಕ್ಕೆ ಗಮನಾರ್ಹವಾದ ಶೇ.14ರಷ್ಟು ಬೆಳವಣಿಗೆ ದಾಖಲಾಗುತ್ತಿದೆ.

ಈ ಪೈಕಿ, ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ಶೇ.21ರಷ್ಟು ಏರಿಕೆಯಾಗಿದ್ದು, ಒಟ್ಟು 321,418 ಮೆಟ್ರಿಕ್‌ ಟನ್ ಸರಕು ಸಾಗಿಸಲಾಗಿದೆ. ದೇಶೀಯ ಸರಕು ಸಾಗಣೆಯಲ್ಲಿ ಶೇ.4% ರಷ್ಟು ಏರಿಕೆಯಾಗಿದ್ದು, 181,062 ಮೆಟ್ರಿಕ್‌ ಟನ್ ತಲುಪಿದೆ. ಸತತ ನಾಲ್ಕನೇ ವರ್ಷ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೊಳೆತುಹೋಗುವ ಪದಾರ್ಥಗಳ ರಫ್ತಿನಲ್ಲಿ ಭಾರತದ ನಂ.1 ವಿಮಾನ ನಿಲ್ದಾಣವಾಗಿ ಹೊರಹೊಮ್ಮುವ ಮೂಲಕ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಇದು ದೇಶದ ಕೃಷಿ ಪೂರೈಕೆ ಸರಪಳಿಯನ್ನು ಬಲಪಡಿಸುವಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾತ್ರವನ್ನು ಒತ್ತಿ ಹೇಳುತ್ತದೆ.

ಜೊತೆಗೆ, ವಿಮಾನ ನಿಲ್ದಾಣವು ಮಾವು ಮತ್ತು ಕೊತ್ತಂಬರಿ ಸೊಪ್ಪಿನ ರಫ್ತಿನಲ್ಲಿ ಮುನ್ನಡೆ ಸಾಧಿಸಿದ್ದು, ಸಿದ್ಧ ಉಡುಪುಗಳು, ಔಷಧಗಳು ಮತ್ತು ಯಂತ್ರೋಪಕರಣಗಳ ಭಾಗಗಳ ಸಾಗಣೆಯಲ್ಲೂ ಹೆಚ್ಚಳವಾಗಿದೆ. ಸರಕು ಸಾಗಣೆಗೆ ಮೀಸಲಾದ 12 ವಿಮಾನಯಾನ ಸಂಸ್ಥೆಗಳ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬೆಂಗಳೂರಿನಿಂದ ಸಿಂಗಾಪುರ, ಲಂಡನ್, ಫ್ರಾಂಕ್‌ಫರ್ಟ್, ಚಿಕಾಗೊ ಮತ್ತು ಮಸ್ಕತ್‌ನಂತಹ ಪ್ರಮುಖ ರಫ್ತು ಕೇಂದ್ರಿತ ನಗರಗಳನ್ನು ಸಂಪರ್ಕಿಸುತ್ತದೆ. ಶೆನ್ಜೆನ್, ಸಿಂಗಾಪುರ್, ಶಾಂಘೈ, ಹಾಂಗ್ ಕಾಂಗ್ ಮತ್ತು ಫ್ರಾಂಕ್‌ಫರ್ಟ್‌ ನಗರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸರಕುಗಳು ಆಮದಾಗುವ ಪ್ರಮುಖ ತಾಣಗಳಾಗಿವೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಮಾತನಾಡಿ,”ಬೆಂಗಳೂರು ಮತ್ತು ಭಾರತದಲ್ಲಿ ವಾಯುಯಾನದ ಬೆಳವಣಿಗೆಯ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ದಕ್ಷಿಣ ಮತ್ತು ಮಧ್ಯ ಭಾರತದ ಹೆಬ್ಬಾಗಿಲಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ವಾಯುಯಾನ ಪ್ರದೇಶ, ಲ್ಯಾಂಡ್‌ಸೈಡ್ ಮತ್ತು ಟರ್ಮಿನಲ್ ಸಾಮರ್ಥ್ಯಗಳ ವಿಸ್ತರಣೆಗೆ ಇನ್ನಷ್ಟು ಹೂಡಿಕೆ ಹೆಚ್ಚಿಸುವತ್ತ ಗಮನಹರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 17,000 ಕೋಟಿಗಿಂತಲೂ ಹೆಚ್ಚು ಹೂಡಿಕೆಯೊಂದಿಗೆ, ಈ ಪ್ರದೇಶದಲ್ಲಿ ಪ್ರಯಾಣಿಕರು ಮತ್ತು ಸರಕು ಸಾಗಣೆಯ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ನಾವು ಸಿದ್ಧರಾಗಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಗಮನಾರ್ಹವಾದ ಬೆಳವಣಿಗೆ ಸಾಧಿಸುತ್ತಿದ್ದು, ಸಾಧನೆಗಳತ್ತ ಮುನ್ನುಗ್ಗುತ್ತಿದೆ. ಈ ಮೂಲಕ, ಜಾಗತಿಕವಾಗಿ ಪ್ರಮುಖ ವಿಮಾನಯಾನ ಕೇಂದ್ರಗಳಲ್ಲಿ ಒಂದಾಗಿ ಬದ್ಧತೆಯನ್ನು ಹೆಚ್ಚಿಸಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Fri, 4 April 25

ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ