AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್ ಪ್ರಯಾಣಿಕರೇ ಎಚ್ಚರ: ಬೆಂಗಳೂರಿನಲ್ಲಿ ರೈಡರ್‌ಗಳ ವಂಚಿಸಲು ನಕಲಿ ಕ್ಯಾಬ್ ಆ್ಯಪ್ ಬಳಸ್ತಿದ್ದಾರೆ ಚಾಲಕರು!

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ಕೆಲವು ಕ್ಯಾಬ್ ಚಾಲಕರು ಪ್ರಯಾಣಿಕರನ್ನು ವಂಚಿಸಲು ನಕಲಿ ಮೊಬೈಲ್ ಆ್ಯಪ್‌ಗಳನ್ನು ಬಳಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜನಪ್ರಿಯ ರೈಡ್ ಆ್ಯಪ್‌ಗಳ ಇಂಟರ್‌ಫೇಸ್ ಅನ್ನೇ ಹೋಲುವ ಈ ನಕಲಿ ಆ್ಯಪ್‌ಗಳ ಮೂಲಕ ದುಪ್ಪಟ್ಟು ದರ ಸೃಷ್ಟಿಸಿ ಹಣ ಸುಲಿಗೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಏರ್‌ಪೋರ್ಟ್ ಪ್ರಯಾಣಿಕರೇ ಎಚ್ಚರ: ಬೆಂಗಳೂರಿನಲ್ಲಿ ರೈಡರ್‌ಗಳ ವಂಚಿಸಲು ನಕಲಿ ಕ್ಯಾಬ್ ಆ್ಯಪ್ ಬಳಸ್ತಿದ್ದಾರೆ ಚಾಲಕರು!
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jun 20, 2026 | 8:46 AM

Share

ಬೆಂಗಳೂರು, ಜೂನ್ 20: ಬೆಂಗಳೂರಿನ (Bengaluru) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಆವರಣದಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಹೊಸ ಮಾದರಿಯ ವಂಚನೆ ಜಾಲವೊಂದು ಸಕ್ರಿಯವಾಗಿರುವುದಾಗಿ ವರದಿಯಾಗಿದೆ. ಓಲಾ, ಉಬರ್ ಮತ್ತು ರ‍್ಯಾಪಿಡೋ ನಂತಹ ಪ್ರಮುಖ ರೈಡ್ ಬುಕಿಂಗ್ ಆ್ಯಪ್‌ಗಳ ರೀತಿಯೇ ಕಾಣುವ ನಕಲಿ ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೆಲವು ಚಾಲಕರು ಬಳಸುತ್ತಿದ್ದು, ಪ್ರಯಾಣದ ಕೊನೆಯಲ್ಲಿ ಗ್ರಾಹಕರಿಗೆ ದುಪ್ಪಟ್ಟು ದರದ ಬಿಲ್ ತೋರಿಸಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮುಖ್ಯಾಂಶಗಳು

  • ನಕಲಿ ಆ್ಯಪ್ ಬಳಸಿ ದುಪ್ಪಟ್ಟು ದರ ವಸೂಲಿ.
  • ಏರ್‌ಪೋರ್ಟ್ ಪ್ರಯಾಣಿಕರೇ ವಂಚಕರ ಮುಖ್ಯ ಟಾರ್ಗೆಟ್.
  • ರ‍್ಯಾಪಿಡೋ ಹಾಗೂ ಉಬರ್ ಸಂಸ್ಥೆಗಳಿಂದ ತನಿಖೆ.

400 ರಿಂದ 700 ರೂ.ವರೆಗೆ ಹೆಚ್ಚುವರಿ ವಸೂಲಿ

ಇತ್ತೀಚೆಗೆ ವಿಮಾನ ನಿಲ್ದಾಣದಿಂದ ಮಲ್ಲೇಶ್ವರಂಗೆ ರ‍್ಯಾಪಿಡೋ ಮೂಲಕ ಪ್ರಯಾಣಿಸಿದ ಪ್ರತೀಕ್ ಎನ್ (38) ಎಂಬ ಪ್ರಯಾಣಿಕರು ಈ ವಂಚನೆಗೆ ಒಳಗಾಗಿದ್ದಾರೆ. ಅವರ ಆ್ಯಪ್‌ನಲ್ಲಿ 720 ರೂ. ದರ ತೋರಿಸಿದ್ದರೆ, ಚಾಲಕನ ಫೋನ್‌ನಲ್ಲಿದ್ದ ನಕಲಿ ಆ್ಯಪ್‌ನಲ್ಲಿ ಬರೋಬ್ಬರಿ 1,110 ರೂ. ಬಿಲ್ ತೋರಿಸಿತ್ತು. ವಿಮಾನ ನಿಲ್ದಾಣದ ಪಾರ್ಕಿಂಗ್ ಶುಲ್ಕ ಹೆಚ್ಚಳ ಹಾಗೂ ಟ್ರಾಫಿಕ್ ನೆಪ ಒಡ್ಡಿ ಚಾಲಕ ಹೆಚ್ಚುವರಿ ಹಣ ವಸೂಲಿ ಮಾಡಿದ್ದಾಗಿ ಪ್ರತೀಕ್ ದೂರಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ.

ಇದೇ ರೀತಿ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ಉಬರ್ ಕ್ಯಾಬ್ ಬುಕ್ ಮಾಡಿದ್ದ ಮತ್ತೊಬ್ಬ ಪ್ರಯಾಣಿಕನಿಗೆ 1,330 ರೂ. ಬದಲಾಗಿ 2,000 ರೂಪಾಯಿಗೂ ಅಧಿಕ ದರ ತೋರಿಸಿ ವಂಚಿಸಲು ಯತ್ನಿಸಲಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ವಂಚನೆ ಜಾಲದ ಅಸಲಿ ತಂತ್ರ ಏನು?

ಈ ನಕಲಿ ಆ್ಯಪ್ ದೋಖಾ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಕರ್ನಾಟಕ ಚಾಲಕರ ಒಕ್ಕೂಟದ ಅಧ್ಯಕ್ಷ ಜಿ. ನಾರಾಯಣಸ್ವಾಮಿ ಬಿಚ್ಚಿಟ್ಟಿದ್ದಾರೆ. ಚಾಲಕರು ಮೊದಲು ಸಾಮಾನ್ಯ ಆ್ಯಪ್‌ನಲ್ಲಿ ರೈಡ್ ಬುಕ್ ಮಾಡಿಕೊಂಡು, ಗ್ರಾಹಕರಿಂದ ಒಟಿಪಿ (OTP) ಪಡೆದು ರೈಡ್ ಸ್ಟಾರ್ಟ್ ಮಾಡುತ್ತಾರೆ. ಇದೇ ವೇಳೆ ತಮ್ಮ ಫೋನ್‌ನಲ್ಲಿರುವ ಮತ್ತೊಂದು ನಕಲಿ ಆ್ಯಪ್ ಅನ್ನೂ ರನ್ ಮಾಡುತ್ತಾರೆ. ಈ ನಕಲಿ ಆ್ಯಪ್‌ಗಳ ವಿನ್ಯಾಸ ತದ್ರೂಪು ಉಬರ್ ಅಥವಾ ರ‍್ಯಾಪಿಡೋದಂತೆಯೇ ಇರುತ್ತದೆ. ಇನ್ನು ಕೆಲವರು ಮೊದಲೇ ಎಡಿಟ್ ಮಾಡಿಟ್ಟುಕೊಂಡ ಹೆಚ್ಚಿನ ದರದ ನಕಲಿ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ಜನರನ್ನು ನಂಬಿಸುತ್ತಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಯೂನಿಯನ್ ವತಿಯಿಂದ ಚಾಲಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.

ಅನುಮಾನ ಬಂದರೆ ಪ್ರಯಾಣಿಕರು ಏನು ಮಾಡಬೇಕು?

ಈ ಕುರಿತು ಪ್ರತಿಕ್ರಿಯಿಸಿರುವ ರ‍್ಯಾಪಿಡೋ ವಕ್ತಾರರು, ಇಂತಹ ದೂರುಗಳು ಕೇವಲ ವಿಮಾನ ನಿಲ್ದಾಣಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದಿದ್ದಾರೆ. ದೂರು ಬಂದ ತಕ್ಷಣ ತನಿಖೆ ನಡೆಸಿ ಗ್ರಾಹಕರಿಗೆ ಹಣ ಮರುಪಾವತಿ ಮಾಡಲಾಗುತ್ತಿದ್ದು, ವಂಚಕ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಗ್ರಾಹಕರು ತಮ್ಮದೇ ಮೊಬೈಲ್ ಸ್ಕ್ರೀನ್ ಮೇಲೆ ಕಾಣಿಸುವ ದರವನ್ನು ಮಾತ್ರ ಪಾವತಿಸಬೇಕು ಎಂದು ಮನವಿ ಮಾಡಿದ್ದಾರೆ. ಉಬರ್ ಸಂಸ್ಥೆಯು ಸಹ ಪ್ರಯಾಣಿಕರು ಇಂತಹ ದರ ವ್ಯತ್ಯಾಸಗಳು ಕಂಡುಬಂದಲ್ಲಿ ತಕ್ಷಣವೇ ಅಪ್ಲಿಕೇಶನ್‌ನಲ್ಲಿರುವ 24×7 ಹೆಲ್ಪ್‌ಲೈನ್ ಮೂಲಕ ಕೇವಲ 30 ಸೆಕೆಂಡುಗಳಲ್ಲಿ ನೆರವು ಪಡೆಯಬಹುದು ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ

ವಿಮಾನ ನಿಲ್ದಾಣದ ಆಪರೇಟರ್ (BIAL) ಸಂಸ್ಥೆಯು ಸಾರ್ವಜನಿಕರು ಕೇವಲ ಅಧಿಕೃತ 8 ಕ್ಯಾಬ್ ಪಾಲುದಾರರ ಸೇವೆಗಳನ್ನು ಮಾತ್ರ ಬಳಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?